ಅನಿಶ್ಚಿತತೆಯಲ್ಲಿ ಮಂಜೇಶ್ವರ ರೈಲ್ವೇ ಮೇಲ್ಸೇತುವೆ ಜೀವಭಯದಲ್ಲಿ ಜನತೆ


Team Udayavani, Jul 21, 2019, 5:19 AM IST

20VNR-PIC01

ವಿದ್ಯಾನಗರ:ಅಪಘಾತಗಳ ಆಗರವಾಗಿರುವ ಮಂಜೇಶ್ವರ ಮೇಲ್ಸೇತುವೆ ಅನಿಶ್ಚಿತತೆಯಲ್ಲೇ ಉಳಿದು ಶಾಪಮೋಕ್ಷಕ್ಕಾಗಿ ಕಾಯುತ್ತಿದೆ. ಜೀವಭಯದಿಂದ ದೈನಂದಿನ ಅಗತ್ಯಗಳಿಗಾಗಿ ಹಳಿದಾಟುವ ಸಾವಿರಾರು ಮಂದಿಯ ನಿರೀಕ್ಷೆ ತುಕ್ಕುಹಿಡಿದು ಮೂಲೆಸೇರಿದೆ. ಹಲವಾರು ಸಾವು ನೋವುಗಳಿಗೆ ಕಾರಣವಾಗಿರುವ ಮೇಲ್ಸೇತುವೆಯ ನಿರ್ಮಾಣಕಾರ್ಯದಲ್ಲಿ ಅಧೀಕೃತರು ತೋರುವ ಅನಾಸ್ಥೆ ಜನತೆಯ ಪಾಲಿಗೆ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.

ಇರುವುದೊಂದೇ ದಾರಿ
ಹೆದ್ದಾರಿಯಿಂದ ಮಂಜೇಶ್ವರ ಒಳಪೇಟೆಗೆ ತೆರಳಬೇಕಾದರೆ ರೈಲು ಹಳಿಯನ್ನು ದಾಟಿಯೇ ಸಾಗಬೇಕಾಗಿದ್ದು ಪ್ರತಿನಿತ್ಯ ಸಾವಿರಾರು ಮಂದಿ ಈ ಅಪಾಯಕಾರಿ ಹಾದಿಯನ್ನು ಆಶ್ರಯಿಸುತ್ತಿದ್ದಾರೆ. ರೈಲು ಪ್ರಯಾಣಿಕರಿಗೆ ರೈಲು ನಿಲ್ದಾಣವನ್ನು ದಾಟಲು ಮೇಲ್ಸೇತುವೆ ಇದೆ. ಆದರೆ ಒಳಪೇಟೆಯಿಂದ ಸುಮಾರು 250 ಮೀಟರ್‌ ದೂರದಲ್ಲಿ ಈ ಮೇಲ್ಸೇತುವೆ ಇದ್ದು ಅದನ್ನು ದಾಟಿ ಹೆದ್ದಾರಿಯಲ್ಲಿರುವ ಬಸ್ಸು ತಂಗುದಾಣ ತಲುಪಲು ಕಡಿಮೆಯೆಂದರೆ ಒಂದು ಕಿಲೋ ಮೀಟರ್‌ ಸಂಚರಿಸಬೇಕು. ಆದುದರಿಂದ ಇಲ್ಲಿನ ಜನತೆ ಅಪಾಯಕಾರಿಯಾದ ರೀತಿಯಲ್ಲಿ ಹಳಿ ದಾಟುವ ಸಾಹಸ ಮಾಡುತ್ತಿದ್ದಾರೆ.

ಇದೇ ಸ್ಥಳದಲ್ಲಿ ಗೂಡ್ಸ್‌ ರೈಲನ್ನು ವಾರಗಟ್ಟಲೆ ನಿಲ್ಲಿಸಲಾಗುತ್ತಿದ್ದು ಅದರ ಅಡಭಾಗದಿಂದ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ನುಸುಳಿಕೊಂಡು ಸಾಗುತ್ತಾರೆ. ಇದರಂದ ಕಂಗೆಟ್ಟ ಜನತೆ ಇಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದೆಯಾದರೂ ಇದುವರೆಗೂ ಯಾವುದೇ ಫಲ ದೊರಕಿಲ್ಲ.

