ದುರ್ವಾಸನೆಯಿಂದ ಉಸಿರಾಟ ತೊಂದರೆ, ತಲೆನೋವು

ಬಜಪೆ -ಕೈಕಂಬ ಪರಿಸರ; ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Team Udayavani, Jul 20, 2019, 5:26 AM IST

a

ಸಾಂದರ್ಭಿಕ ಚಿತ್ರ.

ಬಜಪೆ: ಒಂದು ವಾರದಿಂದ ಬಜಪೆ,ಪೆರ್ಮುದೆ, ಪೆರಾರ, ಕಂದಾವರ, ಗುರುಪುರ ಕೈಕಂಬ ಮತ್ತು ಆಸುಪಾಸಿನ ಪರಿಸರದಲ್ಲಿ ಸಹಿಸಲಸಾಧ್ಯವಾದ ದುರ್ವಾಸನೆ ಬರುತ್ತಿದ್ದು, ಸಾರ್ವಜನಿಕರಿಗೆ ಉಸಿರಾಟದ ಸಮಸ್ಯೆ, ತಲೆನೋವು,
ವಾಂತಿ ಮತ್ತಿತರ ತೊಂದರೆಗಳು ಉಂಟಾಗುತ್ತಿವೆ. ಕೈಗಾರಿಕೆಗಳು ಹೊರಸೂಸುವ ಅನಿಲ ಇದಕ್ಕೆ ಕಾರಣ ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ವಾಸನೆಯಿಂದಾಗಿ ಗುರುವಾರ ಬಜಪೆ ಹೈಸ್ಕೂಲ್‌ ಒಂದರ 200ರಷ್ಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಪರಿಸರದ ಜನರು ತೀವ್ರ ಆತಂಕಗೊಂಡಿದ್ದಾರೆ.

ಈ ಹಿಂದೆ ಪೆಟ್ರೋಲ್‌ನಂತೆ ವಾಸನೆ ಬರುತ್ತಿತ್ತು. ಬಜಪೆ ಪರಿಸರದಲ್ಲಿ ಗಿಡಗಳ ಮೇಲೆ ಬೂದಿಯೂ ಕಂಡುಬಂದಿತ್ತು. ಈಗ ಯಾವುದೋ ಅನಿಲದಂತೆ ಕೆಟ್ಟ ವಾಸನೆ ಬರಲಾರಂಭಿಸಿದೆ. ಹೀಗಾಗಿ ಸಾರ್ವಜನಿಕರು ಗೊಂದಲದ ಜತೆಗೆ ಆತಂಕದಲ್ಲಿದ್ದಾರೆ.

ವಿದ್ಯಾರ್ಥಿಗಳು ಅಸ್ವಸ್ಥ
ರಾಸಾಯನಿಕ ವಾಸನೆಯಿಂದ ಗುರುವಾರ ಮಧ್ಯಾಹ್ನದ ವೇಳೆ ಬಜಪೆ ಹೈಸ್ಕೂಲ್‌ನ 150ರಿಂದ 200 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಸನೆಯಿಂದಾಗಿ ತರಗತಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದಂತಹ ಸ್ಥಿತಿ ಉಂಟಾಗಿದ್ದು, ಶಾಲಾ ಮುಖ್ಯೋಪಾಧ್ಯಾಯರು ಕೊಡಲೇ ಬಜಪೆ ಪ್ರಾ.ಆ. ಕೇಂದ್ರದ ವೈದ್ಯರನ್ನು ಕರೆಸಿದ್ದಾರೆ. ವೈದ್ಯರು ತಂಡದೊಂದಿಗೆ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ಚಿಕಿತ್ಸೆ
ನೀಡಿದ್ದಾರೆ. ಜತೆಗೆ, ವಾಸನೆ, ಆರೋಗ್ಯ ಸಮಸ್ಯೆ ಬಗ್ಗೆ ಲಿಖೀತವಾಗಿ ದೂರು ಸಲ್ಲಿಸಲು ಸೂಚಿಸಿದ್ದಾರೆ.

ಇಂತಹ ಕೆಟ್ಟ ವಾಸನೆ ಲಘು ಪ್ರಮಾಣದಲ್ಲಿ ಒಂದು ವರ್ಷದಿಂದಲೇ ಇದೆ. ಆದರೆ ಯಾರೂ ಈ ಬಗ್ಗೆ ಗಮನ ನೀಡಿಲ್ಲ. ಒಂದು ವಾರದಿಂದ ವಾಸನೆಯ ತೀಕ್ಷ್ಣತೆ ಹೆಚ್ಚಿದೆ. ವಾಸನೆ ಕೊಳೆತ ಮೊಟ್ಟೆ, ಸಗಣಿ, ಮಲ ಇತ್ಯಾದಿಗಳ ವಾಸನೆಯ ಮಿಶ್ರಣದಂತಿದ್ದು, ಸಹಿಸಲು ಸಾಧ್ಯವಿಲ್ಲ. ಅದರ ಮೂಲವೂ ಗೊತ್ತಾಗುತ್ತಿಲ್ಲ. ಮಧ್ಯಾಹ್ನ ಮತ್ತು ಸಂಜೆ ತೀಕ್ಷ್ಣತೆ ಹೆಚ್ಚು. ಶಾಲೆಯಲ್ಲಿ ಮಕ್ಕಳು ಮೂಗಿಗೆ ಕೈ ಹಿಡಿದು ಕೂರುವ ಪರಿಸ್ಥಿತಿ ಇದೆ. ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಜಪೆ ಗ್ರಾ.ಪಂ.ಗೆ ಲಿಖೀತ ಮನವಿ ನೀಡಲಾಗುತ್ತದೆ ಎಂದು ಬಜಪೆ ಸೈಂಟ್‌ ಜೋಸೆಫ್Õ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಲ್ವಿನ್‌ ನೊರೊನ್ಹಾ ಹೇಳಿದ್ದಾರೆ.

