ಮಂದಿರ ರಕ್ಷಣೆಗೆ ಅಭಿಯಾನ: ಪೈ


Team Udayavani, Jul 18, 2019, 5:00 AM IST

u-11

ಬೆಳ್ತಂಗಡಿ: ಮಂದಿರಗಳ ಸರಕಾರೀಕರಣದಿಂದ ಆಗುವ ದುಷ್ಪರಿಣಾಮಗಳನ್ನು ಎದುರಿಸಲು ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರೀಯ ಮಂದಿರ ಸಂಸ್ಕೃತಿ ರಕ್ಷಣೆ ಅಭಿಯಾನ ಆರಂಭಿಸಿದೆ ಎಂದೂ ಹಿಂದೂ ಜನಜಾಗೃತಿ ಸಮಿತಿಯ ವಿವೇಕ ಪೈ ಹೇಳಿದರು.

ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಜಿರೆ ಹಳೆಪೇಟೆ ಸೀತಾರಾಮ ಕಲಾಮಂದಿರದಲ್ಲಿ ಮಂಗಳವಾರ ಜರಗಿದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಗುರುಕಾರ್ಯದ ಕಕ್ಷೆ
ಗುರುಗಳ ಸ್ಥೂಲ ದೇಹ ಅಂದರೆ ವ್ಯಷ್ಟಿ ರೂಪ ಹಾಗೂ ಸಂಪೂರ್ಣ ರಾಷ್ಟ್ರವೆಂದರೆ ಗುರುಗಳ ಸಮಷ್ಟಿ ರೂಪವಾಗಿದೆ. ಗುರುಕಾರ್ಯದ ಕಕ್ಷೆಯು ವ್ಯಕ್ತಿಯ ಆಧ್ಯಾತ್ಮಿಕ ಉದ್ಧಾರದಿಂದ ಸಮಾಜ, ರಾಷ್ಟ್ರ ಹಾಗೂ ಧರ್ಮದ ಉತ್ಥಾನದ ತನಕ ವ್ಯಾಪಿಸಿ ರುತ್ತದೆ. ಧರ್ಮ ಸಂಸ್ಥಾಪನೆ ಅಂದರೆ ಹಿಂದೂ ರಾಷ್ಟ್ರ-ಸ್ಥಾಪನೆ ಕಾರ್ಯವು ವ್ಯಕ್ತಿ, ಸಮಾಜ, ರಾಷ್ಟ್ರ ಹಾಗೂ ಧರ್ಮ ಇವೆಲ್ಲದರ ಉತ್ಕರ್ಷವನ್ನು ಸಾಧಿಸುವ ಹಾಗೂ ಕಾಲಾನುಸಾರ ಆವಶ್ಯಕ ಗುರುಕಾರ್ಯವೇ ಆಗಿದೆ. ಈ ಕಾರ್ಯಕ್ಕಾಗಿ ಸ್ವಕ್ಷಮತೆಯಂತೆ ತನು-ಮನ-ಧನದಿಂದ ಸಹಭಾಗಿಯಾಗುವುದೇ ಕಾಲಾನುಸಾರ ನಿಜವಾದ ಗುರುದಕ್ಷಿಣೆ ಎಂದರು.

ಸನಾತನ ಸಂಸ್ಥೆಯ ಸೌ. ರಾಧಿಕಾ ಪ್ರಭು ಮಾತನಾಡಿ, ಪರಾತ್ಪರ ಗುರು ಡಾ| ಜಯಂತ ಆಠವಲೆ ಅವರ ಗುಣಗಳ ಪರಿಚಯ ಮಾಡಿ, ಗುರುಗಳ ಕುರಿತು ಅಗಾಧ ಕೃತಜ್ಞತೆ ವ್ಯಕ್ತಪಡಿಸುವ ದಿನವೇ ಗುರು ಪೂರ್ಣಿಮೆ. ಪರಾತ್ಪರ ಗುರು ಪ.ಪೂ. ಡಾ| ಜಯಂತ ಆಠವಲೆಯವರಲ್ಲಿನ ಅದ್ವಿತೀಯ ಗುಣಗಳ ಎಲ್ಲೆಡೆ ಪರಿಚಯಿಸಬೇಕಿದೆ. ಆಧ್ಯಾತ್ಮಿಕ ಉನ್ನತಿ ಶೀಘ್ರವಾಗಿ ಆಗಲು ಪ್ರಯತ್ನಿಸುವುದು, ಇದೇ ಅವರ ಬಗ್ಗೆ ನಿಜವಾದ ಕೃತಜ್ಞತೆಯಾಗಿರಲಿದೆ ಎಂದರು.

