ಭರದಿಂದ ಸಾಗಿದೆ ಗಾಂಧಿ ಭವನ ನಿರ್ಮಾಣ

•ತಲೆ ಎತ್ತಲಿದೆ ಮೂರು ಕೋಟಿ ರೂ.ಗಳಲ್ಲಿ ಭವ್ಯ ಭವನ•ಮೌಲ್ಯ ಹೆಚ್ಚಿಸಿದ ಧರ್ಮಶಾಲೆ ಸ್ಥಳ

Team Udayavani, Jul 18, 2019, 1:19 PM IST

18-July-26

ಹಾವೇರಿ: ಭರದಿಂದ ಸಾಗಿರುವ ಗಾಂಧಿ ಭವನ ನಿರ್ಮಾಣ ಕಾಮಗಾರಿ.

ಹಾವೇರಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಮೃತ ಹಸ್ತದಿಂದ ಅಡಿಗಲ್ಲು ಹಾಕಲ್ಪಟ್ಟಿದ್ದ ನಗರದ ‘ಧರ್ಮಶಾಲೆ’ ಇದ್ದ ಸ್ಥಳದಲ್ಲಿಯೇ ಭವ್ಯ ‘ಗಾಂಧಿ ಭವನ’ ನಿರ್ಮಾಣವಾಗುತ್ತಿದೆ. ಮುಂಬರುವ ಗಾಂಧಿ ಜಯಂತಿ ವೇಳೆಗೆ ಕಟ್ಟಡ ಪೂರ್ಣಗೊಳಿಸುವ ಗುರಿಯೊಂದಿಗೆ ಕಾಮಗಾರಿ ಭರದಿಂದ ಸಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೂರು ಕೋಟಿ ರೂ.ಗಳಲ್ಲಿ ‘ಗಾಂಧಿ ಭವನ’ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದು, ಈ ಯೋಜನೆಯಡಿ ನಗರದಲ್ಲಿ ಭವ್ಯ ಹಾಗೂ ನೂತನ ವಿನ್ಯಾಸದೊಂದಿಗೆ ಗಾಂಧಿ ಭವನ ತಲೆ ಎತ್ತುತ್ತಿದೆ.

ಹಾವೇರಿ ಜಿಲ್ಲೆಯಲ್ಲಿನ ಗಾಂಧಿ ಹೆಜ್ಜೆಗಳು, ಜಿಲ್ಲೆಯೊಂದಿಗೆ ಗಾಂಧಿ ನಂಟು, ಗಾಂಧಿ ಸಾಹಿತ್ಯ ಹಾಗೂ ಕಲಾ ಪ್ರದರ್ಶನ ಕೊಠಡಿ, ವಸ್ತು ಸಂಗ್ರಹಾಲಯ, ತರಬೇತಿ ಕೇಂದ್ರ, ಗಾಂಧಿ ಪುತ್ಥಳಿ ಹಾಗೂ ಉದ್ಯಾನ ಈ ಭವನದಲ್ಲಿ ಇವರಲಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಒಂದೇ ರೀತಿಯ ವಿನ್ಯಾಸದೊಂದಿಗೆ ಗಾಂಧಿ ಭವನ ನಿರ್ಮಿಸಲಾಗುತ್ತಿದ್ದು, ಭವನದ ವಿನ್ಯಾಸ ಆಕರ್ಷಣೀಯವಾಗಿದೆ.

