ಕೊರೆತ ತಡೆಗೆ ಗೇಬಿಯನ್‌ ಗೋಡೆ ಪ್ರಸ್ತಾವ

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್

Team Udayavani, Jul 19, 2019, 5:00 AM IST

t-53

ಪಡುಬಿದ್ರಿ: ಪ್ರವಾಸೀ ಆದ್ಯತೆಯ ಬ್ಲೂ ಫ್ಲ್ಯಾಗ್ ಬೀಚ್ಗಾಗಿ ಶೇ. 64ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಸಮುದ್ರ ಕೊರೆತದಿಂದ ರಕ್ಷಿಸಿಕೊಳ್ಳಲು ಇದುವರೆಗೆ ಪ್ರಸ್ತಾವಿಸಿರದ ಗೇಬಿಯನ್‌ ಗೋಡೆಯ ರಚನೆ ಇನ್ನಷ್ಟೇ ಆಗಬೇಕಿದೆ.

ಪ್ರವಾಸೋದ್ಯಮ ಇಲಾಖೆಯ ಸುಪರ್ದಿಯಲ್ಲಿ ಕೇಂದ್ರ ಸರಕಾರದ ಸುಮಾರು 8 ಕೋಟಿ ರೂ. ವೆಚ್ಚದ ಬ್ಲೂ ಫ್ಲ್ಯಾಗ್ ಬೀಚ್ ಯೋಜನೆಗೆ ರಾಜ್ಯ ಸರಕಾರವು ಹಸಿರು ನಿಶಾನೆಯನ್ನು ಈಗಾಗಲೇ ತೋರಿದೆ. ಗುತ್ತಿಗೆದಾರ ಕಂಪೆನಿಯು ಈ ಬಾರಿಯ ಮಳೆಗಾಲದಲ್ಲಿ ಸತತವಾಗಿ ಸಂಭವಿಸುತ್ತಿರುವ ಸಮುದ್ರ ಕೊರೆತ, ರಸ್ತೆಗೆ ಆಗುತ್ತಿರುವ ಹಾನಿಯನ್ನು ಗಮನಿಸಿ ಗೇಬಿಯನ್‌ ಗೋಡೆಗೆ ಪ್ರಾಶಸ್ತ್ಯ ನೀಡಿದೆ. ಈ ಕುರಿತ ಪ್ರಸ್ತಾವನೆಗೆ ಸರಕಾರದ ಅನುಮೋದನೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಇಲಾಖೆಯ ಅನುಮೋದನೆಯೊಂದಿಗೆ ಸೀಕಾಮ್‌(ಸೊಸೈಟಿ ಫಾರ್‌ ಇಂಟಗ್ರೇಟೆಡ್‌ ಕೋಸ್ಟಲ್ ಮ್ಯಾನೇಜ್‌ಮೆಂಟ್) ಮೂಲಕ ಈ ಯೋಜನೆಯನ್ನು ಪಡುಬಿದ್ರಿ ಬೀಚ್‌ನ ಎಂಡ್‌ ಪಾಯಿಂಟ್‌ನಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಗುರ್ಗಾಂವ್‌ನ ಎ ಟುಝಡ್‌ ಕಂಪೆನಿಯು ಬ್ಲೂ ಫ್ಲ್ಯಾಗ್ಬೀಚ್‌ನ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಉಸ್ತುವಾರಿ ವಹಿಸಿಕೊಂಡಿದೆ.

ಮಳೆಗಾಲವಾಗಿರುವುದರಿಂದ ಕಾಮಗಾರಿಗಳು ನಿಧಾನ ವಾಗಿವೆ. ಮಣ್ಣು ತುಂಬಿಸುವಿಕೆ, ಬಿದಿರಿನ ಕಾಯಕಗಳು, ವಾಕಿಂಗ್‌ ಬೇ, ಮಕ್ಕಳ ಆಟದ ಅಂಗಣ ಕಾಮಗಾರಿಗಳು ಇನ್ನಷ್ಟೇ ಆಗಬೇಕಿವೆ.

ವಾಕಿಂಗ್‌ ಬೇ ಸಮುದ್ರಪಾಲು
ಸಮುದ್ರ ತೀರದಲ್ಲಿದ್ದ ಕಾಂಡ್ಲಾ ಸಸ್ಯಗಳನ್ನು ಕೀಳಲಾಗಿದ್ದು ಯೋಜನಾ ಪ್ರದೇಶಕ್ಕೆ ಸಮುದ್ರ ತೀರದ ಪೂರ್ಣ ನೋಟ ಲಭ್ಯವಾಗುವಂತೆ ಮಾಡಲಾಗಿತ್ತು. ‘ವಾಕಿಂಗ್‌ ಬೇ’ಗಾಗಿ ಪ್ರಾಥಮಿಕ ಹಂತದ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಇದು ಸಮುದ್ರ ಕೊರೆತಕ್ಕೆ ನಾಶವಾಗಿದೆ.

ಏನಿದು ಗೇಬಿಯನ್‌ ಗೋಡೆ?
ಗೇಬಿಯನ್‌ ಗೋಡೆ ಅಗತ್ಯ ಎಂಬುದನ್ನು ಜಿಲ್ಲಾಡಳಿತವೂ ಮನಗಂಡಿದೆ. ಹೆದ್ದಾರಿ ಇಕ್ಕೆಲಗಳ ಗುಡ್ಡಗಳು ಜರಿಯದಂತೆ ಕಬ್ಬಿಣದ ಜಾಲರಿ ಅಳವಡಿಸುವ ಮಾದರಿಯಲ್ಲೇ ಸಮುದ್ರದಲೆಗಳಿಂದ ಬೀಚನ್ನು ರಕ್ಷಿಸುವ ನಿಟ್ಟಿನಲ್ಲಿ ಕಬ್ಬಿಣದ ಜಾಲರಿಯೊಳಕ್ಕೆ ಕಲ್ಲುಬಂಡೆಗಳನ್ನು ಅಳವಡಿಸಿ ರಚಿಸಲಾಗುವ ಗೋಡೆಯನ್ನು ಗೇಬಿಯನ್‌ ಗೋಡೆ ಎನ್ನಲಾಗುತ್ತದೆ.

ಗೇಬಿಯನ್‌ ಗೋಡೆಗೆ 10 ಲಕ್ಷ ರೂ. ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿಕೊಡಲಾಗಿದೆ. ಅನುಮತಿ ಇನ್ನಷ್ಟೇ ಸಿಗಬೇಕಿದೆ. ಕೆಆರ್‌ಐಡಿಎಲ್ ಪ್ರವಾಸೋದ್ಯಮ ಇಲಾಖೆಯ 80 ಲಕ್ಷ ರೂ.ಗಳ ವಿವಿಧ ಕಾಮಗಾರಿಗಳನ್ನು ಈಗಾಗಲೇ ಬ್ಲೂ ಫ್ಲ್ಯಾಗ್ ಬೀಚ್ ಪ್ರದೇಶದಲ್ಲಿ ಕೈಗೆತ್ತಿಕೊಂಡಿದೆ.
– ಕೃಷ್ಣ ಹೆಬ್ಸೂರ್‌,ಕೆಆರ್‌ಐಡಿಎಲ್ ಕಾರ್ಯಕಾರಿ ಎಂಜಿನಿಯರ್‌

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.