ಕಾರ್ಖಾನೆಗೆ ಬೆಂಕಿ ಬಿದ್ದಿದ್ದು ಅಸಹಜವೆ?

ಒಳಗಿದ್ದವರಿಗೆ ಮೊದಲೇ ಗೊತ್ತಿತ್ತಾ?• ಅವಘಡಕ್ಕೆ ಕಾರ್ಖಾನೆ ಮಾಲೀಕರ ಬೇಜವಾಬ್ದಾರಿ ಕಾರಣ

Team Udayavani, Jul 19, 2019, 10:27 AM IST

19-July-6

ಹುಮನಾಬಾದ: ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಹೊತ್ತಿ ಉರಿದ ಓಂ ಎಂಟರ್‌ ಪೈಜಸ್‌ ಕಾರ್ಖಾನೆ.

ಹುಮನಾಬಾದ: ಪಟ್ಟಣ ಹೊರ ವಲಯದ ಆರ್‌ಟಿಒ ಚೆಕ್‌ಪೊಸ್ಟ್‌ ಹತ್ತಿರದ ಕೈಗಾರಿಕಾ ಪ್ರದೇಶದ ಕಾರ್ಖಾನೆವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿವೆ.

ಇಲ್ಲಿನ ಕೈಗಾರಿಕಾ ಪ್ರದೆಶದಲ್ಲಿನ ಓಂ ಎಂಟರ್‌ ಪ್ರೈಜಸ್‌ನಲ್ಲಿ ಸೋಮವಾರ ಬೆಳಗ್ಗೆ ಅಲ್ಪ ಪ್ರಮಾಣದಲ್ಲಿದ್ದ ಅಗ್ನಿಯು ಗಾಳಿಯ ಪರಿಣಾಮ ಕೆನ್ನಾಲಿಗೆ ಚಾಚಿದ್ದರಿಂದ ನೋಡು ನೋಡುತ್ತಲೇ ಸಾರ್ವಜನಿಕರ ಕಣ್ಣೆದುರಿಗೆ ಧಗಧಗನೆ ಉರಿಯತೊಡಗಿತು. ಆದರೆ ಸಕಾಲಕ್ಕೆ ಅಗತ್ಯಕ್ಕೆ ತಕ್ಕಷ್ಟು ಅಗ್ನಿಶಾಮಕ ಸಿಬ್ಬಂದಿ 5ವಾಹನಗಳ ಸಮೇತ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಶೇ.50ರಷ್ಟು ಭಸ್ಮವಾಗಿ ಇನ್ನುಳಿದ ಶೇ.50ರಷ್ಟು ಯಂತ್ರಗಳಿಗೆ ಹಾನಿಯುಂಟಾಗಿತ್ತು.

ಪರವಾನಗಿ ರಹಿತ ಕಾರ್ಖಾನೆ: ಕೆಲವು ವರ್ಷಗಳ ಹಿಂದೆ ರೈಸ್‌ಮಿಲ್ ಆಗಿದ್ದ ಈ ಕಾರ್ಖಾನೆಯನ್ನು ತೆಲಂಗಾಣದ ಹೈದರಾಬಾದ ಮೂಲದ ಎಂ.ಡಿ.ಆಸೀಫ್‌ ಎನ್ನುವವರು 2014ನೇ ಸಾಲಿನಲ್ಲಿ 5ವರ್ಷ ಅವಧಿ ಪರವಾನಗಿಯೊಂದಿಗೆ, ಪೇಂಟಿಂಗ್‌ನಲ್ಲಿ ಮಿಶ್ರಣ ಮಾಡುವ ಟಿನ್ನಲ್ ಹೆಸರಿನ ಬಿಳಿ ದ್ರವ ಉತ್ಪಾದಿಸುತ್ತಿದ್ದರು. ಆದರೆ ಪಡೆದ ಪರವಾನಗಿಯ ಅವಧಿಯು 2019ರ ಜನವರಿ ತಿಂಗಳಲ್ಲೇ ಪೂರ್ಣಗೊಂಡಿದ್ದರೂ ಅದನ್ನು ನವೀಕರಿಸಿಕೊಂಡಿರಲಿಲ್ಲ.