“ಧರ್ಮಾಧಿಷ್ಠಿತ “ಹಿಂದೂ ರಾಷ್ಟ್ರದ ಸ್ಥಾಪನೆಯ ಆವಶ್ಯಕತೆ ಹಾಗೂ ಹಿಂದೂಗಳ ಯೋಗದಾನ’ ಈ ವಿಷಯದ ಕುರಿತು ಅವರು ಮಾರ್ಗದರ್ಶನ ಮಾಡಿದರು. ಇತರ ಸಮವಿಚಾರಿ ಸಂಘಟನೆಗಳೊಂದಿಗೆ ದೇಶಾ ದ್ಯಂತ 112 ಸ್ಥಳಗಳಲ್ಲಿ ಭಾವ ಪೂರ್ಣ ವಾತಾವರಣದಲ್ಲಿ ಇಂತಹ “ಗುರುಪೂರ್ಣಿಮಾ ಮಹೋ ತ್ಸವವನ್ನು’ ಆಚರಿಸ ಲಾಯಿತು.

ವ್ಯಾಸಪೂಜೆ ಹಾಗೂ ಸನಾತನ ಸಂಸ್ಥೆಯ ಗುರುಪರಂಪರೆಯಲ್ಲಿನ ಶ್ರೀಮತ್ಪರಮಹಂಸ ಚಂದ್ರಶೇಖ ರಾನಂದ, ಶ್ರೀ ಅನಂತಾನಂದ ಸಾಯಿಶ, ಸನಾತನ ಸಂಸ್ಥೆಯ ಶ್ರದ್ಧಾಸ್ಥಾನವಾಗಿರುವ ಸಂತ ಭಕ್ತರಾಜ ಮಹಾರಾಜ, ಪ.ಪೂ. ರಾಮಾನಂದ ಮಹಾರಾಜ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ| ಜಯಂತ ಬಾಳಾಜಿ ಆಠವಲೆಯವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು.
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಿಂದೂ ಸಂಘಟನೆಯ ಅದ್ವಿತೀಯ ಕಾರ್ಯ’ ಹಾಗೂ “ಪರಾತ್ಪರ ಗುರು (ಡಾ|) ಜಯಂತ ಬಾಳಾಜಿ ಆಠವಲೆ ಇವರ ಅಲೌಕಿಕ ಕಾರ್ಯ’ ಈ ವಿಷಯದಲ್ಲಿ ಚಿತ್ರ ಪ್ರದರ್ಶಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಹಿಂದೂ ರಾಷ್ಟ್ರ ನಿರ್ಮಾಣದ ಪಣ
ಜಾತ್ಯತೀತ ಭಾರತದಲ್ಲಿ ಹಿಂದೂಗಳು ಅನೇಕ ಸಮಸ್ಯೆಗಳಿಗೆ ಎಷ್ಟೇ ಪ್ರತಿಭಟನೆ ಮಾಡಿದರೂ ಸಮಸ್ಯೆ ಪರಿಹಾರವಾಗಿಲ್ಲ, ಅದಕ್ಕಾಗಿ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕಾಗಿದೆ ಎಂದು ಹಿಂದುತ್ವವಾದಿ ಮಂಗಳೂರಿನ ಮಧುಸೂದನ್‌ ಅಯ್ಯರ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.