24 ಹಳ್ಳಿಗಳಿಗೆ ಟ್ಯಾಂಕರ್‌ನೀರು

ಪ್ರತಿ ದಿನಕ್ಕೆ 140 ಟ್ರಿಪ್‌ ಪೂರೈಕೆ, ಸಂಪೂರ್ಣ ಬತ್ತಿದ ಕಾರಂಜಾ ನದಿ, ಮಳೆಗಾಲದಲ್ಲೂ ಮುಂದುವರಿದ ಬೇಸಿಗೆ ಪರಿಸ್ಥಿತಿ, ಜಾನುವಾರುಗಳಿಗೂ ಸಂಕಷ್ಟ

Team Udayavani, Jul 18, 2019, 10:39 AM IST

18-July-5

ಭಾಲ್ಕಿ: ದಾಡಗಿ ಹತ್ತಿರದ ಕಾರಂಜಾ ನದಿಗೆ ನಿರ್ಮಿಸಲಾದ ಬ್ಯಾರೇಜ್‌ ಬತ್ತಿರುವುದು.

ಭಾಲ್ಕಿ: ಮುಂಗಾರು ಹಂಗಾಮು ಆರಂಭವಾಗಿ ಸುಮಾರು 46 ದಿನಗಳು ಕಳೆದರೂ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ವಾಡಿಕೆಯಂತೆ ಮಳೆಯಾಗದೇ ನೀರಿನ ಸಮಸ್ಯೆ ಮಳೆಗಾಲದಲ್ಲೂ ತೀವ್ರವಾಗಿ ಕಾಡುತ್ತಿದೆ.

ತಾಲೂಕಿನ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಬೇಸಿಗೆಯಲ್ಲಿ ಆರಂಭಿಸಲಾಗಿದ್ದ ಟ್ಯಾಂಕರ್‌ ನೀರು ಇಂದಿಗೂ ಮುಂದುವರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕು ಅಧಿಕಾರಿಗಳ ಮಾಹಿತಿ ಪ್ರಕಾರ ತಾಲೂಕಿನ 24 ಗ್ರಾಮಗಳಿಗೆ 32 ಟ್ಯಾಂಕರ್‌ಗಳಿಂದ ದಿನಕ್ಕೆ 140 ಟ್ರಿಪ್‌ ನೀರು ಪೂರೈಸಲಾಗುತ್ತಿದೆ.

ತಾಲೂಕಿನ ಚಳಕಾಪುರ, ಚಳಕಾಪುರ ವಾಡಿ, ಹರಿವಾಡಿ, ಯೆಲ್ಲಮ್ಮ ವಾಡಿ, ಹಲಬರ್ಗಾ, ತೆಗಂಪುರ, ತರನಳ್ಳಿ, ಅಂಬೆಸಾಂಗವಿ, ಜೊಳದಪಕಾ, ಖಟಕಚಿಂಚೋಳಿ, ಭಾತಂಬ್ರಾ, ಮೆಹಕರ, ಧನ್ನೂರಾ(ಎಸ್‌), ನೆಳಗಿ, ಕೋನಮೆಳಕುಂದಾ, ರುದನೂರ, ತೆಲಗಾಂವ, ತಳವಾಡ, ಕಣಜಿ, ಕರಡ್ಯಾಳ ಸೇರಿದಂತೆ ಸುಮಾರು 24 ಗ್ರಾಮಗಳಿಗೆ ಇದುವರೆಗೂ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದೆ ಎಂದು ತಹಶೀಲ್ದಾರ್‌ ಅಣ್ಣಾರಾವ ಪಾಟೀಲ ತಿಳಿಸಿದ್ದಾರೆ.

ಗ್ರಾಮಗಳಲ್ಲದೇ ಪಟ್ಟಣದಲ್ಲಿಯೂ ಕುಡಿಯುವ ನೀರಿನ ತೊಂದರೆ ವಿಪರೀತವಾಗಿ ಕಾಡುತ್ತಿದೆ. ಪಟ್ಟಣದಲ್ಲಿ ಪ್ರತಿನಿತ್ಯ 75 ಟ್ಯಾಂಕರ್‌ಗಳ ಮೂಲಕ 27 ವಾರ್ಡ್‌ಗಳಿಗೆ ನೀರು ಪೂರೈಸಲಾಗುತ್ತಿದೆ ಪುರಸಭೆ ಮುಖ್ಯಾಧಿಕಾರಿ ಶಿವಕುಮಾರ ತಿಳಿಸಿದ್ದಾರೆ.ಮಳೆಗಾಲ ಪ್ರಾರಂಭವಾಗಿ ಸುಮಾರು ಒಂದೂವರೆ ತಿಂಗಳು ಗತಿಸಿದರೂ ಕುಡಿಯಲು ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಹೀಗೆ ಮುಂದುವರಿದರೆ ಜನ ಜಾನುವಾರಗಳ ಪಾಡೇನು? ಸರಕಾರ ಜನರಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತದೆ. ಆದರೆ ಜಾನುವಾರುಗಳ ಗತಿ ಏನು ಎಂಬ ಪ್ರಶ್ನೆ ಎದುರಾಗಿದೆ.

ಕಳೆದ ಸಾಲಿನ ಜೂನ್‌ನಲ್ಲಿ ಸಾಕಷ್ಟು ಮಳೆಯಾಗಿ ಹಳ್ಳ ಕೊಳ್ಳಗಳು ತುಂಬಿ ನದಿಗೆ ನೀರು ಬಂದಿತ್ತು. ಆದರೆ ಈ ವರ್ಷ ಇನ್ನೂ ಬೇಸಿಗೆಯಂತೆಯೇ ಇದೆ. ಹೀಗಾಗಿ ಪಟ್ಟಣದ ಕುಡಿಯುವ ನೀರಿನ ಮೂಲ ದಾಡಗಿ ಹತ್ತಿರದ ಕಾರಂಜಾ ನದಿ ಸಂಪೂರ್ಣ ಬತ್ತಿ ಹೋಗಿದೆ. ಹೀಗಾಗಿ ಪಟ್ಟಣದಲ್ಲಿ ಇದುವರೆಗೂ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್‌ ನೀರು ಬರುವವರೆಗೆ ಪಟ್ಟಣದ ನಾಗರಿಕರು ಕೊಡ ಹಿಡಿದು ಕಾಯುವಂತಾಗಿದೆ. ಆದಷ್ಟು ಬೇಗ ಸತತ ಮಳೆ ಸುರಿದು ತಾಲೂಕಿನ ಜನರ ನೀರಿನ ದಾಹ ತಣಿಸುವುದೋ ಆ ದೇವರೇ ಬಲ್ಲ.

ಪ್ರತಿನಿತ್ಯ ಮುಗಿಲಿಗೆ ಮುಖಮಾಡಿ ಮಳೆಗಾಗಿ ದೇವರನ್ನು ನೆನೆಸುವುದೇ ನಮ್ಮ ಕಾಯಕವಾಗಿದೆ ಎನ್ನುತ್ತಾರೆ ಹಲಬರ್ಗಾ ಗ್ರಾಮದ ನಿವಾಸಿ ಸುರೇಶ ಪ್ರಭಾ.

ಟಾಪ್ ನ್ಯೂಸ್

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.