ಶಿಥಿಲಗೊಂಡ ವಿದ್ಯುತ್ ಕಂಬಗಳು: ಅವಘಡಕ್ಕೆ ಆಹ್ವಾನ
ಇಲಾಖೆ ನಿರ್ಲಕ್ಷ್ಯ, ಸಾರ್ವಜನಿಕರ ಆಕ್ರೋಶ
Team Udayavani, Jul 18, 2019, 5:48 AM IST
ತೆಕ್ಕಟ್ಟೆ: ಕೊರ್ಗಿ ಗ್ರಾ.ಪಂ. ವ್ಯಾಪ್ತಿಯ ಚಂದಾಡಿ ಅರೆಕಲ್ಲು ಜನವಸತಿ ಪ್ರದೇಶದ ಸಮೀಪದಲ್ಲಿರುವ 11 ಕೆವಿ ವಿದ್ಯುತ್ ಸಂಪರ್ಕದ ವಿದ್ಯುತ್ ಕಂಬವೊಂದು ಶಿಥಿಲಗೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಇದರೊಂದಿಗೆ ಕೊರ್ಗಿ-ಹೆಸ್ಕಾತ್ತೂರು ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗದಲ್ಲಿ ಕಳೆದ ಹಲವು ದಿನಗಳಿಂದಲೂ ವಿದ್ಯುತ್ ಕಂಬಗಳು ವಾಲಿಕೊಂಡಿದ್ದು, ಇದರಲ್ಲಿರುವ ವಿದ್ಯುತ್ ತಂತಿಗಳೂ ಜೋತಾಡುತ್ತಿವೆ. ನಿತ್ಯ ವಿದ್ಯಾರ್ಥಿಗಳ ಸಹಿತ ಹಲವಾರು ಮಂದಿ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಅವಘಡದ ಭೀತಿ ಕಾಡಿದೆ.
ಬೀಳುವ ಸ್ಥಿತಿಯಲ್ಲಿರುವ ಕಂಬಗಳ ಬಗ್ಗೆ ಸ್ಥಳೀಯರು ಹಿಂದೆ ನಡೆದ ಗ್ರಾಮಸಭೆಯಲ್ಲಿ ಗಮನಕ್ಕೆ ತಂದಿದ್ದರು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲವಾದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಕ್ರಮಕ್ಕೆ ಆಗ್ರಹ
ಕೊರ್ಗಿ ಪ್ರಮುಖ ಜನವಸತಿ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದಲೂ ವಿದ್ಯುತ್ ಕಂಬಗಳು ಶಿಥಿಲಾವಸ್ಥೆಯಲ್ಲಿದ್ದು ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಸ್ಥಳೀಯಾಡಳಿತ ಹಾಗೂ ಮೆಸ್ಕಾಂ ಇಲಾಖೆಯ ಗಮನಕ್ಕೆ ತಂದರೂ ಕೂಡಾ ಇದು ವರೆಗೆ ಯಾವುದೇ ಪ್ರಯೋಜನವಾಗಲಿಲ್ಲ .
-ಪ್ರಶಾಂತ್ ಆಚಾರ್ಯ ಕೊರ್ಗಿ, ಸ್ಥಳೀಯರು
ಗಮನಕ್ಕೆ ತಂದಿದ್ದೇನೆ
ಪ್ರಮುಖ ಭಾಗದಲ್ಲಿರುವ ವಿದ್ಯುತ್ ಕಂಬವೊಂದು ಶಿಥಿಲಗೊಂಡಿರುವ ವಿಷಯದ ಬಗ್ಗೆ ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ತುರ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
-ಸುಧಾಕರ ಶೆಟ್ಟಿ ಪಿಡಿಒ, ಗ್ರಾ.ಪಂ.ಕೊರ್ಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