ದೊಡ್ಡ ಕಾಡನೂರು ಕೃಷಿ ಪತ್ತಿನ ಸಂಘದಲ್ಲಿ ಅವ್ಯವಹಾರ

ರೈತರಿಗೆ ಮಾಹಿತಿ ನೀಡದೇ ಅವರ ಪಹಣಿಯ ಆಧಾರದ ಮೇಲೆ ಸಾಲ ಪಡೆದ ವಂಚನೆ

Team Udayavani, Jul 17, 2019, 3:24 PM IST

hasan-tdy-3..

ಹೊಳೆನರಸೀಪುರ ತಾಲೂಕಿನ ದೊಡ್ಡಕಾಡನೂರು ಗ್ರಾಮದ ಕೃಷಿಕರು ತಹಶೀಲ್ದಾರ್‌ಗೆ ದೂರು ನೀಡಿದರು.

ಹೊಳೆನರಸೀಪುರ: ತಾಲೂಕಿನ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ ಸಾಲ ನೀಡದೇ ರೈತರ ಕೃಷಿ ಭೂಮಿಯ ಪಹಣಿಯನ್ನು ಆಧಾರ ಮಾಡಿಕೊಂಡು ಲಕ್ಷಾಂತರ ರೂ. ಅವ್ಯವಹಾರ ಮಾಡಿದ ಪ್ರಕರಣ ತಾಲೂಕಿನ ದೊಡ್ಡಕಾಡನೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರೈತರಿಗೆ ಕೃಷಿ ಸಾಲ ಮಂಜೂರಾದರೆ ಸಾಲದ ಹಣವನ್ನು ಚೆಕ್‌ ನೀಡಬೇಕು ಅಥವಾ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು. ಆದರೆ ಯಾವೊಬ್ಬ ರೈತರ ಖಾತೆಗೂ ಹಣ ಜಮೆ ಆಗಿಲ್ಲ.

ಕಳೆದ 2018ರ ಜನವರಿಯಲ್ಲಿ ಗ್ರಾಮದ ಸುಬ್ಬಮ್ಮ ಚನ್ನಯ್ಯ, ಕರಿನಾಯ್ಕ ಚಿಕ್ಕನಾಯ್ಕ ಬೋರೇಗೌಡ ಅಂದಾನೇ ಗೌಡ, ಗಂಗಾಧರ ಅಂದಾನೇಗೌಡ, ಲಲಿತಮ್ಮ ಚಂದ್ರೇಶಗೌಡ, ದೇವಮ್ಮ ಅಮಾಸೇನಾಯ್ಕ, ಸಿದ್ದನಾಯ್ಕ ಅಂದಾನೇಗೌಡ, ರಾಜಮ್ಮ, ನಾಗಣ್ಣ, ಹಾಗೂ ಪುಟ್ಟಮ್ಮ ಪುಟ್ಟೇಗೌಡ ಅವರ ಪಹಣಿಯಲ್ಲಿ ತಲಾ ಐವತ್ತು ಸಾವಿರಕ್ಕೆ ಆಧಾರವಾಗಿದೆ ಎಂಬುದು ದಾಖಲಾಗಿದೆ.

ಈವಿಷಯ ಗಮನಕ್ಕೆ ಬಂದ ನಂತರ ರೈತರು ಕೃಷಿ ಪತ್ತಿನ ಬ್ಯಾಂಕಿಗೆ ಹೋಗಿ ವಿಚಾರಣೆ ಮಾಡಿದರೆ ದಾಖಲೆ ಪ್ರಕಾರ ನಿಮಗೆ ಸಾಲದ ಹಣ ತಲುಪಿಸಿರು ವುದಾಗಿ ಮಾಹಿತಿ ನೀಡುವ ಅಧಿಕಾರಿ ಗಳು ಈ ಪ್ರಕರಣದಲ್ಲಿ ಯಾರೊಬ್ಬರಿಗೂ ಸಾಲದ ಹಣವನ್ನು ನೀಡಿಲ್ಲ.

ತಹಶೀಲ್ದಾರ್‌ಗೆ ದೂರು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಕಾಡನೂರು ಗ್ರಾಮದ ಹತ್ತಾರು ಮಂದಿ ಮಂಗಳ ವಾರ ತಾಲೂಕು ಕಚೇರಿಗೆ ಆಗಮಿಸಿ ದೊಡ್ಡಕಾಡನೂರು ಕೃಷಿಪತ್ತಿನ ಬ್ಯಾಂಕು ತಮಗೆ ಸಾಲ ನೀಡಿಯೇ ಇಲ್ಲ ನಮ್ಮ ಪಹಣಿಯಲ್ಲಿ ಸಾಲ ಪಡೆದಿರುವುದಾಗಿ ದಾಖಲಾಗಿದೆ ಎಂದು ತಾಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರಿಗೆ ದೂರು ನೀಡಿ ತಮಗೆ ನ್ಯಾಯ ಕೊಡಿಸುವಂತೆ ಮನವಿ ಸಲ್ಲಿಸಿದರು.

ಸಹಕಾರ ಸಂಘಕ್ಕೆ ದೂರು ನೀಡಿ: ದೊಡ್ಡಕಾಡನೂರು ಗ್ರಾಮಸ್ಥರ ದೂರನ್ನು ಆಲಿಸಿದ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಜಿಲ್ಲಾ ಸಹಕಾರ ಸಂಘಗಳ ನಿರ್ದೇಶಕರಿಗೆ ದೂರವಾಣಿ ಮಾಹಿತಿ ನೀಡಿದರು. ತಮಗೆ ದೂರು ನೀಡಿದ ರೈತರನ್ನು ಜಿಲ್ಲಾ ಸಹಕಾರಿ ಸಂಘಗಳ ಕಚೇರಿಗೆ ತೆರಳಿ ದೂರು ದಾಖಲಿಸುವಂತೆ ಸೂಚಿಸಿದರು.

ಕಾರ್ಯದರ್ಶಿ ಹೇಳಿಕೆ: ಈ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತ ನಾಡಿದ ದೊಡ್ಡಕಾಡನೂರು ಕೃಷಿ ಪತ್ತಿನ ಬ್ಯಾಂಕಿನ ಕಾರ್ಯದರ್ಶಿ ಲೋಕೇಶ್‌ ರೈತರ ಪಹಣ ಆಧಾರದ ಮೇಲೆ ಸಾಲ ಮಂಜೂರಾಗಿರುವ ರೈತರಿಗೆ ಬ್ಯಾಂಕಿನಲ್ಲಿ ಹಣದ ಕೊರತೆ ಇದ್ದ ಕಾರಣ ಕೆಲವು ರೈತರಿಗೆ ಸಾಲದ ಹಣ ನೀಡಿಲ್ಲ ಎಂದು ಒಪ್ಪಿಕೊಂಡರು. ಈ ವರ್ಷ ಬರುವ ಹಣದಲ್ಲಿ ಬಾಕಿ ಉಳಿದಿರುವ ರೈತರಿಗೆ ಸಾಲವನ್ನು ಮಂಜೂರು ಮಾಡುವುದಾಗಿ ಹೇಳಿದರು.

ಈ ಬಗ್ಗೆ ಸಹಕಾರ ಸಂಘಗಳ ಆಯುಕ್ತರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸುವಂತೆ ಸಾಲ ಪಡೆಯದ ಫಲಾನುಭವಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.