‘ವರ್ಷದ ನ್ಯೂಝಿಲ್ಯಾಂಡಿಗ’ ಪ್ರಶಸ್ತಿ ರೇಸ್ ನಲ್ಲಿ ಬೆನ್ ಸ್ಟೋಕ್ಸ್!

ನೈಟ್ ಹುಡ್ ಗೌರವಕ್ಕೂ ಬೆನ್ ಸ್ಟೋಕ್ಸ್ ಹೆಸರು ಶಿಫಾರಸು

Team Udayavani, Jul 19, 2019, 7:11 PM IST

Ben-Stokes-726

ವೆಲ್ಲಿಂಗ್ಟನ್ : ವಿಚಿತ್ರವೆಂದರೆ ಇದೇ ಇರ್ಬೇಕು. ಈ ಸಲದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ತನ್ನ ದೇಶದ ತಂಡ ಸೋಲಲು ಪ್ರಮುಖ ಕಾರಣಕರ್ತನಾದವ ಆ ದೇಶದ ಉನ್ನತ ಗೌರವ ಪ್ರಶಸ್ತಿಗೆ ಶಿಫಾರಸುಗೊಳ್ಳುವುದೆಂದರೆ… ಹೌದು, ನ್ಯೂಝಿಲ್ಯಾಂಡ್ ಮೂಲದ ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಅವರು ಈ ಸಾಲಿನ ‘ವರ್ಷದ ನ್ಯೂಝಿಲ್ಯಾಂಡಿಗ’ ಪ್ರಶಸ್ತಿಗೆ ಶಿಫಾರಸುಗೊಂಡಿದ್ದಾರೆ.

ನ್ಯೂಝಿಲ್ಯಾಂಡ್ ಮೂಲದವರಾಗಿದ್ದು ಮತ್ತು ಸದ್ಯ ಇಂಗ್ಲೆಂಡ್ ಕ್ರಿಕೆಟ್ ತಂಡದ ಸದಸ್ಯರಾಗಿರುವ ಸ್ಟೋಕ್ಸ್ ಅವರು ಈ ಬಾರಿಯ ಫೈನಲ್ ನಲ್ಲಿ ಆಂಗ್ಲರ ಜಯದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಕೂಟದುದ್ದಕ್ಕೂ ಜಬರ್ದಸ್ತ್ ಆಟವನ್ನು ಪ್ರದರ್ಶಿಸಿದ್ದ ಸ್ಟೋಕ್ಸ್ ಅವರು ಕೂಟದಲ್ಲಿ ಒಟ್ಟು 465 ರನ್ ಗಳನ್ನು ಬಾರಿಸಿದ್ದರು ಮತ್ತು ಫೈನಲ್ ನಲ್ಲಿ ನಿರ್ಣಾಯಕ ಆಟವಾಡುವ ಮೂಲಕ 84 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಿದ್ದರು. ನ್ಯೂಝಿಲ್ಯಾಂಡ್ ತಂಡವನ್ನು ಫೈನಲ್ ವರೆಗೆ ಮುನ್ನಡೆಸಿದ ನಾಯಕ ಕೇನ್ ವಿಲಿಯಮ್ಸ್ ಅವರೂ ಸಹ ಈ ಪ್ರಶಸ್ತಿಯ ರೇಸ್ ನಲ್ಲಿದ್ದಾರೆ.

‘ಸ್ಟೋಕ್ಸ್ ಅವರು ಬ್ಲ್ಯಾಕ್ ಕ್ಯಾಪ್ಸ್ ಪರ ಆಟವಾಡದೇ ಇರಬಹುದು, ಆದರೆ ಕ್ರೈಸ್ಟ್ ಚರ್ಚ್ ನಲ್ಲಿ ಅವರು ಜನಿಸಿದ್ದಾರೆ, ಮತ್ತು ಅವರ ಹೆತ್ತವರು ಈಗಲೂ ಇಲ್ಲಿಯೇ ವಾಸಿಸುತ್ತಿದ್ದಾರೆ ಹಾಗೂ ಈ ನೆಲದ ಪೂರ್ವಜರೊಂದಿಗೆ ಸಂಬಂಧವನ್ನು ಹೊಂದಿದವರಾಗಿದ್ದು ಸ್ಟೋಕ್ಸ್ ಅವರು ನಮ್ಮವರೇ ಎಂದು ಹೇಳಿಕೊಳ್ಳುವ ಅನೇಕರು ಇಲ್ಲಿದ್ದಾರೆ’ ಎಂಬುದಾಗಿ ಈ ಪ್ರಶಸ್ತಿಯ ಮುಖ್ಯ ತೀರ್ಪುಗಾರರಾಗಿರುವ ಕ್ಯಾಮರೂನ್ ಬೆನ್ನೆಟ್ ಅವರ ಹೇಳಿಕೆಯನ್ನು ಉದ್ಧರಿಸಿ ಖಾಸಗಿ ವೆಬ್ ಸೈಟ್ ವರದಿ ಮಾಡಿದೆ.

ಮತ್ತೊಂದು ಬೆಳವಣಿಗೆಯಲ್ಲಿ ಪ್ರಪ್ರಥಮ ಬಾರಿಗೆ ಆಂಗ್ಲರ ನಾಡಿಗೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಸ್ಟೋಕ್ಸ್ ಅವರಿಗೆ ಬ್ರಿಟನ್ನಿನ ಅತ್ಯುನ್ನತ ಗೌರವ ನೈಟ್ ಹುಡ್ ಲಭಿಸುವ ಸೂಚನೆಯೂ ಸಿಕ್ಕಿದೆ. ಇಂಗ್ಲೆಂಡ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿರುವ ಬೋರಿಸ್ ಜಾನ್ಸನ್ ಮತ್ತು ಜೆರಿಮಿ ಹಂಟ್ ಇಬ್ಬರೂ ಸಹ ಸ್ಟೋಕ್ಸ್ ಅವರಿಗೆ ನೈಟ್ ಹುಡ್ ನೀಡಬೇಕೆಂದು ತಮ್ಮ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.

15 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನ್ಯೂಝಿಲ್ಯಾಂಡ್ ಪ್ರಜೆಗಳು ಈ ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳಲು ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಪರಿಗಣಿಸುವ ಅಂತಿಮ 10 ಜನರ ಹೆಸರನ್ನು ಡಿಸೆಂಬರ್ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಮತ್ತು 2020ರ ಫೆಬ್ರವರಿಯಲ್ಲಿ ಈ ಪ್ರಶಸ್ತಿಯ ವಿಜೇತರ ಹೆರಸನ್ನು ಘೋಷಿಸಲಾಗುತ್ತದೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.