ಸದನಕ್ಕೆ ಬಂದು ಹಕ್ಕುಚ್ಯುತಿ ಮಂಡಿಸಲಿ


Team Udayavani, Jul 21, 2019, 3:05 AM IST

nale-sada

ಮೈಸೂರು: “ಶಾಸಕ ಎಚ್‌.ವಿಶ್ವನಾಥ್‌ ವಿರುದ್ಧ ವಿಧಾನಸಭೆಯಲ್ಲಿ ನಾನು ಮಾಡಿರುವ ಆರೋಪಗಳಿಗೆ ಬದ್ಧನಿದ್ದೇನೆ. ನನ್ನ ಆರೋಪದಲ್ಲಿ ತಪ್ಪಿದ್ದರೆ, ಸೋಮವಾರ ಅವರು ವಿಧಾನಸಭೆಗೆ ಬಂದು ನಾನು ಹೇಳಿದ್ದು ಸರಿಯಲ್ಲ ಎಂದು ಸಾಬೀತು ಪಡಿಸಲಿ. ರಾಜ್ಯದ ಜನರ ಕ್ಷಮೆ ಕೋರಿ, ನಾನು ರಾಜಕೀಯ ಜೀವನದಿಂದಲೇ ನಿವೃತ್ತಿಯಾಗುತ್ತೇನೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಸವಾಲು ಹಾಕಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ವಿಶ್ವನಾಥ್‌ ಹೇಳಿದ್ದಾರೆ. ಅವರಿಗೆ ನಿಜವಾಗಿಯೂ ಮಾನ ಇದ್ದರೆ, ಸದನದಲ್ಲೇ ಹಕ್ಕುಚ್ಯುತಿ ಮಂಡಿಸಿ, ನೋಡೋಣ. ತಾವು ಕಳಂಕ ರಹಿತರು ಎಂದು ಮುಂಬೈನಲ್ಲಿ ಕುಳಿತು ಹೇಳಿದರೆ ಸಾಲದು. ಆತ್ಮಸಾಕ್ಷಿ ಇದ್ದರೆ ಸೋಮವಾರ ವಿಧಾನಸಭೆಗೆ ಬಂದು ಕುಮಾರಸ್ವಾಮಿ ಕೋರುವ ವಿಶ್ವಾಸಮತದಲ್ಲಿ ಭಾಗಿಯಾಗಿ. ನಾನು ಮಾಡಿರುವ ಆರೋಪ ಸತ್ಯವೆಂದು ಯಾವುದೇ ದೇವಸ್ಥಾನಕ್ಕೆ ಕರೆದರೂ ಪ್ರಮಾಣ ಮಾಡುವೆ. ಅವರು ಇಲ್ಲವೆಂದು ಹೇಳುವುದಾದರೆ ಪ್ರಮಾಣ ಮಾಡಲಿ’ ಎಂದರು.

“ಮೋದಿಯವರು ಕಾರ್ಪೋರೇಟ್‌ ಹಣ ತಂದು ರಾಜ್ಯದಲ್ಲಿ “ಆಪರೇಷನ್‌ ಕಮಲ’ಕ್ಕೆ ಮುಂದಾಗಿದ್ದಾರೆ. ನನಗೂ ಅಂಥ ಆಫ‌ರ್‌ ಕೊಟ್ಟಿದ್ದರು. ನನಗೆ ಮಂತ್ರಿಗಿರಿನೂ ಬೇಡ, ಹಣನೂ ಬೇಡ. ಯಾವ ಆಸೆಗೆ ಹೋಗಲಿ ಅಂದಿದ್ದವರು, ಈಗ ಯಾವ ರಾಜಕೀಯ ಆಸೆ ಇಟ್ಟುಕೊಂಡು ಮುಂಬೈಗೆ ಹೋಗಿದ್ದಾರೆ?. ವೈಯಕ್ತಿಕವಾಗಿ ಯಾರಿಂದಲೂ ಹಣ ಪಡೆದಿಲ್ಲ ಎಂದು ನಾನು ಹೇಳುತ್ತೀನಿ. ಅವರಿಗೆ ಅದು ಸಾಧ್ಯನಾ’ ಎಂದು ಪ್ರಶ್ನಿಸಿದರು. “ಅವರಿಗೆ ದುಡ್ಡಿನ ಅವಶ್ಯಕತೆ ಇರಬಹುದು, ಇಲ್ಲದೆಯೂ ಇರಬಹುದು. ಆದರೆ, ತಮಗೆ ಸಾಲವಿದೆ ಎಂದು ನನ್ನ ಬಳಿ ಹೇಳಿಕೊಂಡಿದ್ದರು. ಹೀಗಾಗಿ, ಸಾಲ ತೀರಿಸಿಕೊಳ್ಳಲು ಮುಂಬೈಗೆ ಹೋಗಿರಬಹುದು’ ಎಂದು ಟೀಕಿಸಿದರು.

ಜಿ.ಟಿ.ದೇವೇಗೌಡ ಸೇರಿ ಅನೇಕರು ಎಚ್‌.ವಿಶ್ವನಾಥ್‌ ಪಕ್ಷಕ್ಕೆ ಬೇಡವೆಂದು ಹೇಳಿದ್ದರು. ಹುಣಸೂರು ಕ್ಷೇತ್ರದಿಂದ ಪ್ರಜ್ವಲ್‌ ರೇವಣ್ಣ ಅಥವಾ ಹರೀಶ್‌ ಗೌಡರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ಆದರೆ, ನಾನು ವಿಶ್ವನಾಥ್‌ ಪರ ವಹಿಸಿದ್ದೆ. ನಾನು ಅಂದೇ ಬೇಡ ಅಂದಿದ್ದರೆ, ಕುಮಾರಸ್ವಾಮಿಗೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಡೆವಲಪ್ಪರ್‌. ನಾನು ಚುನಾವಣೆಯಲ್ಲಿ ಒಮ್ಮೆ ಸೋತು, ಸತತ ಮೂರು ಬಾರಿ ಗೆದ್ದಿದ್ದೇನೆ. ನನಗೆ ವ್ಯವಹಾರ ಇದೆ. ಅವರಿಗೆ ಏನಿದೆ ವ್ಯವಹಾರ?. 9 ಚುನಾವಣೆಗೆ ಹಣ ಎಲ್ಲಿಂದ ಬಂತು ಎಂದು ಹೇಳಲಿ ನೋಡೋಣ?. ರಾಜಕೀಯವಾಗಿ ಪುನರ್ಜನ್ಮ ಕೊಟ್ಟ ಜೆಡಿಎಸ್‌ನ್ನು ಎಂದಿಗೂ ಮರೆಯಲಾರೆ ಎಂದಿದ್ದ ವಿಶ್ವನಾಥ್‌ ಅವರ ಮತ್ತಷ್ಟು ವಿಚಾರಗಳನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವೆ.
-ಸಾ.ರಾ.ಮಹೇಶ್‌, ಪ್ರವಾಸೋದ್ಯಮ ಸಚಿವ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.