ರಿಕ್ಷಾ ಚಾಲಕ-ಮಾಲಕರ ಹೋರಾಟ ಸಮಿತಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಒಕ್ಕೊರಲ ಆಗ್ರಹ

Team Udayavani, Jul 18, 2019, 5:00 AM IST

u-15

ರಿಕ್ಷಾ ಚಾಲಕ-ಮಾಲಕರ ಹೋರಾಟ ಸಮಿತಿಯ ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ಸಂಜೀವ ನಾಯಕ್‌ ಕಲ್ಲೇಗ ಮಾತನಾಡಿದರು.

ಪುತ್ತೂರು: ತಾಲೂಕು ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ, ಸ್ನೇಹ ಸಂಗಮ ಮತ್ತು ಎಸ್‌ಡಿಎಸಿಯು ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಬುಧವಾರ ನಗರದ ಮಿನಿ ವಿಧಾನಸೌಧದ ಎದುರು ನಡೆಯಿತು.

ಬಡ ರಿಕ್ಷಾ ಚಾಲಕರೇ ಗುರಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ ಗೌರವಾಧ್ಯಕ್ಷ ಸಂಜೀವ ನಾಯಕ್‌ ಕಲ್ಲೇಗ, ಬಡವರು ಮತ್ತು ಪ್ರಾಮಾಣಿಕ ಸೇವೆ ನೀಡುವ ರಿಕ್ಷಾ ಚಾಲಕರ ಮೇಲೆ ಎಲ್ಲ ರೀತಿಯ ಪ್ರಹಾರ ನಡೆಸುವ ಕೆಲಸ ಇಂದು ನಡೆಯುತ್ತಿದೆ. ಬಿಡಿಭಾಗಗಳು ಹಾಗೂ ಪೆಟ್ರೋಲ್‌ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರ ಬದುಕು ತತ್ತರಿಸಿದೆ. ಶಾಲೆಗೆ ಮಕ್ಕಳನ್ನು ಭದ್ರತೆಯಿಂದ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಹೊಂದಿ ರುವ ರಿಕ್ಷಾಗಳಿಗೆ ಕಾನೂನಿನ ಮಿತಿ ಹೇರಿ ಅವರ ಬದುಕಿಗೆ ಮತ್ತೂಂದು ಪೆಟ್ಟು ಕೊಡಲಾಗಿದೆ. ಪೊಲೀಸ್‌ ಇಲಾಖೆ ದೊಡ್ಡ ಕುಳಗಳನ್ನು ಬಿಟ್ಟು ಬಡ ರಿಕ್ಷಾ ಚಾಲಕರ ಮೇಲೆ ಕೇಸು ದಾಖಲಿಸುತ್ತಿರುವುದು ಎಷ್ಟು ಸರಿ? ಎಂದವರು ಖಾರವಾಗಿ ಪ್ರಶ್ನಿಸಿದರು.

ಸಿಕ್ಕಾಪಟ್ಟೆ ಪರ್ಮಿಟ್‌ ಬೇಡ
ಸ್ನೇಹ ಸಂಗಮ ಆಟೋ ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಜಗದೀಶ್‌ ಶೆಟ್ಟಿ ನೆಲ್ಲಿಕಟ್ಟೆ ಮಾತನಾಡಿ, ಪ್ರಸ್ತುತ ರಿಕ್ಷಾಗಳಿಗೆ ಸಿಕ್ಕಾಪಟ್ಟೆ ಪರ್ಮಿಟ್‌ ನೀಡುವುದರಿಂದ ಸಮಸ್ಯೆ ಉಂಟಾಗಿದೆ. ಈ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದ ಅವರು, ತಾಲೂಕಿನಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ರಿಕ್ಷಾಗಳ ವಿಚಾರದಲ್ಲಿ ಯಾವುದೇ ಸಮಸ್ಯೆ ಬಂದಿಲ್ಲ. ಆದರೂ ರಿಕ್ಷಾಗಳನ್ನೇ ಟಾರ್ಗೆಟ್‌ ಮಾಡಿ ನಿಯಮಗಳನ್ನು ಹೇರಲಾಗುತ್ತಿದೆ. ರಿಕ್ಷಾ ಚಾಲಕರ ಮೇಲೆ ಪೊಲೀಸ್‌ ವ್ಯವಸ್ಥೆ, ಅಧಿಕಾರಿಗಳು ಕರುಣೆ ತೋರಬೇಕು ಎಂದರು.

