ಶಾಲೆ ಬಿಡಿಸಿ ಮಕ್ಕಳೊಂದಿಗೆ ಗುಳೆ ಬಂದ ಕೂಲಿಕಾರರು!


Team Udayavani, Jul 18, 2019, 3:00 AM IST

shale

ಹುಣಸೂರು: ಸರ್ಕಾರ 14 ವರ್ಷದ ವರೆಗಿನ ಮಕ್ಕಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಕಡ್ಡಾಯಗೊಳಿಸಿ, ಅಗತ್ಯ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದೆ. ಆದರೆ, ಬಡ ಕುಟುಂಬಗಳು ಜೀವನದ ಬಂಡಿ ಸಾಗಿಸಲು ತಮ್ಮ ಮಕ್ಕಳೊಂದಿಗೆ ದೂರದ ನಗರ, ಪಟ್ಟಣಗಳಿಗೆ ವಲಸೆ ಬರುತ್ತಿರುವುದರಿಂದ‌ ಆ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ರೀತಿ ತುತ್ತು ಕೂಳಿಗಾಗಿ ಕೂಲಿ ಅರಸಿ ಬಂದಿರುವ ಕುಟುಂಬಗಳ ಸುಮಾರು 29 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಬೆಳಕಿಗೆ ಬಂದಿದೆ.

ಮನೆ ಕಾಮಗಾರಿ: ನಗರದ ಸರಸ್ವತಿಪುರಂ ಹಾಗೂ ಪೌರಕಾರ್ಮಿಕರ ಕಾಲೋನಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ 400 ಮನೆಗಳ ಕಾಮಗಾರಿಗಾಗಿ 50ಕ್ಕೂ ಹೆಚ್ಚು ಕುಟುಂಬಗಳನ್ನು ಕರೆತರಲಾಗಿದೆ. ತಂದೆ-ತಾಯಿಯರೊಂದಿಗೆ 6-14 ವರ್ಷದ 29 ಮಕ್ಕಳು ಕೂಡ ಆಗಮಿಸಿದ್ದಾರೆ.

ಈ ಮಕ್ಕಳು ಶಾಲೆಯಿಂದ ಹೊರಗುಳಿದು, ಆಟವಾಡಿಕೊಂಡು ಪೋಷಕರೊಂದಿಗಿದ್ದಾರೆ. ಇವರ ಗುತ್ತಿಗೆ ಅವಧಿಯೇ ಮುಂದಿನ ಎರಡು ವರ್ಷ ಇರುವುದರಿಂದ ಅಲ್ಲಿಯವರೆಗೂ ಈ ಮಕ್ಕಳು ಶಾಲೆ ಕಡೆ ಮುಖ ಮಾಡದಂತಾಗಿದೆ. ರಾಯಚೂರು, ಕೊಪ್ಪಳ ಜಿಲ್ಲೆಗಳಿಂದ ಹುಣಸೂರಿಗೆ ತಮ್ಮ ಮಕ್ಕಳೊಂದಿಗೆ ಆಗಮಿಸಿರುವ ಕೂಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ತಾವೇ ಎರವಾಗಿದ್ದಾರೆ.

ವಲಸೆ: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಂದ ಆಗಮಿಸಿರುವ ಕೂಲಿಕಾರರ ಮಕ್ಕಳು ಆಯಾ ಗ್ರಾಮಗಳಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇದೀಗ ಈ ವಿದ್ಯಾರ್ಥಿಗಳು ಶಾಲೆಯಿಂದಲೇ ದೂರವಾಗಿದ್ದು, ಬಾಲ್ಯದಲ್ಲಿ ಕಡ್ಡಾಯ ಶಿಕ್ಷಣ ಪಡೆಯಬೇಕಾದ ಈ ಮಕ್ಕಳು ತಮ್ಮ ತಂದೆ-ತಾಯಿಯರೊಂದಿಗೆ ಆಗಮಿಸಿ, ಆಟದತ್ತ ಗಮನ ಹರಿಸಿದ್ದು, ಶಿಕ್ಷಣ ಇವರಿಗೆ ಮರಿಚಿಕೆಯಾಗಿದೆ.