ಸುರಕ್ಷತೆ ಕೊರತೆ: ಎಲ್ಲಕ್ಕೂ ಮುಖ್ಯವಾಗಿ ಒಂದು ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದಾಗ ಹಾನಿಯಿಂದ ಬಚಾವ್‌ ಆಗಲು ಅಗತ್ಯ ಸೌಲಭ್ಯ ಇರಲೇಬೇಕು. ಕಾರ್ಖಾನೆಯಲ್ಲಿ ಯಾರೊಬ್ಬ ಕಾರ್ಮಿಕರಿಗೆ ಸುರಕ್ಷತಾ ಕವಚ ಸೇರಿದಂತೆ ಕಾರ್ಮಿಕರಿಗೆ ಯಾವುದೇ ಮೂಲಸೌಲಭ್ಯ ಇರಲ್ಲದಿರುವುದು ಅಧಿಕಾರಿಗಳ ತಂಡ ನಡೆಸಿದ ಪರಿಶೀಲನೆ ವೇಳೆ ಗಮನಕ್ಕೆ ಬಂದಿತ್ತು.

ಕಾರ್ಖಾನೆ ವ್ಯಾಪ್ತಿ ಒಳಗೆ ಮತ್ತು ಮುಂಭಾಗದಲ್ಲಿ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಲು ಎಲ್ಲ ಕಾರ್ಖಾನೆ ಮತ್ತು ಪ್ರಮುಖ ವ್ಯಾಪಾರ ಕೇಂದ್ರಗಳಿಗೆ ಪೊಲೀಸರು ಕಟ್ಟುನಿಟ್ಟಿನ ಆದೇಶ ನೀಡಿದ್ದರು. ಆದರೂ ಈ ಕಾರ್ಖಾನೆಯಲ್ಲಿ ಇದನ್ನು ಪಾಲಿಸದಿರುವುದು, ಅಗ್ನಿಅವಘಡ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌, ಡಿವೈಎಸ್ಪಿ ಅವರ ಗಮನಕ್ಕೆ ಬಂದಿದೆ. ಅಲ್ಲಿ ಕ್ಯಾಮೆರಾ ಅಳವಡಿಸಿದ್ದು ಕೇವಲ ತೋರಿಕೆಗೆ ಮಾತ್ರ ಎಂಬುದು ಗಮನಕ್ಕೆ ಬಂದಿದೆ.

ತ್ಯಾಜ್ಯ ವಿಲೇವಾರಿಗಿಲ್ಲ ವ್ಯವಸ್ಥೆ: ಈ ಎಲ್ಲದರ ಮಧ್ಯ ಈ ಕಾರ್ಖಾನೆಯಿಂದ ನಿತ್ಯ ಬಿಡುಗಡೆಯಾಗುವ ತ್ಯಾಜ್ಯವನ್ನು ಸಾರ್ವಜನಿಕರು ಹಾಗೂ ಕಾರ್ಮಿಕರ ಅನಾರೋಗ್ಯಕ್ಕೆ ಕಾರಣವಾಗದ ರೀತಿ ವಿಲೇವಾರಿಗೆ ಪ್ರತ್ಯೆಕ ವ್ಯವಸ್ಥೆ ಮಾಡದಿರುವುದು ಕಂಡುಬಂದಿತು.

ಅಗ್ನಿ ಅವಘಡದಿಂದ ಇಡೀ ಪಟ್ಟಣವೇ ಭಯದಲ್ಲಿ ಕಾಲ ಕಳೆಯತ್ತಿರುವ ವಿಷಯ ಗೊತ್ತಿದ್ದರೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುವ ಕನಿಷ್ಟ ಸೌಜನ್ಯ ತೋರದೇ ಇರುವುದು ಬೇಜವಾಬ್ದಾರಿಗೆ ನಿದರ್ಶನವಾಗಿದೆ.