ಕಲಿಕೆಗೂ ತೊಂದರೆ
ಈ ಕೆಟ್ಟ ವಾಸನೆಯಿಂದ ಪರಿಸರದ ಜನರಿಗೆ ಉಸಿರಾಟದ ತೊಂದರೆ, ವಾಂತಿ, ವಾಕರಿಕೆ, ಹೊಟ್ಟೆ ತೊಳಸಿದಂತಾಗುತ್ತದೆ. ನಮಗೆ ಕಲಿಕೆಯಲ್ಲಿ ಏಕಾಗ್ರತೆಗೆ ಅಡ್ಡಿಯಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಎತ್ತರ ಪ್ರದೇಶಗಳಿಗೆ ಹೆಚ್ಚು
ಕೆಟ್ಟ ವಾಸನೆ ಎತ್ತರ ಪ್ರದೇಶಗಳಲ್ಲಿ ಕಾಡುವುದು ಹೆಚ್ಚು. ಆಸುಪಾಸಿನಲ್ಲಿ ಹಲವಾರು ಕಂಪೆನಿಗಳಿದ್ದು, ವಿಶೇಷ ಆರ್ಥಿಕ ವಲಯವೂ ಇದೆ. ಯಾವ ಕಂಪೆನಿಯಿಂದ ಈ ದುರ್ವಾಸನೆ ಗಾಳಿಯನ್ನು ಸೇರುತ್ತಿದೆ ಎಂಬುದನ್ನು ಜಿಲ್ಲಾಡಳಿತವು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಜಪೆ ಮತ್ತು ಆಸುಪಾಸಿನ ಪ್ರದೇಶದಲ್ಲಿ ಈ ಕೆಟ್ಟ ವಾಸನೆ ಬರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌ಗೆ ಮೌಖೀಕವಾಗಿ ದೂರು ನೀಡಲು ಸೂಚಿಸಲಾಗಿದೆ. ಆದರೆ ಇದುವರೆಗೆ ಯಾರೂ ಲಿಖೀತವಾಗಿ ದೂರು ನೀಡಿಲ್ಲ.
– ಸಾಯೀಶ್‌ ಚೌಟ, ಪಿಡಿಒ, ಬಜಪೆ

ವಾಸನೆ ಎಲ್ಲಿಂದ, ಹೇಗೆ ಬರುತ್ತದೆ ಎಂದು ಗೊತ್ತಿಲ್ಲ. ಶಾಲೆಯವರು ಮಕ್ಕಳ ಆರೋಗ್ಯ ದೃಷ್ಟಿಯಿಂದ ನನ್ನನ್ನು ಕರೆಸಿದ್ದಾರೆ. ಶಾಲೆಗೆ ಹೋಗಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ವಾಸನೆ ಬರುತ್ತದೆ, ತೊಂದರೆ ಆಗುತ್ತಿದೆ ಎಂದು ತಮ್ಮ ಸಮಸ್ಯೆ ಹೇಳಿದ್ದಾರೆ. ಲಿಖೀತವಾಗಿ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮತ್ತು ಬಜಪೆ ಗ್ರಾಮ ಪಂಚಾಯತ್‌ಗೆ ದೂರು ನೀಡಿ ಎಂದು ಶಾಲೆಯವರಿಗೆ ತಿಳಿಸಲಾಗಿದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.
– ಡಾ| ಚೇತನ್‌
ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ

ಗಂಜಿಮಠ, ಕಂದಾವರ, ಪೆರಾರ, ಮಳಲಿ, ಕಾಜಿಲ ಪ್ರದೇಶಕ್ಕೂ ಈ ವಾಸನೆ ಬರುತ್ತಿದ್ದು, ಯಾವುದೋ ಅನಿಲದಂತಿದೆ. ಇದರಿಂದ ಕೆಮ್ಮು, ಉಸಿರಾಟಕ್ಕೆ ತೊಂದರೆ ಆಗುತ್ತಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು.
-ನವೀನ್‌, ಕೈಕಂಬ ನಿವಾಸಿ

ಸುಂಕದಕಟ್ಟೆ ಪರಿಸರದಲ್ಲಿಯೂ ಈ ಕೆಟ್ಟ ವಾಸನೆ ಬರುತ್ತಿದೆ. ಮಧ್ಯಾಹ್ನ ವೇಳೆ ಹೆಚ್ಚು. ತಡೆಲಾಗದ ದುರ್ವಾಸನೆಯಿಂದ ಒಂದು ಬದಿ ತಲೆ ನೋವು ಆರಂಭವಾಗುತ್ತದೆ.
– ಹರೀಶ್‌ ಪೈ, ಕತ್ತಲ್‌ಸಾರ್‌ ನಿವಾಸಿ

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.