ಮಂಗಳೂರು: ಬಾಲಕ ಸಾವು; ಡೆಂಗ್ಯೂ ಶಂಕೆ
Team Udayavani, Jul 18, 2019, 5:22 AM IST
ಹೃದಯದ ಮಾಂಸ ಖಂಡಗಳಲ್ಲಿ ವೈರಾಣು ಸೋಂಕು ಬಾಧಿಸಿ ಸಾವು ಸಂಭವಿಸಿದೆ, ಶಂಕಿತ ಡೆಂಗ್ಯೂ ಕಾರಣವಲ್ಲ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನವೀನ್ ಕುಮಾರ್ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.
100ಕ್ಕೂ ಹೆಚ್ಚು ಮಂದಿ ದಾಖಲು
ಶಂಕಿತ ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಪಡೆಯಲು ದ.ಕ. ಜಿಲ್ಲೆಯ ವಿವಿಧ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಚಿಕಿತ್ಸೆಗೆ ದಾಖಲಾಗಿರುವ ಎಲ್ಲ ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಾ| ನವೀನ್ ಕುಮಾರ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ಮನೆಗಳಿಗೆ ಈ ತಂಡ ಭೇಟಿ ನೀಡಲಿದೆ. 10ಕ್ಕೂ ಹೆಚ್ಚು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಹಕಾರದೊಂದಿಗೆ ಈ ತಂಡ ಕಾರ್ಯೋನ್ಮುಖವಾಗಲಿದೆ. ಸೊಳ್ಳೆ ಉತ್ಪತ್ತಿ ನಿರ್ಮೂಲನೆ, ಮನೆಗಳಲ್ಲಿ ಜ್ವರದ ಬಗ್ಗೆ ಮಾಹಿತಿ ನೀಡುವಿಕೆ ಸೇರಿದಂತೆ ವಿವಿಧ ಕೆಲಸಗಳನ್ನು ಈ ತಂಡಗಳು ಮಾಡಲಿವೆ.