ಸರ್ಕಾರದಲ್ಲಿ ಸಿದ್ದು ನಂ.1 ಅತೃಪ್ತ: ಶ್ರೀನಿವಾಸ ಪ್ರಸಾದ್
Team Udayavani, Jul 21, 2019, 3:05 AM IST
ನಂಜನಗೂಡು: ರಾಜ್ಯದಲ್ಲಿ ಶಾಸಕಾಂಗ ಹಾಗೂ ನ್ಯಾಯಾಂಗದ ನಡುವೆ ನಡೆಯುತ್ತಿರುವ ಜಟಾಪಟಿ ದುರದೃಷ್ಟಕರ. ಇದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವೇ ಕಾರಣ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ದೂರಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಬರ್-1 ಅತೃಪ್ತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದ ವಿರುದ್ಧ ಮೊದಲ ಅತೃಪ್ತಿ ಅವರದ್ದಾಗಿದೆ. ಕುಮಾರಸ್ವಾಮಿಯವರ ಇಂದಿನ ಈ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಕಾರಣ. ಈ ಗುಟ್ಟು ಕುಮಾರಸ್ವಾಮಿ ಹಾಗೂ ದೇವೇಗೌಡರಾದಿಯಾಗಿ ಎಲ್ಲರಿಗೂ ಗೊತ್ತು. ಆದರೆ, ಅಧಿಕಾರ ಅವರ ಬಾಯಿ ಕಟ್ಟಿದೆ ಎಂದರು.
ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡರೂ ಸಾಧ್ಯವಾದಷ್ಟು ಕಾಲ ಅಧಿಕಾರದಲ್ಲಿ ಮುಂದುವರಿಯಲು ಹುನ್ನಾರ ನಡೆಸುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ. ಇದರಲ್ಲಿ ಯಾವುದೇ ಸಂಶಯವಿಲ್ಲ. ತಾಂತ್ರಿಕವಾಗಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗಲೇ ರಾಜ್ಯದ ರಾಜಕಾರಣಕ್ಕೆ ಹಿಡಿದ ಗ್ರಹಣಕ್ಕೆ ಮೋಕ್ಷ ಸಿಗಲಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸಿರಲಿಲ್ಲ. ಆದರೆ, ಸೋತು ನಿವೃತ್ತಿಯಾಗುವುದಕ್ಕಿಂದ ಗೆದ್ದು ನಿವೃತ್ತಿಯಾಗೋಣ ಎಂಬ ಏಕೈಕ ಅಭಿಲಾಷೆಯಿಂದ ಚುನಾವಣೆಗೆ ಸ್ಪರ್ಧಿಸಿದೆ. ಈಗ ಗೆದ್ದಾಗಿದೆ, ನನ್ನ ರಾಜಕಾರಣದ ಆಸೆ ಪೂರೈಸಿದೆ.
-ವಿ.ಶ್ರೀನಿವಾಸ ಪ್ರಸಾದ್, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