ಆಧಾರ್ಗೆ ಜನತೆ ಹರಸಾಹಸ, ಅಲೆದಾಟ, ಹೈರಾಣ
ಬೆಳಗಿನ ಜಾವದಿಂದಲೇ ನೋಂದಣಿ ಕೇಂದ್ರದಲ್ಲಿ ಕ್ಯೂ•ಗ್ರಾಪಂನಲ್ಲೂ ಕೇಂದ್ರ ತೆರೆಯಲು ಸಾರ್ವಜನಿಕರ ಆಗ್ರಹ
Team Udayavani, Jul 19, 2019, 12:52 PM IST
ಪಿರಿಯಾಪಟ್ಟಣದ ಎಸ್ಬಿಐ ಮುಂಭಾಗ ಆಧಾರ್ ಕಾರ್ಡ್ ತಿದ್ದುಪಡಿಗಾಗಿ ಬೆಳಗಿನ ಜಾವ 3 ಗಂಟೆಯಿಂದ ಸರತಿ ಸಾಲಿನಲ್ಲಿ ಕಾಯುತ್ತಿರುವ ಸಾರ್ವಜನಿಕರು.
ಪಿರಿಯಾಪಟ್ಟಣ: ಪ್ರಸ್ತುತ ಸರ್ಕಾರದ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಅತ್ಯಗತ್ಯವಾಗಿದೆ. ಆದರೆ, ಆಧಾರ್ ಕಾರ್ಡ್ ಹಾಗೂ ತಿದ್ದುಪಡಿ ಮಾಡಿಸುವುದು ದೊಡ್ಡ ಸವಾಲಾಗಿದೆ. ಕೆಲಸ ಕಾರ್ಯ ಬಿಟ್ಟು ತಿಂಗಳು ಕಾಲ ಅಲೆದರೂ ನೋಂದಣಿ ಮಾಡಿಸಲಾಗುತ್ತಿದೆ. ಇದರ ಜೊತೆಗೆ ತಿದ್ದುಪಡಿಗಾಗಿ ಖಾಸಗಿ ಏಜೆನ್ಸಿಯವರು ಹಣ ಸುಲಿಗೆ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಟ್ಟಣದಲ್ಲಿ ಎರಡು ಕಡೆ ಮಾತ್ರ ಆಧಾರ್ ಕಾರ್ಡ್ ತಿದ್ದುಪಡಿ ಮಾಡಲಾಗುತ್ತಿದೆ. ಇದಕ್ಕಾಗಿ ಸಾರ್ವಜನಿಕರು ತಿಂಗಳುಗಟ್ಟಲೆ ಅಲೆದಾಡು ವುದಲ್ಲದೇ ಅರ್ಜಿ ಪಡೆಯಲು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಎಸ್ಬಿಐ ಎರಡು ಶಾಖೆಗಳಲ್ಲಿ ಒಬ್ಬರೇ ಏಜೆನ್ಸಿ ಪಡೆದು ತಿದ್ದುಪಡಿ ಕೇಂದ್ರ ತೆರದಿದ್ದಾರೆ. ಇಲ್ಲಿ ಅರ್ಜಿ ಪಡೆಯಲು ಪ್ರತಿ ಗುರುವಾರ ಮಾತ್ರ ದಿನಾಂಕ ನಿಗದಿ ಮಾಡಿದ್ದು, ತಾಲೂಕಿನ ವಿವಿಧ ಭಾಗಗಳಿಂದ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ವಯೋವೃದ್ಧರು ಸರತಿ ಸಾಲಿನಲ್ಲಿ ಬೆಳಗಿನ ಜಾವ 3 ಗಂಟೆಗೆ ಬಂದು ಕಾಯುವಂತಾಗಿದೆ. ಅಲ್ಲದೇ ದೂರು ಊರಿ ನಿಂದ ಬರುವವರು ಬಸ್ ಸೌಲಭ್ಯವಿಲ್ಲದಿರು ವುದರಿಂದ ಒಂದು ದಿನ ಮುಂಚೆಯೇ ಪಟ್ಟಣದಲ್ಲಿ ಆಶ್ರಯಪಡೆಯಬೇಕಾಗಿದೆ.
