ಜಿಲ್ಲೆಯಲ್ಲಿ ಹಳ್ಳ ಹಿಡಿದ ಫ‌ಸಲ್‌ ಬಿಮಾ ಯೋಜನೆ


Team Udayavani, Jul 20, 2019, 3:00 AM IST

jille-halla

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಲಕ್ಷಾಂತರ ಸಣ್ಣ, ಅತಿ ಸಣ್ಣ ರೈತರು ಇದ್ದರೂ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ಜಿಲ್ಲಾದ್ಯಂತ ಕೃಷಿ ಇಲಾಖೆ ನೋಂದಣಿಯಿಸಿರುವ ರೈತರ ಸಂಖ್ಯೆ ಬರೋಬ್ಬರಿ 377 ಮಂದಿ ಮಾತ್ರ.

ಹೌದು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯ ನೋಂದಣಿ ಕಾರ್ಯ ಜಿಲ್ಲಾದ್ಯಂತ ಕುಸಿತಗೊಂಡಿದ್ದು, ಒಂದಡೆ ಕಳೆದ ವರ್ಷದ ವಿಮೆ ಹಣ ಕೈ ಸೇರದ ಹಿನ್ನೆಲೆಯಲ್ಲಿ ಬೆಳೆ ವಿಮೆಗೆ ರೈತರು ನಿರಾಸಕ್ತಿ ತೋರಿದ್ದರೆ ಮತ್ತೂಂದಡೆ ಯೋಜನೆಯ ಅರಿವು ಇಲ್ಲದೇ ರೈತರು ಯೋಜನೆಯಿಂದ ಹೊರಗುಳಿಯುವಂತಾಗಿದೆ ಎಂಬ ಮಾತು ಜಿಲ್ಲೆಯ ರೈತಾಪಿ ಜನರಲ್ಲಿ ಕೇಳಿ ಬರುತ್ತಿದೆ.

ಜಿಲ್ಲಾದ್ಯಂತ ಬರೋಬ್ಬರಿ 1.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಸಾಗುವಳಿ ಇದ್ದು, ಜಿಲ್ಲೆಯಲ್ಲಿ ಒಟ್ಟು 2,14,355 ರೈತ ಕುಟುಂಬಗಳು ಇದ್ದರೆ ಆ ಪೈಕಿ 1,40,975 ಅತಿ ಸಣ್ಣ ರೈತರು ಹಾಗೂ 45, 637 ಮಂದಿ ಸಣ್ಣ ರೈತರು ಹಾಗೂ 27,743 ಮಂದಿ ಇತರೇ ರೈತರು ಇದ್ದಾರೆ. ಆದರೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ರೈತರು ಇದ್ದರೂ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆ ನೋಂದಣಿ ಈ ವರ್ಷ ಕುಂಠಿತಗೊಂಡಿರುವುದು ಕೃಷಿ ಇಲಾಖೆ ಕಾರ್ಯವೈಖರಿಯನ್ನು ಪ್ರಶ್ನಿಸುವಂತಾಗಿದೆ.

377 ಮಂದಿ ಮಾತ್ರ ನೋಂದಣಿ: ಮುಂಗಾರು ಆರಂಭಗೊಂಡ ಎರಡು ತಿಂಗಳಾದರೂ ಜಿಲ್ಲೆಯಲ್ಲಿ ಇದುವರೆಗೂ ಪಿಎಂಎಫ್ಬಿವೈ ಯೋಜನೆಗೆ ಕೇವಲ 377 ಮಂದಿ ರೈತರು ಮಾತ್ರ ಇದುವರೆಗೂ ನೋಂದಾಯಿಕೊಂಡಿದ್ದು, ಆ ಪೈಕಿ ಬಾಗೇಪಲ್ಲಿ ತಾಲೂಕಿನಲ್ಲಿ 1, ಚಿಕ್ಕಬಳ್ಳಾಪುರ 80. ಚಿಂತಾಮಣಿ ತಾಲೂಕಿನಲ್ಲಿ 32, ಗೌರಿಬಿದನೂರು ತಾಲೂಕಿನಲ್ಲಿ 140, ಗುಡಿಬಂಡೆ ತಾಲೂಕಿನಲ್ಲಿ 43 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 81 ಮಂದಿ ರೈತರು ಸೇರಿ ಒಟ್ಟು 377 ಮಂದಿ ರೈತರು ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ತಮ್ಮ ಹೆಸರುಗಳನ್ನು ನೋಂದಾಯಿಸಿರುವುದು ಬಿಟ್ಟರೆ ಜಿಲ್ಲೆಯಲ್ಲಿ ಶೇ.99 ರಷ್ಟು ರೈತರು ಬೆಳೆ ವಿಮಾ ಯೋಜನೆಯಿಂದ ದೂರು ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅದರಲ್ಲೂ ಕೃಷಿ ಸಚಿವರು ಜಿಲ್ಲೆಯವರೇ ಆಗಿದ್ದರೂ ಮಹತ್ವದ ಬೆಳೆ ವಿಮೆ ಯೋಜನೆ ಪ್ರಗತಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಸಮರ್ಪಕ ಮಾಹಿತಿ ಕೊರತೆ, ಬ್ಯಾಂಕುಗಳ ನಿರ್ಲಕ್ಷ್ಯದ ಜೊತೆಗೆ ಕೃಷಿ ಇಲಾಖೆ ರೈತರಲ್ಲಿ ಬೆಳೆ ವಿಮೆ ಯೋಜನೆಗಳ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವಲ್ಲಿ ವಿಫ‌ಲವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ಸಚಿವರ ಮಾತಿಗೂ ಕಿಮ್ಮತ್ತಿಲ್ಲ: ಜಿಲ್ಲೆಯಲ್ಲಿ ಬೆಳ ವಿಮೆ ಯೋಜನೆ ಬಗ್ಗೆ ರೈತರಲ್ಲಿರುವ ಗೊಂದಲ ನಿವಾರಿಸಿ ಅವರನ್ನು ಮನವೊಲಿಸಿ ಬೆಳೆ ವಿಮೆ ಯೋಜನೆಗೆ ಹೆಸರು ನೋಂದಾಯಿಸುವಂತೆ ಜಿಲ್ಲಾ ಉಸ್ತುವಾರಿಗಳಾದ ಕೃಷಿ ಸಚಿವರು ಹಲವಾರು ಬಾರಿ ಜಿಪಂ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಒತ್ತಿ ಒತ್ತಿ ಹೇಳಿದ್ದಾರೆ.

