ವಿಮೆ ಮಾಡಿಸಲು ರೈತರ ಹಿಂದೇಟು!

ಕಳೆದ ವರ್ಷ ಅರ್ಧಕ್ಕೂ ಹೆಚ್ಚು ರೈತರಿಗೆ ಸಿಗದ ಬೆಳೆವಿಮೆ

Team Udayavani, Jul 18, 2019, 11:16 AM IST

Udayavani Kannada Newspaper

ಅನೀಲ ಬಸೂದೆ
ಯಾದಗಿರಿ
: ಜಿಲ್ಲೆಯ ರೈತರಿಗೆ 2018-19ನೇ ಸಾಲಿನ ಬೆಳೆ ವಿಮೆ ಹಣ ಬಾರದೇ ಇರುವುದರಿಂದ ಪ್ರಸಕ್ತ ವರ್ಷದಲ್ಲಿ ಬೆಳೆ ವಿಮೆ ಮಾಡಿಸಲು ರೈತರು ಹಿಂದೇಟು ಹಾಕುತ್ತಿದ್ದಾರೆ.

ಮೊದಲೇ ಬರದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ವಿಮೆ ಕಂಪನಿಗಳು ನಷ್ಟ ಪರಿಹಾರ ನೀಡದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

2015-16ನೇ ಕೃಷಿ ಗಣತಿ ಪ್ರಕಾರ ಜಿಲ್ಲೆಯಲ್ಲಿ 232623 ರೈತರಿದ್ದು ಇವರಲ್ಲಿ 2018-19ನೇ ಸಾಲಿನಲ್ಲಿ 27551ರೈತರು ವಿವಿಧ ಬೆಳೆಯ ವಿಮೆ ವಂತಿಕೆ ಪಾವತಿಸಿದ್ದಾರೆ. ಆದರೆ ಮಳೆ ಆಗದೇ ಇರುವುದರಿಂದ ಬೆಳೆ ನಷ್ಟವಾಗಿದ್ದರೂ ಸತತ ಬರದಿಂದ ಕಂಗಾಲಾಗಿರುವ ರೈತರಿಗೆ ಸಮರ್ಪಕ ವಿಮೆ ಪಾತಿಯಾಗಿಲ್ಲ. ಕೇವಲ 12527 ರೈತರಿಗೆ 14,42,65,589 ರೂಪಾಯಿ ರೈತರ ಖಾತೆಗೆ ಜಮಾಗೊಂಡಿದೆ ಎಂದು ದಾಖಲೆಗಳು ಹೇಳುತ್ತಿವೆ.

27 ಸಾವಿರಕ್ಕೂ ಹೆಚ್ಚು ರೈತರು ವಿಮಾ ಕಂಪನಿಗೆ ವಂತಿಗೆ ಪಾವತಿಸಿದ್ದಾರೆ. ಇವರ ಜಮೀನಿನಲ್ಲಿ ಬೆಳೆ ನಷ್ಟವಾಗಿದೆ ಪರಿಹಾರ ಮಾತ್ರ ಸಿಕ್ಕಿಲ್ಲ. ಹಾಗಾಗಿ ಬೆಳೆ ವಿಮೆ ವಿಷಯವಾಗಿ ಜಿಲ್ಲೆಯ ರೈತರು ತೀವ್ರ ಗೊಂದಲಕ್ಕೆ ಸಿಲುಕಿದ್ದಾರೆ.

ಈ ಮಧ್ಯೆ ಕೆಂಭಾವಿ ವ್ಯಾಪ್ತಿಯ ರೈತ ತಿರುಪತಿ ಎಂಬುವರು ತನ್ನ 9 ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿ ವಿಮೆ ಕಂಪನಿಗೆ 3059 ರೂ. ವಂತಿಗೆ ಪಾವತಿಸಿದ್ದರು. ಕಂಪನಿಯ ಷರತ್ತಿನ ಪ್ರಕಾರ ಅವರ 9 ಎಕರೆಯಲ್ಲಿನ ಬೆಳೆಗೆ 152976 ಪರಿಹಾರ ನೀಡಬೇಕಿತ್ತು. ಆದರೆ ವಿಮಾ ಕಂಪನಿ ಕೇವಲ 13 ಸಾವಿರ ರೂ.ಗಳನ್ನು ಖಾತೆಗೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ರೈತರು ಬೆಳೆವಿಮೆ ಪಾವತಿಸಿದ್ದರೂ ಅವರಿಗೆ ಬೆಳೆ ವಿಮೆ ಸಿಗದಿರಲು ಹಲವು ತಾಂತ್ರಿಕ ಕಾರಣಗಳು ಕಂಡು ಬಂದಿವೆ. ಪ್ರಮುಖವಾಗಿ ಬೆಳೆಯ ವಿಮಾ ಪರಿಹಾರ ವಿತರಣೆ ವೇಳೆ ಕಳೆದ 5 ವರ್ಷಗಳ ಇಳುವರಿ ಗಮನಿಸಿ ಬೆಳೆ ವಿಮೆ ಕಟ್ಟಿದ ವರ್ಷ ಆ ಭಾಗದ ಗ್ರಾಪಂ, ಹೋಬಳಿ, ತಾಲೂಕಿನಲ್ಲಿ ಪ್ರಸಕ್ತ ವರ್ಷ ಇಳುವರಿ ಆಧಾರವಾಗಿಟ್ಟುಕೊಂಡು ವಿಮೆ ಪರಿಹಾರ ನೀಡಲಾಗುತ್ತಿದೆ ಎನ್ನುವ ಅಂಶ ತಿಳಿದು ಬಂದಿದೆ. ರೈತರ ಪಹಣಿಯಲ್ಲಿ ನೋಂದಾಯಿಸಿರುವ ಬೆಳೆ, ಸಾಲದ ವೇಳೆ ನೋಂದಾಯಿಸಿರುವುದು ಒಂದೇ ಆಗಿರಬೇಕು. ಉದಾ: ತೊಗರಿ ಬೆಳೆಗೆಂದು ಸಾಲ ಪಡೆದು ಹೊಲದಲ್ಲಿ ಹತ್ತಿ ಬೆಳೆದರೆ ಪರಿಹಾರದಿಂದ ವಂಚಿತವಾಗಬಹುದು ಎನ್ನಲಾಗಿದೆ.

ಪ್ರಮುಖವಾಗಿ ಬೆಳೆ ವಿಮೆಯ ವಂತಿಕೆ ಕಟ್ಟುವ ಸಮಯದಲ್ಲಿ ಯಾವ ಬೆಳೆಯನ್ನು ನಮೂದಿಸಲಾಗಿದೆಯೋ ಅದೇ ಬೆಳೆ ಬಿತ್ತಿರಬೇಕು. ಬೇರೆ ಬೀಜ ಬಿತ್ತಿದರೆ ಸಮಸ್ಯೆಯಾಗುತ್ತದೆ ಎಂದು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಿಂದ ತಿಳಿದು ಬಂದಿದೆ.

ಹಾಗಾಗಿ ಬೆಳೆ ವಿಮೆ ಮಾಡಿಸುವ ಸಂದರ್ಭದಲ್ಲಿ ರೈತರು ವಿಮೆ ಮಾಡಿಸುವ ವೇಳೆ ಎಲ್ಲವನ್ನೂ ಸರಿಯಾಗಿ ಅರಿಯುವುದು ಒಳಿತು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.