ನಿರಂತರ ಅವಘಡ
ನಿರಂತರ ಅವಘಡಗಳಿಗೆ ಕಾರಣವಾಗುತ್ತಿರುವ ಮಂಜೇಶ್ವರ ರೈಲ್ವೇ ನಿಲ್ದಾಣದ ಸಮೀಪದ ಕ್ರಾಸಿಂಗ್‌ನಲ್ಲಿ ಮೇಲ್ಸೇತುವೆ ನಿರ್ಮಿಸಬೇಕೆಂಬ ಒತ್ತಡಕ್ಕೆ ಮಣಿದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಗಿತ್ತು. ತಜ್ಞ ಅಧಿಕಾರಿಗಳ ಸಲಹೆಯಂತೆ ಗುತ್ತಿಗೆ ನೀಡಿ ಸೇತುವೆ ನಿರ್ಮಿಸುವ ಬಗ್ಗೆ ಚರ್ಚಿಸಲಾಗಿತ್ತು. ಮಾತ್ರವಲ್ಲದೆ ಸುಮಾರು ಒಂದೂವರೆ ಕೋಟಿ ವೆಚ್ಚ ತಗಲುವ ಅಂದಾಜು ಹಾಕಲಾಯಿತು. ಆದರೆ ಅಂದು ಜಿಲ್ಲಾ ರೈಲ್ವೇ ವಿಭಾಗದ ಪ್ರಬಂಧಕರು ಸಹಿತ ಅಕಾರಿಗಳು ಸ್ಥಳ ಸಂದರ್ಶಿಸಿ ನಾಗರಿಕರಿಂದ ಮಾಹಿತಿ ಪಡೆದು ಯೋಜನೆಯ ನೀಲನಕಾಶೆ ತಯಾರಿಸಿದ್ದರು. ಆದರೆ ಅದಾಗಿ ವರ್ಷಗಳೇ ಕಳೆದರೂ ಯಾರೂ ಇತ್ತ ತಿರುಗಿ ನೋಡಲಿಲ್ಲ. ಅಪಘಾತ ನಡೆದಾಗ ಮಾತ್ರ ಎಚ್ಚೆತ್ತುಕೊಳ್ಳುವ ಜನಪ್ರತಿನಿಧಿಗಳು ಹಾಗೂ ಇತರ ಅಧಿಕಾರಿಗಳು ಕೆಲವೇ ದಿನಗಳಲ್ಲಿ ಮೌನವಾಗುತ್ತಿರುವುದು ಸ್ಥಳೀಯ ಆತಂಕವನ್ನು ಹೆಚ್ಚಿಸಿದೆ. ಇನ್ನೊಂದು ದುರಂತಕ್ಕೆ ಸಾಕ್ಷಿಯಾಗುವ ಮುನ್ನ ಇವರು ಎಚ್ಚೆತ್ತುಕೊಳ್ಳುವರೆಂಬ ನಂಬಿಕೆಯೇ ಜನರಿಗೆ ಇಲ್ಲವಾಗಿದೆ.

ಜಿಲ್ಲೆಯಲ್ಲಿ ಅತಿ ಹೆಚ್ಚು ರೈಲು ನಿಲ್ದಾಣಗಳಿವೆ. 17 ನಿಲ್ದಾಣಗಳಲ್ಲೂ ಅದರದ್ದೇ ಆದ ಸಮಸ್ಯೆ ತಪ್ಪಿದ್ದಲ್ಲ. ಕಾಸರಗೋಡು ಸಂಸದ ರಾಜ್‌ಮೋಹನ್‌ ಉಣ್ಣಿತ್ತಾನ್‌ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಇಲ್ಲಿಗೆ ಭೇಟಿಯಿತ್ತಾಗ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಮಂಜೇಶ್ವರದಲ್ಲಿ ಸೇತುವೆ ನಿರ್ಮಾಣ ಅಗತ್ಯವೆಂದು ಮನಗಂಡು ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಸಂಸದರಾದ ಮೇಲೆ ಯಾವುದೇ ಆಸಕ್ತಿ ತೋರಿಲ್ಲ ಎಂದು ನಾಗರಿಕರು ಆರೋಪಿಸುತ್ತಿದ್ದಾರೆ.