ಮುನ್ನಾ ದಿನ ಬರಬೇಕು: ಗ್ರಾಮೀಣ ಪ್ರದೇಶ ಗಳಿಂದ ಬರುವ ಜನರಿಗೆ ಸಮರ್ಪಕವಾಗಿ ಸಾರಿಗೆ ಸೌಲಭ್ಯವಿಲ್ಲದಿರುವುದರಿಂದ ಒಂದು ದಿನ ಮುಂಚೆಯೇ ಪಟ್ಟಣಕ್ಕೆ ಬಂದು ವಸತಿ ನಿಲಯ ಅಥವಾ ಸಂಬಂಧಿಕರ ಮನೆಗಳಲ್ಲಿ ಅಶ್ರಯಪಡೆಯಬೇಕಾಗಿದೆ. ಪ್ರತಿ ದಿನ 25 ಮಂದಿಗೆ ಮಾತ್ರ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗುತ್ತಿದ್ದು, ವಾರಕೊಮ್ಮೆ ಅರ್ಜಿ ವಿತರಣೆ ಮಾಡುತ್ತಿರುವುದು ಜನರ ನೂಕುನುಗ್ಗಲಿಗೆ ಕಾರಣವಾಗಿದೆ.
ಕೇಂದ್ರ ಸ್ಥಗಿತ: ಪಟ್ಟಣದಲ್ಲಿ ನೆಮ್ಮದಿ ಕೇಂದ್ರ, ಅಂಚೆ ಕಚೇರಿ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ ಕಡ್ಡಾಯವಾಗಿ ಆಧಾರ್ ನೋಂದಣಿ ಕೇಂದ್ರ ತೆರೆಯುವಂತೆ ಕೇಂದ್ರ ಸರ್ಕಾರ ಸೂಚಿಸಿದ್ದರೂ ನೆಮ್ಮದಿ ಕೇಂದ್ರ, ಅಂಚೆ ಕಚೇರಿಯಲ್ಲಿ ಈ ಹಿಂದೆ ತೆರೆಯಲಾಗಿದ್ದು ಆಧಾರ್ ಕೇಂದ್ರಗಳನ್ನು ಏಕಾಏಕಿ ಮುಚ್ಚಿರುವುದು ಸಾರ್ವಜನಿಕರ ಅನಾನುಕೂಲಕ್ಕೆ ಕಾರಣವಾಗಿದೆ.
ಹಣ ವಸೂಲಿ: ಆಧಾರ್ ಕೇಂದ್ರವನ್ನು ನಿರ್ವಹಿಸುತ್ತಿರುವವರು ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಗೆ ದೂರು ನೀಡಲಾಗಿತ್ತು. ಈ ಕುರಿತು ವ್ಯವಸ್ಥಾಪಕರು ಎಚ್ಚರಿಕೆ ನೀಡಿದ್ದರೂ ಸಹ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮಂಜುನಾಯಕ ದೂರಿದ್ದಾರೆ. ಆಧಾರ್ ತಿದ್ದುಪಡಿಯಾದ ನಂತರ ಮುದ್ರಿತ ಪ್ರತಿಯನ್ನು ತೆಗೆಯಲು ಆಧಾರ್ ನಿರ್ವಹಣೆ ಕೇಂದ್ರ ನಿರ್ವಹಣೆ ಮಾಡುತ್ತಿರುವವರಿಗೆ 100 ರೂ. ನೀಡಬೇಕಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಆಧಾರ್ ನೋಂದಣಿ ಹಾಗೂ ತಿದ್ದುಪಡಿಗಾಗಿ ಇನ್ನಿಲ್ಲದಂತೆ ಪರದಾಡುವಂತಾಗಿದೆ. ಬೆಳ್ಳಂ ಬೆಳಗ್ಗೆಯೇ ಕೆಲಸ ಕಾರ್ಯಗಳನ್ನು ಬಿಟ್ಟು ಆಧಾರ್ ಕೇಂದ್ರಕ್ಕೆ ಬಂದು ದಿನಪೂರ್ತಿ ಕಾಯುವಂತಾಗಿದೆ. ಕೂಡಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹೆಚ್ಚು ಆಧಾರ್ ನೋಂದಣಿ ಕೇಂದ್ರಗಳನ್ನು ತೆರೆದು ಸಕಾಲದಲ್ಲಿ ಸೌಲಭ್ಯ ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
● ದೇವೇಗೌಡ ಪಿ.ಎನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.