ಸ್ಥಳವೂ ವಿಶೇಷ: ಭವ್ಯ ಗಾಂಧಿ ಭವನ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವುದು ಒಂದು ವಿಶೇಷವಾದರೆ, ಭವನ ನಿರ್ಮಾಣವಾಗುತ್ತಿರುವ ‘ಧರ್ಮಶಾಲೆ’ಯ ಸ್ಥಳ ಮತ್ತೂಂದು ವಿಶೇಷ. ಈ ‘ಧರ್ಮಶಾಲೆ’ ಕಟ್ಟಡಕ್ಕಾಗಿ ನಗರದ ನರಸಿಂಗರಾವ್‌ ರಾಮಚಂದ್ರರಾವ್‌ ನಾಡಿಗೇರ ಅವರು ರೈಲು ನಿಲ್ದಾಣ ಪಕ್ಕದ ಜಾಗೆಯನ್ನು ಆಗಿನ ಸ್ಥಳೀಯ ಆಡಳಿತಕ್ಕೆ ದಾನವಾಗಿ ನೀಡಿದ್ದರು. ಮಹಾತ್ಮ ಗಾಂಧಿಧೀಜಿಯವರು 1934 ಮಾರ್ಚ್‌ 1ರಂದು ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ‘ಧರ್ಮಶಾಲೆ’ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿದ್ದರು. ಅಂದು ಈ ‘ಧರ್ಮಶಾಲೆ’ ಊರೂರು ಸಂಚರಿಸುವ ಸ್ವಾತಂತ್ರ್ಯ ಹೋರಾಟಗಾರಿಗೆ ಹಾಗೂ ಬೇರೆ ಊರುಗಳಿಂದ ಹಾವೇರಿ ಆಗಮಿಸುವ ಜನರಿಗೆ ತಂಗಲು ಅನುಕೂಲ ಕಲ್ಪಿಸಿತ್ತು. ಇಂಥ ಐತಿಹಾಸಿಕ ಮಹತ್ವವುಳ್ಳ ಸ್ಥಳದಲ್ಲಿಯೇ ಗಾಂಧಿ ಭವನ ನಿರ್ಮಾಣಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಮಹಾತ್ಮ ಗಾಂಧೀಜಿಯವರ ಮೌಲ್ಯಗಳನ್ನು ವಿವಿಧ ರೀತಿಯಲ್ಲಿ ನಿರಂತರ ಪ್ರಚುರ ಪಡಿಸುವ ಗುರಿ ಹೊಂದಿರುವ ವಾರ್ತಾ ಇಲಾಖೆ, ಗಾಂಧಿ ಭವನ ನಿರ್ಮಾಣ ಹಾಗೂ ಮುಂದಿನ ಪೂರಕ ಯೋಜನೆಗಳಿಗೆ ಎರಡು ಎಕರೆ ಜಾಗೆ ಕೇಳಿತ್ತು. ಆದರೆ, ಜಿಲ್ಲಾಡಳಿತ ಸ್ಥಳ ಮೌಲ್ಯದ (ಗಾಂಧೀಜಿಯವರ ಪಾದಸ್ಪರ್ಶದ ಸ್ಥಳ) ಕಾರಣಕ್ಕಾಗಿ ಕೇವಲ 18 ಗುಂಟೆ ವಿಸ್ತೀರ್ಣ ಇರುವ ‘ಧರ್ಮಶಾಲೆ’ ಜಾಗೆಯಲ್ಲಿಯೇ ಗಾಂಧಿ ಭವನ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟಿತು. ಹೀಗಾಗಿ ನಗರದ ಮಧ್ಯವರ್ತಿ ಎನಿಸಿದ ಈ ಸ್ಥಳದಲ್ಲಿಯೇ ಭವ್ಯ ಭವನ ನಿರ್ಮಾಣಗೊಳ್ಳುತ್ತಿದೆ.

ಮಹಾತ್ಮ ಗಾಂಧಿಧೀಜಿ ಕುರಿತ ಪುಸ್ತಕ ಪ್ರಕಟಣೆ, ಅವರ ತತ್ವ ವಿಚಾರಗಳ ಪ್ರಚಾರ, ಅವರ ಜೀವನ ಚರಿತ್ರೆಯ ಪ್ರಸಾರ ಸೇರಿದಂತೆ ಪ್ರತಿ ವರ್ಷ ಗಾಂಧಿಧೀಜಿಯವರ ಕುರಿತು ಒಂದಿಲ್ಲೊಂದು ಕಾರ್ಯಕ್ರಮ ಹಾಕಿಕೊಂಡು ಬಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧೀಜಿಯವರ ಮೌಲ್ಯಗಳ ಪುನರುತ್ಥಾನಕ್ಕಾಗಿ ಶಾಶ್ವತ ಕಟ್ಟಡ ಹೊಂದಿ ಪ್ರತಿ ವರ್ಷ ಅರಿವು, ಅಭಿವೃದ್ಧಿ ಚಟುವಟಿಕೆ ನಡೆಸಲು ‘ಗಾಂಧಿಭವನ’ ನಿರ್ಮಾಣ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.