1-7ನೇ ತರಗತಿ ಮಕ್ಕಳು: ರಾಯಚೂರು-ಕೊಪ್ಪಳ ಜಿಲ್ಲೆಯ ಮಾನ್ವಿ, ಸಿರಿವಾರ, ಲಿಂಗಸುರು, ದೇವದುರ್ಗ, ರಾಯಚೂರು, ಮತ್ತಿತರೆಡೆಗಳಿಂದ 6 ರಿಂದ 14 ವರ್ಷದೊಳಗಿನ 29 ಮಕ್ಕಳು ನಗರಕ್ಕೆ ಆಗಮಿಸಿದ್ದಾರೆ. ತಿಮ್ಮನಗೌಡ(10), ಅಕ್ಷತಾ (8), ಮಲ್ಲಿಕಾರ್ಜುನ (7), ಚಿದಾನಂದ (7), ಅಂಬಿಕಾ (10), ಜ್ಯೋತಿ (6), ಮಂಜುನಾಥ (7) ಬಸಮ್ಮ (9), ಈರಮ್ಮ (6), ಸುಮಂಗಲ(13), ಚನ್ನಮ್ಮ (12), ಚಂದ್ರಕಲಾ (7), ಶ್ರೀದೇವಿ (12), ಮಲ್ಲಿಕಾರ್ಜುನ(6), ಹನುಮೇಶ (8), ರೇಣುಕಾ (12), ಅನಿತಾ (9), ಅಕ್ಷತಾ (7), ಪ್ರಜ್ವಲ್‌(11), ಮಲ್ಲಿಕಾರ್ಜುನ (6),ಅನಿತಾ (8), ನರಸಮ್ಮ (10), ಮಾಯಾ (12), ಬಸಮ್ಮ (6), ಬಸವ (11), ಶಿವ (9), ಮಲ್ಲಿಕಾ (7), ನಾಗರತ್ನ (9), ಹುಲಿಗಮ್ಮ (6) ಶಿಕ್ಷಣದಿಂದ ವಂಚಿತರಾಗಿರುವುದು ಪತ್ತೆಯಾಗಿದೆ.

ಸರ್ವೆ ನಡೆಸಿದ ತಂಡ: ಹುಣಸೂರು ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿ ಟಿ.ಸಂತೋಷ್‌ಕುಮಾರ್‌, ಸಿಆರ್‌ಪಿ ಸತೀಶ್‌ ನೇತೃತ್ವದ ತಂಡ ಸರಸ್ವತಿಪುರಂ ಹಾಗೂ ಇತರೆಡೆಗಳಲ್ಲಿ ಸರ್ವೆ ನಡೆಸಿ ಶಾಲೆಯಿಂದ ಹೊರಗುಳಿದ 29 ಮಕ್ಕಳನ್ನು ಪತ್ತೆ ಹಚ್ಚಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅದೇ ಬಡಾವಣೆಯಲ್ಲಿ ಟೆಂಟ್‌ ಶಾಲೆ ಆರಂಭಿಸುವ ಚಿಂತನೆ ಇದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ನಡೆಸಿದ ವೇಳೆ ವಿವಿಧ ಹಂತದ 29 ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಇವರಿಗಾಗಿ ಪ್ರತ್ಯೇಕ ಟೆಂಟ್‌ ಶಾಲೆ ತೆರೆದು, ಸರಕಾರದಿಂದ ದೊರೆಯುವ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಮತ್ತಿತರ ಸೌಲಭ್ಯ ಕಲ್ಪಿಸಲು ಹಾಗೂ ಇವರಿಗೆ ಬೋಧನೆ ಮಾಡಲು ಶಿಕ್ಷಕರನ್ನು ನಿಯೋಜಿಸಲು ಉದ್ದೇಶಿಸಲಾಗಿದೆ.
-ಟಿ.ಸಂತೋಷ್‌ ಕುಮಾರ್‌, ಕ್ಷೇತ್ರ ಸಮನ್ವಯಾಧಿಕಾರಿ

ಈ ಮಕ್ಕಳ ವೈಯಕ್ತಿಕ ಕಡತವನ್ನು ಪರಿಶೀಲಿಸಿ ವಿವಿಧ ವಯೋಮಾನದ ಮಕ್ಕಳನ್ನು ವಿವಿಧ ತರಗತಿಗಳಿಗೆ ದಾಖಲಿಸಲು ಹಾಗೂ ಇವರಿಗೆ ಎಲ್ಲ ಸೌಲಭ್ಯ ಕಲ್ಪಿಸಿ, ಪಾಠ ಕಲಿಯುವ ಮುಕ್ತ ವಾತಾವರಣ ನಿರ್ಮಿಸಿಕೊಡಲು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
-ನಾಗರಾಜ್‌, ಕ್ಷೇತ್ರ ಶಿಕ್ಷಣಾಧಿಕಾರಿ

* ಸಂಪತ್‌ ಕುಮಾರ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.