ದೇಶದ ಒಳಿತಿಗಾಗಿ ಪ್ರಾರ್ಥಿಸಿ: ಸಚಿವ ಖಾದರ್‌

ಬಜಪೆ: ಹಜ್‌ ಯಾತ್ರೆ - 2019ಕ್ಕೆ ಚಾಲನೆ

Team Udayavani, Jul 18, 2019, 5:29 AM IST

1707BAJ

ಬಜಪೆ: ಪವಿತ್ರ ಹಜ್‌ ಯಾತ್ರೆಮಾಡಬೇಕೆಂಬುದು ಪ್ರತಿಯೊಬ್ಬ ಮುಸ್ಲಿಮನ ಕನಸಾಗಿರುತ್ತದೆ. ಆದರೆಎಲ್ಲರಿಂದ ಇದು ಸಾಧ್ಯವಿಲ್ಲ. ಅದಕ್ಕೆಅಲ್ಲಾಹನ ಕೃಪೆ ಬೇಕು. ಹಜ್‌ ಯಾತ್ರೆಮಾಡುವ ನೀವು ಅದೃಷ್ಟಶಾಲಿಗಳಾಗಿದ್ದು, ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ (ದುವಾ)ಮಾಡಿ ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ಕರ್ನಾಟಕ ರಾಜ್ಯ ಹಜ್‌ ಸಮಿತಿ ಅಶ್ರಯದಲ್ಲಿ ಹಜ್‌ ಕ್ಯಾಂಪ್‌ ನಿರ್ವಹಣಾ ಸಮಿತಿ ಮಂಗಳೂರಿನ ಸಹಯೋಗದೊಂದಿಗೆ ಬಜಪೆ ಅನ್ಸಾರ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ಹಜ್‌ ವಿಮಾನ ಯಾತ್ರೆ-2019ನ್ನು ಉದ್ಘಾಟಿಸಿ ಮಾತನಾಡಿದರು.

ಶೀಘ್ರದಲ್ಲೇ ಹಜ್‌ ಘರ್‌
ಮಂಗಳೂರಿನಲ್ಲಿ ಹಜ್‌ ಘರ್‌ ನಿರ್ಮಾಣಕ್ಕೆ ಈಗಾಗಲೇ 70 ಸೆಂಟ್ಸು ಜಾಗ ನಿಗದಿಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಅನುದಾನ ನೀಡಲು ಮುಂದೆ ಬಂದಿದ್ದು ಸದ್ಯದಲ್ಲೇಶಿಲಾನ್ಯಾಸ ನಡೆಯಲಿದೆ ಎಂದರು.

ಸಚಿವ ಜಮೀರ್‌ ಆಹ್ಮದ್‌ ಖಾನ್‌ಅವರು ಜಿಲ್ಲೆಯಿಂದ 11 ಉಲೇಮಾಗಳಿಗೆ ಹಾಗೂ ರಾಜ್ಯದಿಂದ 100ಕ್ಕಿಂತ ಹೆಚ್ಚು ಉಲೇಮಾಗಳಿಗೆ ಪವಿತ್ರ ಹಜ್‌ಯಾತ್ರೆ ಕೈಗೊಳ್ಳಲು ಸಹಾಯ ಮಾಡಲಿದ್ದಾರೆ ಎಂದು ಖಾದರ್‌ ತಿಳಿಸಿದರು.

ದೇಶದಿಂದ 2 ಲಕ್ಷ ಮಂದಿ
ಸಂಸದ ಮೊಹಮ್ಮದ್‌ ಇರ್ಫಾನ್‌ ಅಹ್ಮದ್‌ ಮಾತನಾಡಿ, ಈ ಬಾರಿ ದೇಶ ದಿಂದ 2 ಲಕ್ಷ ಮಂದಿ ಹಜ್‌ ಯಾತ್ರೆ ಕೈಗೊಳ್ಳಲಿದ್ದಾರೆ. 1,75,000 ಮಂದಿಗೆ ಮಾತ್ರ ಈ ವರೆಗೆ ಅವಕಾಶವಿತ್ತು. 4 ತಿಂಗಳ ಮೊದಲು ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾ ರಾಜ ಮಹಮದ್‌ ಸಲ್ಮಾನ್‌ ಭಾರತಕ್ಕೆ ಬಂದಾಗಈ ಬಗ್ಗೆ ಅವರಲ್ಲಿ ಪ್ರಸ್ತಾವಿಸಿದ್ದರಿಂದಾಗಿ ಹೆಚ್ಚುವರಿ 25 ಸಾವಿರ ಮಂದಿಗೆ ಅವಕಾಶ ಲಭಿಸಿದೆ ಎಂದರು.

