ರಸ್ತೆ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ

ಪುರಸಭೆ ಆಸ್ತಿಗೆ ನಿವೇಶನ ರಹಿತರ ಕನ್ನ ಮಾಯವಾದ ಕನ್ಸರ್‌ವೆನ್ಸಿ ರಸ್ತೆಗಳು

Team Udayavani, Jul 17, 2019, 1:23 PM IST

17-July-28

ಕಡೂರು: ಬೀರೂರು ಪಟ್ಟಣದ ಹೊಸಳಮ್ಮ ಬಡಾವಣೆಯ ರಸ್ತೆ ಜಾಗದಲ್ಲಿ ಖಾಸಗಿಯವರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು.

ಕಡೂರು: ಬೀರೂರು ಪುರಸಭೆ ವ್ಯಾಪ್ತಿಗೆ ಸಂಬಂಧಪಟ್ಟ ಅನೇಕ ಖಾಲಿ ನಿವೇಶನಗಳು ಮತ್ತು ರಸ್ತೆಗಳು ಕಾಣೆಯಾಗುತ್ತಿದ್ದು, ನಿವೇಶನಗಳ ಬಗ್ಗೆ ಮಾಹಿತಿ ತಿಳಿದೂ ತಿಳಿಯದಂತೆ ವರ್ತಿಸುತ್ತಿರುವ ಪುರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೀರೂರಿನ ಹೊಸಳಮ್ಮ ಬಡಾವಣೆಯಲ್ಲಿ ಭವಿಷ್ಯದಲ್ಲಿ ರಸ್ತೆ ಮಾಡುವ ಉದ್ದೇಶದಿಂದ ಕನ್ಸರ್‌ವೆನ್ಸಿ ರಸ್ತೆಯೆಂದು ಘೋಷಣೆ ಮಾಡಲಾಗಿದ್ದ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರವಾಗಿ ಮನೆ ನಿರ್ಮಿಸುತ್ತಿದ್ದಾರೆ.

ಪಟ್ಟಣ ವ್ಯಾಪ್ತಿಯಲ್ಲಿ ಅದೆಷ್ಟೋ ರಸ್ತೆಗಳು ಮತ್ತು ಪುರಸಭೆ ನಿವೇಶನಗಳು ಕಾಣೆಯಾಗುತ್ತಿವೆ. ಇಂದು ನೋಡಿದ ಜಾಗ ನಾಳೆ ಇರಲ್ಲ ಅನ್ನುವಂತಾಗಿದೆ. ಬೇರೆಯರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿರುವವರೇ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ ಎನ್ನಲಾಗುತ್ತದೆ.

ಪುರಸಭೆಯ ಸಾರ್ವಜನಿಕ ಆಸ್ತಿಯನ್ನು ಉಳಿಸುವ ಗೋಜಿಗೆ ಹೋಗದೆ ಪುರಸಭೆ ಕಣ್ಮುಚ್ಚಿ ಕುಳಿತಿದೆ. ನಿವೇಶನಗಳ ಕಬಳಿಕೆಯಲ್ಲಿ ಪುರಸಭೆ ಪಾತ್ರದ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ.

ಇಂತಹ ಹಲವು ನಿವೇಶನ ಹಾಗೂ ಕನ್ಸರ್‌ವೆನ್ಸಿ ರಸ್ತೆಗಳು ಉಳ್ಳವರ ಪಾಲಾಗುತ್ತಿವೆ. ಪುರಸಭೆ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸುತ್ತಿದ್ದರೆ ಅಧಿಕಾರಿಗಳು ತಮಗೇನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಅಚ್ಚರಿ ಮೂಡಿಸಿದೆ.

ಹಣ ಬಲ ಅಥವಾ ರಾಜಕೀಯ ಹಿನ್ನೆಲೆಯಿಲ್ಲದ ಕಟ್ಟಡ ಪರವಾನಗಿ ಪಡೆಯದ ಕಟ್ಟಡಗಳಿಗೆ ಅಧಿಕಾರಿಗಳು ಮುತ್ತಿಗೆ ಹಾಕಬಹುದು ಅಥವಾ ಕೆಲಸಕ್ಕೆ ತಡೆ ಒಡ್ಡಬಹುದು. ಆದರೆ, ರಾಜಕೀಯ ಪ್ರಭಾವ ಹೊಂದಿ ಯಾವುದೇ ಪರವಾನಗಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಹಲವು ಸದಸ್ಯರ ಕುಮ್ಮಕ್ಕು ಕಾರಣ ಎನ್ನುವುದು ನಾಗರಿಕರ ಗುಮಾನಿ. ಇದೆಲ್ಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಮ್ಮುಖದಲ್ಲೇ ನಡೆದರೂ ಯಾರೂ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ ಪುರಸಭೆ ಗಮನಕ್ಕೆ ಬಂದರೂ ಯಾವುದೇ ಕ್ರಮ ವಹಿಸಿಲ್ಲ. ಪುರಸಭೆ ಇನ್ನಾದರೂ ಹೆಚ್ಚೆತ್ತು ಸಾರ್ವಜನಿಕ ಆಸ್ತಿಯನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಜಿಲ್ಲಾಡಳಿತ ಸ್ಥಳ ಪರಿಶೀಲನೆ ನಡೆಸುವಂತೆ ಪುರಸಭೆಗೆ ನಿರ್ದೇಶಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.