ಕುಂಭಾಸಿ ಮಕ್ಕಳ ಮನೆ: ಬುಟ್ಟಿ ತಯಾರಿಕೆ ಕಲಿಕೆ ಕಾರ್ಯಾಗಾರ

ಕೊರಗ ಸಮುದಾಯದ ಯುವಕರಿಗೆ ತರಬೇತಿ

Team Udayavani, Jul 18, 2019, 5:26 AM IST

koraga

ತೆಕ್ಕಟ್ಟೆ : ಕೊರಗ ಸಮುದಾಯ ಕಲೆ ಮತ್ತು ಸಂಸ್ಕೃತಿಗೆ ಅದರದ್ದೇ ಆದ ವಿಶಿಷ್ಟತೆ ಇದೆ. ಪ್ರಕೃತಿಯಲ್ಲಿನ ಲಭ್ಯ ವಸ್ತುಗಳನ್ನೇ ಬಳಸಿಕೊಂಡು ಸಾಂಪ್ರದಾಯಿಕ, ಆಕರ್ಷಕ ಶೈಲಿಯ ದಿನಬಳಕೆಯ, ಆಲಂಕಾರಿಕ ವಸ್ತುಗಳನ್ನು ತಯಾರಿಸುವುದರಲ್ಲಿ ಅವರು ಸಿದ್ಧಹಸ್ತರು. ಆಧುನಿಕ ಕಾಲದಲ್ಲಿ ಇಂತಹ ಉತ್ಪನ್ನಗಳ ನಿರ್ಮಾಣ, ಕೌಶಲ ಕ್ಷೀಣಿಸುತ್ತಿದ್ದು, ಅದರ ಉಳಿವಿಗಾಗಿ ಇಲ್ಲೊಂದು ಕಡೆ ಸದ್ದಿಲ್ಲದೆ ಕೆಲಸ ನಡೆಯುತ್ತಿದೆ.

ಬುಟ್ಟಿ ತಯಾರಿಕೆ ಕಲಿಕೆ
ಈ ನಿಟ್ಟಿನಲ್ಲಿ ಕೊರಗ ಶ್ರೇಯೋಭಿವೃದ್ಧಿ ಸಂಘ (ರಿ.) ಕುಂದಾಪುರ, ಜಿಲ್ಲಾ ಕೊರಗ ಸಂಘಟನೆ ಉಡುಪಿ, ಐಟಿಡಿಪಿ ಉಡುಪಿ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು, ಮಕ್ಕಳ ಮನೆ ಕುಂಭಾಸಿ ಇವರ ಜಂಟಿ ಆಶ್ರಯದಲ್ಲಿ ಕುಂಭಾಸಿ ಮಕ್ಕಳ ಮನೆಯಲ್ಲಿ ಸಾಂಪ್ರದಾಯಿಕ ಹಾಗೂ ನವೀನ ವಿನ್ಯಾಸದ ಬುಟ್ಟಿ ತಯಾರಿಕಾ ಕಲಿಕೆ ಸನಿವಾಸ ನಡೆಯುತ್ತಿದ್ದು, ಈ ಶಿಬಿರಕ್ಕೆ ಜು.15ರಂದು ಚಾಲನೆ ದೊರಕಿದೆ.

