ಕಿರುತೆರೆಯಲ್ಲಿ ಶ್ರುತಿ


Team Udayavani, Jul 21, 2019, 5:37 AM IST

Shruti,-serial

ಕನ್ನಡ ಚಿತ್ರರಂಗದ 80-90ರ ದಶಕದ ಜನಪ್ರಿಯ ನಾಯಕ ನಟಿ ಶ್ರುತಿ ಇಂದಿಗೂ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವವರು. ಸಿನಿಮಾ, ರಿಯಾಲಿಟಿ ಶೋಗಳು, ರಾಜಕಾರಣ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಶ್ರುತಿ ಈಗ ಧಾರಾವಾಹಿಯ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇಲ್ಲಿಯವರೆಗೆ ಸಿನಿಮಾ, ರಂಗಭೂಮಿ, ರಿಯಾಲಿಟಿ ಶೋಗಳಲ್ಲಿ ಹಲವು ಪಾತ್ರಗಳನ್ನು ಸುಲಲಿತವಾಗಿ ನಿರ್ವಹಿಸಿರುವ ಶ್ರುತಿ, ಇದೇ ಮೊದಲ ಬಾರಿಗೆ ಧಾರಾವಾಹಿಯೊಂದರ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಇನ್ನೊಂದು ವಿಶೇಷವೆಂದರೆ, ಅದೂ ಕೂಡ ಧಾರಾವಾಹಿಯ ಅತಿಥಿ ಪಾತ್ರದಲ್ಲಿ!

ಹೌದು, ಕನ್ನಡದ ಖಾಸಗಿ ವಾಹಿನಿ ಯೊಂದರಲ್ಲಿ ಪ್ರಸಾರವಾಗುತ್ತಿರುವ ಸೇವಂತಿ ಧಾರಾವಾಹಿ ಈಗ ನೂರನೆ ಸಂಚಿಕೆಯ ಹೊಸ್ತಿಲಿನಲ್ಲಿದ್ದು, ಪ್ರೇಕ್ಷಕರನ್ನು ಮತ್ತಷ್ಟು ಮನರಂಜಿಸಿ, ರೋಚಕ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಶ್ರುತಿ ಅವರನ್ನು ಗೆಸ್ಟ್‌ ಅಪೀಯರೆನ್ಸ್‌ ನಲ್ಲಿ ಪ್ರೇಕ್ಷಕರ ಮುಂದೆ ಕರೆತರುವ ಆಲೋಚನೆ ಧಾರಾವಾಹಿ ತಂಡದ್ದು.

ಮೊದಲ ಬಾರಿಗೆ ಧಾರಾವಾಹಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವುದರ ಬಗ್ಗೆ ಮಾತನಾಡುವ ಶ್ರುತಿ, “ನಾನೊಬ್ಬ ಕಲಾವಿದೆಯಾಗಿ ಎಲ್ಲಾ ಥರದ ಪಾತ್ರಗಳಲ್ಲೂ ಕಾಣಿಸಿ ಕೊಳ್ಳಲು ಬಯಸುತ್ತೇನೆ. ಅಭಿನಯದ ವಿಚಾರಕ್ಕೆ ಬಂದಾಗ ನನಗೆ ರಂಗಭೂಮಿ, ಸಿನಿಮಾ, ಸೀರಿಯಲ್‌ ಅಂಥ ಯಾವ ಬೇಧ-ಭಾವವೂ ಇಲ್ಲ. ಸಿಕ್ಕ ಪಾತ್ರಕ್ಕೆ ನ್ಯಾಯ ಒದಗಿಸಿ ಅಭಿನಯಿಸುವುದಷ್ಟೇ ನನ್ನ ಕೆಲಸ. ಧಾರಾವಾಹಿಯ ಪಾತ್ರ ನನಗೆ ಹೊಸದಿರಬಹುದು, ಆದರೆ ಕಿರುತೆರೆ ನನಗೆ ಹೊಸದಲ್ಲ. ಈಗಾಗಲೆ ಕಿರುತೆರೆಯ ಕೆಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿ, ಜಡ್ಜ್ ಆಗಿ ಕೆಲಸ ಮಾಡಿದ್ದೇನೆ. ಈಗ ಇದೊಂದು ಹೊಸ ಅವಕಾಶ ಬಂದಿದೆ. ಅದನ್ನೂ ಖುಷಿಯಿಂದ ಸ್ವೀಕರಿಸಿದ್ದೇನೆ’ ಎನ್ನುತ್ತಾರೆ.

ಇನ್ನೊಂದು ವಿಶೇಷವೆಂದರೆ, ಐದು ಭಾಷೆಯಲ್ಲಿ ರಿಲೀಸ್‌ ಆಗುತ್ತಿರುವ ದಮಯಂತಿ ಟೀಸರ್‌ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್‌ ನಟರ ಬಳಿ ಅದ್ಧೂರಿಯಾಗಿ ರಿಲೀಸ್‌ ಮಾಡಿಸುವ ಪ್ಲಾನ್‌ನಲ್ಲಿದೆ ಚಿತ್ರತಂಡ. ಆಗಸ್ಟ್‌ ವೇಳೆಗೆ ದಮಯಂತಿಯ ಆಡಿಯೋ ಹೊರಬರಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್‌ ವೇಳೆಗೆ ದಮಯಂತಿ ಥಿಯೇಟರ್‌ನಲ್ಲಿ ದರ್ಶನ ಕೊಡಲಿದ್ದಾಳೆ.

ಒಟ್ಟಾರೆ ಹೊಸ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ಸಿದ್ಧತೆಯಲ್ಲಿ ಶ್ರುತಿ ಅವರಿದ್ದರೆ, ಶ್ರುತಿ ಅವರ ಸ್ಪೆಷಲ್‌ ಎಂಟ್ರಿಯಿಂದ ಹೊಸ ಜೋಶ್‌ನಲ್ಲಿ ಮುನ್ನುಗ್ಗುವ ನಿರೀಕ್ಷೆಯಲ್ಲಿದೆ ಧಾರಾವಾಹಿಯ ತಂಡ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.