ದೂರವಾಣಿ ಕರೆ ಸ್ವೀಕರಿಸುವುದಿಲ್ಲ: ಕಾರ್ಖಾನೆಯಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಈ ಕಾರ್ಖಾನೆಗಳಿಗೆ ಭೇಟಿ ನೀಡಿ, ನಿಯಮ ಪಾಲನೆ ಕುರಿತು ಪರಿಶೀಲಿಸಿದ್ದು ತೀರಾ ವಿರಳ. ಪರಿಶೀಲಿಸಿ ಕ್ರಮ ಕೈಗೊಳ್ಳುವುದು ದೂರದ ಮಾತು. ಇಂಥ ಘಟನೆಗಳು ಸಂಭವಿಸಿದ ಸಂದರ್ಭದಲ್ಲಾದರೂ ಭೇಟಿ ನೀಡುವ ಕನಿಷ್ಟ ಸೌಜನ್ಯ ಅವರಲ್ಲಿಲ್ಲ. ಅಲ್ಲದೇ ಕಾರ್ಖಾನೆಗಳಲ್ಲಿ ಅಗ್ನಿ ಅವಘಡದ ಸಂಭವಿಸಿದಾಗ ದೂರವಾಣಿ ಕರೆ ಮಾಡಿದಾಗ ಸಹಾಯಕ ನಿರ್ದೇಶಕ ಮಂಜಪ್ಪ ಅವರು ಕರೆ ಸ್ವೀಕರಿಸುವುದಿಲ್ಲ ಎಂದು ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮs್ ತಿಳಿಸಿದರು.

ಒಳಗಿದ್ದವರಿಗೆ ಮೊದಲೇ ಗೊತ್ತಿತ್ತಾ?: ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಒಳಗಿದ್ದ ಕೆಲವು ಕಾರ್ಮಿಕರು ಘಟನೆ ಹಿನ್ನೆಲೆಯಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ. ಹಾಗಾದರೆ ಒಳಗಿದ್ದ ಕಾರ್ಮಿಕರಿಗೆ ಈ ಘಟನೆಗೂ ಮುನ್ನ ಅದರ ಬಗ್ಗೆ ಮಾಹಿತಿ ಇತ್ತೆ ಎಂಬ ಇತ್ಯಾದಿ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಾರ್ಖಾನೆಗೆ ಬೆಂಕಿ ತಗುಲಿದ್ದು ಆಕಸ್ಮಿಕ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿಲ್ಲ. ಹಾನಿ ನೆಪದಲ್ಲಿ ವಿಮೆ ಕಂಪೆನಿಯಿಂದ ಹಣ ವಸೂಲಿಗೆ ಈ ಸಂಚು ರೂಪಿಸಿರುವ ಸಾಧ್ಯತೆಗಳಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆ ನಡೆಯುತ್ತಿವೆ. ಅವಘಡಕ್ಕೆ ಕಾರ್ಖಾನೆ ಮಾಲೀಕರ‌ ಬೇಜವಾಬ್ದಾರಿ ಕಾರಣ. ಈ ಮಧ್ಯ ಆತನನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸುತ್ತೇವೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳುತ್ತಿದ್ದಾರೆ.

ಕ್ರಮ ಕೈಗೊಂಡಿಲ್ಲ: ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ನಿಯಮ ಉಲ್ಲಂಘಿಸಿ ಏನೆಲ್ಲ ಉತ್ಪಾದಿಸುತ್ತಿರುವುದು, ಕಾರ್ಖಾನೆಗಳು ಬಿಡುವ ರಾಸಾಯನಿಕ ತ್ಯಾಜ್ಯದಿಂದಾಗಿ ಜನ-ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿರುವ ವಿಷಯ ಸಾರ್ವಜನಿಕರು, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳ ಗಮನದಲ್ಲಿದ್ದರೂ, ಯಾರೊಬ್ಬರೂ ಯಾವುದೇ ಕಾರ್ಖಾನೆಗಳ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳುತ್ತಿಲ್ಲ. ಈ ಬೇಜವಾಬ್ದಾರಿ ಹಿಂದೆ ಈ ಎಲ್ಲರ ಸ್ವಾರ್ಥವಿದೆ ಎಂಬುದು ಸಾರ್ವಜನಿಕರ ಆರೋಪ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.