ಮಾಜಿ ಶಾಸಕರಾದ ಬಿ.ಎ. ಮೊದಿನ್‌ಬಾವಾ, ಕೆ.ಎಸ್‌. ಮಹಮ್ಮದ್‌ ಮಸೂದ್‌, ಮುಖಂಡರಾದ ಮಹಮ್ಮದ್‌ ಮೋನು, ಜಿಲ್ಲಾ ವಕ್ಫ್ ಯು.ಕೆ. ಮೋನು ಕಣಚೂರು, ಬಿ.ಎಂ. ಝಕರಿಯಾ, ವೈ. ಮಹಮ್ಮದ್‌ ಕುಂಞಿ, ಬಿ.ಎಂ. ಮುಮ್ತಾಝ್ ಅಲಿ, ಎಸ್‌.ಎಂ. ರಶೀದ್‌ ಹಾಜಿ, ಹನೀಫ್‌ ಹಾಜಿ ಕೊಳತ್ತಮಜಲು, ಎಂ.ಎಸ್‌. ಕರೀಂ, ಕೆ.ಕೆ. ಸಾಹುಲ್ ಹಮೀದ್‌, ಹೈದರ್‌ ಪರ್ತಿಪಾಡಿ, ಅಬ್ದುಲ್ ರಶೀದ್‌, ಅಶ್ರಫ್‌, ಬಶೀರ್‌, ಮಹಮ್ಮದ್‌ ಕುಂಜತ್ತಬೆೈಲು, ಬಶೀರ್‌ ಬೆೈಕಂಪಾಡಿ, ಸಿರಾಜ್‌, ಮಹಮದ್‌ ಶರೀಫ್‌, ಹನೀಫ್‌ ಮಹಮದ್‌ ಉಪಸ್ಥಿತರಿದ್ದರು.

ದ.ಕ. ಖಾಝಿ ಆಲ್ ಹಾಜ್‌ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ದುವಾ ನೆರವೇರಿಸಿದರು. ಉಳ್ಳಾಲ ಖಾಝಿ ಆಸ್ಸಯ್ಯಿದ್‌ ಫಝಲ್ ಕೋಯಮ್ಮ ತಂšಳ್‌ ಅಲ್ಬುಖಾರಿ ಶುಭಾಶಂಸನೆಗೈದರು. ರಾಜ್ಯ ಹಜ್‌ ಸಮಿತಿ ಕಾರ್ಯ ನಿರ್ವಾಹಣಾಧಿಕಾರಿ ಸಫ್ರ್ರಾಝ್ ಖಾನ್‌ ಸರ್ದಾರ್‌ ಸ್ವಾಗತಿಸಿದರು. ರಶೀದ್‌ ವಿಟ್ಲ ಕಾರ್ಯಕ್ರಮ ನಿರೂಪಿ ಸಿದರು. ಬಿ.ಎಂ. ಮುಮ್ತಾಝ್ ಅಲಿ ಕೃಷ್ಣಾಪುರ ವಂದಿಸಿದರು.

ಮಂಗಳೂರು ಮೂಲಕ 747 ಮಂದಿ ಯಾತ್ರೆ

ಕರ್ನಾಟಕ ರಾಜ್ಯ ಹಜ್‌ ಸಮಿತಿ ಸದಸ್ಯ ಕೆ.ಎಂ. ಅಬೂಬಕರ್‌ ಸಿದ್ದಿಕಿ ಪ್ರಸ್ತಾವನೆಗೈದು, ಮಂಗಳೂರು ಮೂಲಕ ಈ ಬಾರಿ ಒಟ್ಟು 747 ಮಂದಿ ಹಜ್‌ ಯಾತ್ರೆ ಕೈಕೊಳ್ಳಲಿದ್ದಾರೆ. ಇದರಲ್ಲಿ ದ.ಕ. ಜಿಲ್ಲೆಯ 610, ಉಡುಪಿ ಜಿಲ್ಲೆಯ 72, ಕೊಡಗಿನ 39, ಹಾಸನದ 20, ಚಿಕ್ಕಮಗಳೂರಿನ 6 ಮಂದಿ ಇದ್ದಾರೆ. ರಾಜ್ಯ ಮಟ್ಟದಲ್ಲಿ ಒಟ್ಟು 14 ಸಾವಿರ ಹಜ್‌ ಯಾತ್ರಾರ್ಥಿಗಳಿಂದ ಅರ್ಜಿಗಳು ಬಂದಿದ್ದವು. ಈ ಬಾರಿ 8,739 ಮಂದಿಗೆ ಅವಕಾಶ ಲಭಿಸಿದೆ. ಕಳೆದ ಬಾರಿ 6,300 ಮಂದಿಗೆ ಮಾತ್ರ ಅವಕಾಶ ಇತ್ತು ಎಂದು ಹೇಳಿದರು.

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.