ಕುಡಿವ ನೀರಿಗಾಗಿ ರೈಲು ನಿಲ್ದಾಣಕ್ಕೆ ಸಾರ್ವಜನಿಕರ ಲಗ್ಗೆ

ರೈಲ್ವೆ ಅಧಿಕಾರಿಗಳು-ಆರ್‌ಪಿಎಫ್‌ ಸಿಬ್ಬಂದಿ ಕೆಂಗಣ್ಣಿಗೆ ಗುರಿ

Team Udayavani, Jul 20, 2019, 9:54 AM IST

20-July-1

ವಾಡಿ: ಪಟ್ಟಣದಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಸ್ಥಳೀಯರು ಖಾಲಿ ಕೊಡ ಹಿಡಿದು ರೈಲು ನಿಲ್ದಾಣದ ನಳಗಳಿಗೆ ಮುಗಿಬಿಳುತ್ತಿದ್ದಾರೆ.

ವಾಡಿ: ಪಟ್ಟಣದಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜನರು ಖಾಲಿ ಕೊಡಗಳನ್ನು ಹೊತ್ತುಕೊಂಡು ದೂರದ ಸ್ಥಳಗಳಿಗೆ ಹೋದರೂ ನೀರಿನ ಮೂಲಗಳು ಪತ್ತೆಯಾಗದೆ ಪರದಾಡುವಂತಾಗಿದೆ.

ಪಟ್ಟಣದ ಪುರಸಭೆಗೆ ಸೇರಿದ ಜಾಕ್‌ವೆಲ್ ಸಮೀಪದ ಕುಂದನೂರು ಭೀಮಾ ನದಿಯಲ್ಲಿದೆ. ಭೀಮಾ ನದಿ ನೀರಿನಿಂದ ಮುಕ್ತವಾಗಿ ಐದಾರು ತಿಂಗಳುಗಳೇ ಕಳೆದಿವೆ. ಬೆಣ್ಣೆತೋರಾ ಜಲಾಶಯದ ನೀರು ಕಾಗಿಣಾ ನದಿ ಮೂಲಕ ಹರಿದು ಕುಂದನೂರಿನ ಸಂಗಮಕ್ಕೆ ಕೂಡಿ ಭೀಮೆ ಮೂಲಕ ಜಾಕ್‌ವೆಲ್ ಸೇರುತ್ತದೆ. ಸದ್ಯ ಭೀಮೆ ಮತ್ತು ಕಾಗಿಣಾ ಎರಡರಲ್ಲೂ ನೀರಿಲ್ಲ. ಎದುರಾದ ಜಲಕ್ಷಾಮದಿಂದ ಜಲಚರಗಳು ಜೀವ ಕಳೆದುಕೊಂಡರೆ, ಜನಜೀವನ ಸಂಕಟದಿಂದ ಕೂಡಿದೆ.

ಪಟ್ಟಣದಲ್ಲಿ ಪದೇಪದೇ ನೀರಿನ ಸಮಸ್ಯೆ ಉಂಟಾಗುತ್ತಿದ್ದರೂ ಪುರಸಭೆ ಆಡಳಿತ ಸದಸ್ಯರು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಸ್ಥಳೀಯರು ಖಾಲಿ ಕೊಡಗಳನ್ನು ಹಿಡಿದು ಅಲೆಯುವ ಪ್ರಸಂಗಗಳಿಗೆ ಕಡಿವಾಣ ಬೀಳುತ್ತಿಲ್ಲ. ಬೋರ್‌ವೆಲ್ಗಳ ನೀರು ಬಳಕೆಗೆ ಮಾತ್ರ ಸೀಮಿತವಾಗಿದ್ದು ಕುಡಿಯಲು ಯೋಗ್ಯವಿಲ್ಲ. ಬಾವಿಗಳು ಹೂಳು ತುಂಬಿ ನೀರಿಲ್ಲದಂತಾಗಿವೆ. ನಳಗಳಿಂದ ನೀರು ಸರಬರಾಜು ಸ್ಥಗಿತಗೊಂಡಿದ್ದರಿಂದ ಮಳೆಗಾಲದ ಆರಂಭದಲ್ಲೂ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗಿದೆ.

ಎಸಿಸಿ ಸಿಮೆಂಟ್ ಕಂಪನಿಗೆ ಸೇರಿದ ಕಾರ್ಮಿಕರ ಕಾಲೋನಿ ಹಾಗೂ ರೈಲು ನಿಲಾಣ್ದಗಳಿಗೆ ಹೋಗಿ ನೀರು ತರಬೇಕಾದ ದುಸ್ಥಿತಿ ಈ ಭಾಗದಲ್ಲಿ ನಿರ್ಮಾಣವಾಗಿದೆ. ಪ್ಲಾಟ್ಫಾರ್ಮ್ ಮೇಲಿನ ಪ್ರಯಾಣಿಕರ ಅನುಕೂಲಕ್ಕಿರುವ ನಳಗಳಿಗೆ ಮಹಿಳೆಯರು ಕೊಡ ಹಿಡಿದು ಕುಡಿಯುವ ನೀರು ಹಿಡಿಯುತ್ತಿದ್ದಾರೆ. ಅಪಾಯಕಾರಿ ರೈಲು ಹಳಿಗಳನ್ನು ದಾಟಿ ನಿಲ್ದಾಣ ಸೇರಬೇಕು. ಮಧ್ಯದಲ್ಲಿ ರೈಲುಗಳು ಬಂದು ನಿಂತರೆ ರೈಲಿನ ಕೆಳಗೋ ಅಥವಾ ಬೋಗಿಯ ಒಳಗೋ ನುಗ್ಗಿ ನಳಗಳಿಗೆ ಲಗ್ಗೆಯಿಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ರೈಲ್ವೆ ಅಧಿಕಾರಿಗಳು ಮತ್ತು ಆರ್‌ಪಿಎಫ್‌ ಸಿಬ್ಬಂದಿಗಳ ಕೆಂಗಣ್ಣಿಗೆ ಗುರಿಯಾಗಿ ಸ್ಥಳೀಯರು ಅವಮಾನಕ್ಕೆ ಈಡಾಗುತ್ತಿದ್ದಾರೆ. ಜನರು ಕಳೆದ ಐದಾರು ದಿನಗಳಿಂದ ಖಾಲಿ ಕೊಡ ಹಿಡಿದು ನೀರಿಗಾಗಿ ಪರದಾಡುತ್ತಿದ್ದರೂ ಪುರಸಭೆ ಅಧಿಕಾರಿಗಳು ಮತ್ತು ಚುನಾಯಿತ ಸದಸ್ಯರು ಮೌನ ವಹಿಸಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.