ಹೋರಾಟ ಅನಿವಾರ್ಯ
ಎಸ್‌ಡಿಎಸಿಯು ಜಿಲ್ಲಾ ಸಂಚಾಲಕ ಜಾಬಿರ್‌ ಅರಿಯಡ್ಕ ಮಾತನಾಡಿ, ಹಗಲಿರುಳು ಜನಸಾಮಾನ್ಯರ ಸೇವೆ ಗೈಯುವ ಆಟೋ ಚಾಲಕರನ್ನು ತೃತೀಯ ದರ್ಜೆಯಾಗಿ ಕಾಣುವ ಪರಿಸ್ಥಿತಿ ಉಂಟಾಗಿದೆ. ಕೇವಲ ಆರು ಮಕ್ಕಳನ್ನು ಕರೆದುಕೊಂಡು ಹೋಗುವ ಕಾನೂನು ಹೊರಡಿಸಿರುವ ಸರಕಾರ, ಅಧಿಕಾರಿಗಳು ಕಾನೂನಿನ ಮೂಲಕ ಆಟೋ ಚಾಲಕರನ್ನು ದಮನಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಚಾಲಕರ ಸಮಸ್ಯೆಯ ಕುರಿತು ಗಮನಹರಿಸಿ ಕಾನೂನು ಸಡಿಲಗೊಳಿಸುವಲ್ಲಿ ಪ್ರಯತ್ನಿಸಲಿ. ಇಲ್ಲದಿದ್ದಲ್ಲಿ ಆಟೋ ಚಾಲಕರ ಕುಟುಂಬದವರನ್ನು ಸೇರಿಸಿ ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದರು.

12 ಬೇಡಿಕೆಗಳ ಮನವಿ
ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ ಕುಲಾಲ್‌ ಸ್ವಾಗತಿಸಿದರು. ಬಳಿಕ ಸಂಘದ ವತಿಯಿಂದ ಸುಮಾರು 12 ಬೇಡಿಕೆಗಳ ಮನವಿ ಪತ್ರವನ್ನು ಸಹಾಯಕ ಕಮಿಷನರ್‌ ಮೂಲಕ ಸರಕಾರಕ್ಕೆ ನೀಡಲಾಯಿತು.

ಸ್ವಚ್ಛತೆಯ ಮಾದರಿ
ಪ್ರತಿಭಟನ ಸಭೆಯ ಮೊದಲು ಸಮಿತಿಯ ಗೌರವಾಧ್ಯಕ್ಷ ಸಂಜೀವ ನಾಯಕ್‌ ಕಲ್ಲೇಗ ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಸಮಿತಿಯ ಪದಾಧಿಕಾರಿಗಳು ಸ್ಮಾರಕದ ಆವರಣದಲ್ಲಿ ಹುಲ್ಲುಗಳನ್ನು ಕೀಳುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಕಾನೂನು ಸಲಹೆಗಾರ ದೇವಾನಂದ ಕೆ., ಹರಿಣಾಕ್ಷಿ ಜೆ. ಶೆಟ್ಟಿ, ಪ್ರಮುಖರಾದ ಬಾತೀಶ್‌ ಬಡಕ್ಕೋಡಿ, ಇಸ್ಮಾಯಿಲ್‌ ಬೊಳುವಾರು, ಸಿಲ್ವೆಸ್ಟರ್‌ ಡಿ’ಸೋಜಾ ಪಾಲ್ಗೊಂಡಿದ್ದರು.

ಅನಗತ್ಯ ನಿಯಮ
ಒಂದು ಮಗುವಿಗೆ ತಿಂಗಳಿಗೆ 500 ರೂ.ನಂತೆ ತೆಗೆದುಕೊಂಡು 6 ಮಕ್ಕಳನ್ನು ರಿಕ್ಷಾದಲ್ಲಿ ಕರೆದುಕೊಂಡು ಹೋದರೆ ತಿಂಗಳಿಗೆ 3 ಸಾವಿರ ರೂ. ಮಾತ್ರ ಆಗುತ್ತದೆ. ಬೆಳಗ್ಗೆ, ಸಂಜೆ ಮತ್ತು ಮಧ್ಯದಲ್ಲೂ ಮಕ್ಕಳನ್ನು ಮನೆಗೆ ಬಿಡುವ ರಿಕ್ಷಾಗಳಿಗೆ ಇದು ಯಾವುದಕ್ಕೂ ಸಾಕಾಗುವುದಿಲ್ಲ. 4 ಕಿ.ಮೀ. ವ್ಯಾಪ್ತಿಯಲ್ಲಿ ಒಂದು ಮಗುವಿನಿಂದ ಕನಿಷ್ಠ 1 ಸಾವಿರ ರೂ. ಪಡೆಯುವುದು ಅನಿವಾರ್ಯವಾಗುತ್ತದೆ. ಇದರ ಜತೆಗೆ ಹಲವು ಅನಗತ್ಯ ನಿಯಮಗಳನ್ನೂ ಹೇರಲಾಗಿದೆ.
– ಜಯರಾಮ ಕುಲಾಲ್‌ , ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.