ಆದರೆ ಕೃಷಿ ಇಲಾಖೆ ಮಾತ್ರ ಇದುವರೆಗೂ ಬೆಳೆ ವಿಮೆ ವ್ಯಾಪ್ತಿಗೆ ತಂದಿರುವ ರೈತರ ಸಂಖ್ಯೆ ನೋಡಿದರೆ ಕೃಷಿ ಇಲಾಖೆ ಕಾರ್ಯವೈಖರಿ ಗೊತ್ತಾಗುತ್ತದೆ. ಕೃಷಿ ಸಚಿವರ ತವರಿನಲ್ಲಿಯೆ ಬರೀ 140 ಮಂದಿ ರೈತರು ನೋಂದಾಯಿಕೊಂಡಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇರುವ ಬಾಗೇಪಲ್ಲಿ, ಚಿಂತಾಮಣಿಯಲ್ಲಿ ಎರಡಂಕಿ ದಾಟಿಯೇ ಇಲ್ಲ.

ಕಳೆದ ವರ್ಷದ್ದೇ ವಿಮೆ ಬಂದಿಲ್ಲ: ಇನ್ನೂ ಈ ಪರಿ ಬೆಳೆ ವಿಮೆ ನೋಂದಣಿ ಪ್ರಗತಿ ಕುಂಠಿತಕ್ಕೆ ಕಳೆದ ವರ್ಷ ನೋಂದಣಿ ಮಾಡಿದ್ದ ರೈತರಿಗೆ ಇದುವರೆಗೂ ಬೆಳೆ ವಿಮೆ ಪರಿಹಾರ ಕೈ ಸೇರಿಲ್ಲ ಎಂಬ ಆರೋಪ ಜಿಲ್ಲೆಯ ರೈತರಿಂದ ಕೇಳಿ ಬರುತ್ತಿದೆ. ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೋಟ್ಯಂತರ ರೂ., ಬಾಕಿ ಇದೆ. ಜೊತೆಗೆ ಬೆಳೆ ವಿಮೆ ಕಂತು ದುಬಾರಿಯಾಗಿ ಎಂಬ ಮಾತು ರೈತರಿಂದ ಕೇಳಿ ಬರುತ್ತಿದೆ.

ಕಳೆದ ವರ್ಷ 24,854 ಮಂದಿ ನೋಂದಣಿ: ಕಳೆದ ವರ್ಷ ವಿವಿಧ ಬೆಳೆ ವಿಮೆ ಯೋಜನೆಗಳಡಿಯಲ್ಲಿ ಜಿಲ್ಲೆಯ ರೈತರು ಬರೋಬ್ಬರಿ 23,854 ಮಂದಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದರು ಆ ಪೈಕಿ ಬಾಗೇಪಲ್ಲಿ 8,340, ಚಿಕ್ಕಬಳ್ಳಾಪುರ 421, ಚಿಂತಾಮಣಿ 1,388, ಗೌರಿಬಿದನೂರು 7,841, ಗುಡಿಬಂಡೆ 2,895 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 3,969 ಮಂದಿ ಸೇರಿ ಒಟ್ಟು 24,854 ಮಂದಿ ರೈತರು ಬೆಳೆ ವಿಮೆ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಈ ವರ್ಷ ಬರೀ 377 ಮಂದಿ ಮಾತ್ರ ಬೆಳೆ ವಿಮೆಗೆ ಹೆಸರು ನೋಂದಾಯಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆ ನೋಂದಣಿ ಬಗ್ಗೆ ಜಿಲ್ಲೆಯ ರೈತರಲ್ಲಿ ಸಾಕಷ್ಟು ಅರಿವು ಮೂಡಿಸಲಾಗಿದೆ. ಕರಪತ್ರಗಳನ್ನು ಹಂಚಲಾಗಿದೆ. ಇದುವರೆಗೂ ಕೇವಲ 377 ಮಂದಿ ರೈತರು ಮಾತ್ರ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ.
-ಎಲ್‌.ರೂಪ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.