ಕೆರೆ, ಬೆಳೆ ನುಂಗುವ ಕಲ್ಲು ಗಣಿಗಾರಿಕೆ ನಿಲ್ಲಿಸಿ


Team Udayavani, Jul 18, 2019, 3:00 AM IST

kere-bele

ಕೆ.ಆರ್‌.ನಗರ: ತಾಲೂಕಿನ ಮುಂಡೂರು ಗ್ರಾಮದ ವ್ಯಾಪ್ತಿಗೆ ಸೇರಿದ ಸರ್ಕಾರಿ ಜಾಗದಲ್ಲಿ ನಡೆಯುತ್ತಿರುವ ಭಾರೀ ಕಲ್ಲು ಗಣಿಗಾರಿಕೆಯಿಂದ ಈ ಭಾಗದ ಜನತೆಗೆ ಹಲವಾರು ರೀತಿ ತೊಂದರೆಯಾಗುತ್ತಿದ್ದು, ಕೂಡಲೇ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ತಾಪಂ ಸದಸ್ಯರಾದ ಎಚ್‌.ಟಿ.ಮಂಜುನಾಥ್‌, ಮುಂಡೂರು ಕುಮಾರ್‌ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಗಣಿಗಾರಿಕೆಯಿಂದ ಜನತೆಗೆ ಆಗುತ್ತಿರುವ ನಷ್ಟ ಹಾಗೂ ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ವಿವರಿಸಿದ ಗ್ರಾಮಸ್ಥರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಣಿಗಾರಿಕೆ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಸುತ್ತಮುತ್ತಲ ಗ್ರಾಮಸ್ಥರೊಡಗೂಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಕೆರೆಯ ಅರ್ಧಭಾಗ ಕಲ್ಲು: ತಾಪಂ ಸದಸ್ಯ ಎಚ್‌.ಟಿ.ಮಂಜುನಾಥ್‌ ಮತ್ತು ಮುಂಡೂರುಕುಮಾರ್‌ ಮಾತನಾಡಿ, ಗ್ರಾಮಕ್ಕೆ ಸೇರಿದಂತಿರುವ ಸರ್ಕಾರಿ ಜಾಗ ಸರ್ವೆ ನಂ.244ರಲ್ಲಿ 1986-1987ರಿಂದ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದು, ಬಿಳಿಕಲ್ಲು, ಬಿಳಿಮಣ್ಣು ಹಾಗೂ ಕಾಗೆ ಬಂಗಾರ ಮತ್ತು ಬೆಲೆಬಾಳುವ ಮಣ್ಣು ತೆಗೆದು ಉಳಿದ ತ್ಯಾಜ್ಯವನ್ನು ಅಕ್ಕಪಕ್ಕ ಸುರಿಯುವುದರಿಂದ ಅದು ಮಳೆ ಬಿದ್ದಾಗ ನೇರವಾಗಿ ಕಲ್ಲು ಮಣ್ಣು ಸಮೇತ ಕೆರೆಗೆ ಬಂದು ಸೇರುವುರಿಂದ ಗ್ರಾಮದ ರೈತರ ಜೀವನಾಡಿ ಕೆರೆ ಅರ್ಧ ಕಲ್ಲು ಮಣ್ಣಿನಿಂದ ತುಂಬಿ ಹೋಗಿದೆ. ಈಗ ಮಳೆ ಬಂದರೂ ನೀರು ನಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿ ಜನಜಾನುವಾರುಗಳಿಗೆ ನೀರಿಗಾಗಿ ಪರದಾಡುವಂತಾಗಿದೆ ಎಂದು ಅವಲತ್ತುಕೊಂಡರು.

ಬೆಳೆಗೆ ಧೂಳು:ಅಲ್ಲದೇ ವರ್ಷಪೂತಿ ಗಣಿಗಾರಿಕೆ ನಡೆಸುವುದರಿಂದ ಅಲ್ಲಿನ ಧೂಳು ರೈತರ ಬೆಳೆಗಳ ಮೇಲೆ ಬಿದ್ದು ಇಡೀ ಬೆಳೆ ಹಾಳಾಗುತ್ತಿದೆ. ಗಣಿಗಾರಿಕೆಯ ಧೂಳಿನಿಂದ ಅಕ್ಕಪಕ್ಕದ ಗ್ರಾಮದವರು ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದರು.

ನಿದ್ರೆಗೆ ಭಂಗ: ಗಣಿಗಾರಿಕೆಯಿಂದ ತೆಗೆಯುವ ಭಾರೀ ಬೆಲೆ ಬಾಳುವ ಕಲ್ಲು, ಮಣ್ಣು ಹಾಗೂ ಬಿಳಿಮಣ್ಣು, ಕಾಗೆ ಬಂಗಾರ ಮತ್ತಿತರ‌ ಖನಿಜಗಳನ್ನು ಮಿತಿ ಮೀರಿ ದೊಡ್ಡ ವಾಹನಗಳಲ್ಲಿ ಅದರಲ್ಲೂ ರಾತ್ರಿ ವೇಳೆ ಮಾತ್ರ ಸಾಗಿಸುವುದರಿಂದ‌ ಈ ಭಾಗದ ಸಾರ್ವಜನಿಕರ ನಿದ್ರೆಗೆ ಭಂಗವಾಗಿದ್ದು, ಲಾರಿಗಳು ಆಗಾಗ ರಸ್ತೆ ನಡುವೆ ಕೆಟ್ಟು ನಿಂತಾಗ ವಾಹನಗಳ ಓಡಾಟಕ್ಕೆ ದಾರಿಯಿಲ್ಲದೆ ಪರದಾಡುವಂತಾಗಿದೆ.

ಗಣಿಗಾರಿಕೆಗೆ ಭಾರೀ ಗಾತ್ರದ ಬೆಟ್ಟ ಕರಗಿತು!: ಗಣಿಗಾರಿಕೆಯಿಂದ ತೆಗೆದ ಕಲ್ಲು ಮಣ್ಣನ್ನು 16 ಚಕ್ರ, 14 ಚಕ್ರ ಸೇರಿದಂತೆ ಹೆಚ್ಚು ಭಾರದ ವಾಹನಗಳಲ್ಲಿ ಮಿತಿಮೀರಿ ಲೋಡ್‌ ಮಾಡಿಕೊಂಡು ರಸ್ತೆ ನಿಯಮ ಮೀರಿ ಹೆಚ್ಚು ಭಾರವನ್ನು ಹೊತ್ತು ಚಲಿಸುವುದರಿಂದ ಮುಂಡೂರು, ಕುಲುಮೆಹೊಸೂರು, ಬೆಟ್ಟಹಳ್ಳಿ ಸೇರಿದಂತೆ ಈ ಭಾಗದ ರಸ್ತೆಗಳು ಹದಗೆಟ್ಟಿವೆ.

ಭಾರೀ ಗಾತ್ರವಿದ್ದ ಬೆಟ್ಟ ಇಂದು ಅಕ್ರಮ ಗಣಿಗಾರಿಕೆಯಿಂದ ಕರಗಿ ಇಡೀ ಪರಿಸರ ಹಾಳಾಗಿದ್ದು, ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಈ ಭಾಗದ ಗ್ರಾಮಗಳ ಜನತೆ ಹಾಗೂ ರೈತಪರ ಸಂಘಟನೆಗಳೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಈ ಸಂಧರ್ಭದಲ್ಲಿ ಮುಂಡೂರು ಗ್ರಾಮದ ಹಲವಾರು ರೈತರು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.