ಸಂಪ್ರದಾಯಕ್ಕೆ ಆಧುನಿಕ ಸ್ಪರ್ಶ
ಕುಂದಾಪುರ ಹಾಗೂ ಉಡುಪಿ ತಾಲೂಕಿನ ಕೊರಗ ಸಮುದಾಯದ ಸುಮಾರು 15 ಮಂದಿಗೂ ಅಧಿಕ ಯುವಕ ಯುವತಿಯರು ಶಿಬಿರದಲ್ಲಿ ಪಾಲ್ಗೊಂಡಿದ್ದು 1 ತಿಂಗಳು ಸಂಪನ್ಮೂಲ ವ್ಯಕ್ತಿಗಳಾದ ಬಾಬು ಕೊರಗ ಜಪ್ತಿ, ದೀಪಾ ಹಾಗೂ ಕೇರಳ ಮೂಲದ ಬಿದಿರು ಕಲಾವಿದರಿಂದ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಪಡೆಯಲಿದ್ದಾರೆ. ಗೃಹೋಪಯೋಗಿ ವಸ್ತುಗಳಾದ ಹೂವಿನ ಕುಂಡ, ಲೈಟ್‌ಶೇಡ್‌, ಫ್ರೂಟ್‌ ಟ್ರೇ, ಹೇರ್‌ ಬ್ಯಾಂಡ್‌, ಬಿದಿರಿನ ಚಮಚ, ಪೆನ್‌ ಹೋಲ್ಡರ್‌, ಪಾತ್ರೆಗಳನ್ನು ಇರಿಸುವ ಬುಟ್ಟಿ ಮುಂತಾದ ವಸ್ತುಗಳನ್ನು ತಯಾರಿಸುವುದರೊಂದಿಗೆ ಹೊಸತನ ಹುಡುಕುವಲ್ಲಿ ಅಧ್ಯಯನ ಶೀಲರಾಗಿದ್ದಾರೆ.

ಮೂಲ ವಸ್ತುಗಳ ಕೊರತೆ
ನಮ್ಮ ಕುಲ ಕಸುಬು ಬುಟ್ಟಿ ತಯಾರಿಕೆ ಮಾಡುವಲ್ಲಿ ನನ್ನ ತಂದೆ ತಾಯಿ ಅತ್ಯಂತ ಪರಿಣತರಾಗಿದ್ದು ಅದರಲ್ಲಿಯೇ ಜೀವನ ನಿರ್ವಹಿಸುತ್ತಿದ್ದರು. ಕಷ್ಟವಿದ್ದರಿಂದ ಶಾಲೆಗೆ ಹೋಗಿಲ್ಲ. ಹಿಂದೆ ಕುಂದಾಪುರ ಸಂತೆಗೆ ಬಿದಿರಿನಿಂದ ಮಾಡಿದ ಬುಟ್ಟಿ, ಗೆರಸಿ, ಸಿಬಲು , ಹೆಡಿಗೆ ಮಾರಲು ಹೋಗುತ್ತಿದ್ದೆವು. ಕಳೆದ 20 ವರ್ಷಗಳಿಂದ ಬುಟ್ಟಿ ತಯಾರಿಸುತ್ತಿದ್ದೇವೆ. ಆದರೆ ಬದಲಾದ ಕಾಲದಲ್ಲಿ ತಯಾರಿಕೆಗೆ ಬೇಕಾದಂತಹ ಮೂಲ ವಸ್ತುಗಳ ಕೊರತೆ ಎದುರಿಸುತ್ತಿದ್ದೇವೆ.
-ಬಾಬು ಕೊರಗ ಜಪ್ತಿ, ಹಿರಿಯ ಸಂಪನ್ಮೂಲ ವ್ಯಕ್ತಿ

ಉಳಿಯುವಿಕೆಗಾಗಿ ಕಾರ್ಯಾಗಾರ
ಕೊರಗ ಸಮುದಾಯ ಕಲೆ ಮತ್ತು ಸಂಸ್ಕೃತಿಗಳ ಉಳಿವಿಗಾಗಿ ಶಿಕ್ಷಣದ ಜತೆಗೆ ಇಂತಹ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಇಂತಹ ಕಾರ್ಯಾಗಾರವನ್ನು ಆಯೋಜಿಸಿದ್ದೇವೆ. ಇಂತಹ ಕಲೆಗಳು ಅಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
-ಗಣೇಶ್‌ ವಿ., ಅಧ್ಯಕ್ಷರು, ಕುಂದಾಪುರ ಕೊರಗ ಶ್ರೇಯೋಭಿವೃದ್ಧಿ ಸಮಿತಿ

ಟಾಪ್ ನ್ಯೂಸ್

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.