ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಸಭೆ
Team Udayavani, Jul 18, 2019, 3:03 AM IST
ಬೆಂಗಳೂರು: ಗುರುವಾರ ವಿಶ್ವಾಸ ಮತ ಯಾಚನೆಗೆ ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ಸಂಜೆ ಕಾಂಗ್ರೆಸ್ ಶಾಸಕರು ಉಳಿದುಕೊಂಡಿದ್ದ ಪ್ರಕೃತಿ ರೆಸಾರ್ಟ್ಗೆ ತೆರಳಿ ಕಾಂಗ್ರೆಸ್ ಶಾಸಕರೊಂದಿಗೆ ಅನೌಪಚಾರಿಕ ಸಭೆ ನಡೆಸಿದರು.
ಸುಪ್ರೀಂಕೋರ್ಟ್ ತೀರ್ಪಿನಿಂದ ವಿಚಲಿತರಾದಂತೆ ಕಂಡು ಬಂದಿದ್ದ ಮೈತ್ರಿ ಪಕ್ಷಗಳ ನಾಯಕರು ಬುಧವಾರ ಸಂಜೆ ವೇಳೆಗೆ ವಿಶ್ವಾಸದಲ್ಲಿದ್ದರು. ಕಾಂಗ್ರೆಸ್ ಶಾಸಕರ ಸಭೆಯಲ್ಲಿಯೂ ಸಿಎಂ ಕುಮಾರಸ್ವಾಮಿ ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಸಂಜೆ ನಡೆದ ಅನೌಪಚಾರಿಕ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಹಾಜರಿದ್ದರು.
ಅನಾರೋಗ್ಯ ವದಂತಿ: ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಕಾರ್ಮಿಕ ಸಚಿವ ವೆಂಕಟರಮಣಪ್ಪ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅಸ್ವಸ್ಥರಾಗಿದ್ದಾರೆ ಎಂಬ ವದಂತಿ ಕೇಳಿ ಬಂದಿತ್ತು.ಅದೇ ಹಿನ್ನೆಲೆಯಲ್ಲಿ ರೆಸಾರ್ಟ್ಗೆ ವೈದ್ಯರನ್ನೂ ಕರೆಸಲಾಗಿತ್ತು. ಆದರೆ, ತಮಗೆ ಯಾವುದೇ ತೊಂದರೆಯಾಗಿಲ್ಲ ಎಂದು ಬಿ.ಕೆ. ಸಂಗಮೇಶ್ ಸ್ಪಷ್ಟಪಡಿಸಿದ್ದಾರೆ.
ಅಧಿವೇಶನ ಪ್ರಾರಂಭಕ್ಕೂ ಮುನ್ನವೇ ಎಲ್ಲ ಶಾಸಕರಿಗೂ ವಿಪ್ ಜಾರಿಗೊಳಿಸಲಾಗಿದೆ. ಈಗ ಮತ್ತೂಮ್ಮೆ ವಿಪ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಎಲ್ಲ ಶಾಸಕರ ಮನೆಗಳಿಗೂ ವಿಪ್ ತಲುಪಿಸಲಾಗುವುದು.
-ಗಣೇಶ್ ಹುಕ್ಕೇರಿ, ಸರ್ಕಾರದ ಮುಖ್ಯ ಸಚೇತಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