ಶ್ರಮಿಸುತ್ತಿದ್ದೇವೆ.

ಸುಮಾರು 15 ವರ್ಷಗಳಿಂದ ಈ ಮೇಲ್ಸೇತುವೆ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ನಿರಂತರವಾಗಿ ಸಂಸದರನ್ನು, ಸಚಿವರನ್ನು ಹಾಗೂ ಸಂಬಂಸಿದ ಅಧಿಕಾರಿಗಳನ್ನು ಭೇಟಿಯಾಗಿ ನಿವೇದನೆ ಸಲ್ಲಿಸಲಾಗಿದೆ. ಪಾಲಕ್ಕಾಡಿನಿಂದ ಆಗಮಿಸಿದ ತಜ್ಞರ ತಂಡ ಪರಿಶೀಲಿಸಿದೆಯಾದೆ. ಆದರೆ ಸೇತುವೆ ನಿರ್ಮಾಣಕ್ಕೆ ಪಂಚಾಯತು ಆರ್ಥಿಕ ಸಹಾಯ ನೀಡಬೇಕೆಂಬ ಸೂಚನೆಯ ಮೇರೆಗೆ 2017-18ನೇ ಬಜೆಟಲ್ಲಿ 25ಲಕ್ಷ ಮೀಸಲಿಟ್ಟರೂ ಪಂಚಾಯತಿಗೆ ಆ ಮೊತ್ತವನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸುವ ಅನುಮತಿ ಲಭಿಸದೇ ಇರುವುದರಿಂದ ಬೇರೆ ಪಂಚಾಯತಿನ ಇತರ ಅಗತ್ಯಗಳಿಗಾಗಿ ಆ ಮೊತ್ತವನ್ನು ಉಪಯೋಗಿಸಲಾಯಿತು. ನಮ್ಮ ಪ್ರಯತ್ನ ಮುಂದುವರಿಸುತ್ತೇವೆ. ಹೆಚ್ಚಿನ ಒತ್ತಡದ ಮೂಲಕ ಕಾಮಗಾರಿ ಆರಂಭಿಸಿ ಆದಷ್ಟು ಬೇಗ ಸೇತುವೆ ನಿರ್ಮಾಣವಾಗುವಂತೊತ್ತಾಯಿಸಲಾಗುವುದು.
-ಎ.ಕೆ.ಎಂ.ಅಶ್ರಫ್‌,
ಅಧ್ಯಕ್ಷರು. ಮಂಜೇಶ್ವರ ಬ್ಲಾಕ್‌ ಪಂಚಾಯತ
ವಿಪರ್ಯಾಸ

ಮಂಜೇಶ್ವರ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಮಾತುಗಳು ಕೇವಲ ಕಡತದಲ್ಲಿ ಮಾತ್ರ ಉಳಿದಿರುವುದು ವಿಪರ್ಯಾಸಕರ. ಹಲವಾರು ಮರಣಗಳು ಇಲ್ಲಿ ಸಂಭವಿಸಿದರೂ ಇದನ್ನು ಕಂಡೂ ಕಾಣದಂತೆ ನಟಿಸುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಾಗಿದೆ.
-ರಹ್ಮಾನ್‌ ಉದ್ಯಾವರ,

ಪ್ರಧಾನ ಕಾರ್ಯದರ್ಶೀ, ಮಂಜೇಶ್ವರ ಗ್ರಾಹಕರ ವೇದಿಕೆ.

ಪರಿಹಾರ ಅತಿ ಅಗತ್ಯ.

ವ್ಯವಸ್ಥಿತವಾದ ಪರಿಹಾರ ಅತಿ ಅಗತ್ಯ. ಇಲ್ಲವಾದಲಿ ಮತ್ತೆ ಜೀವಹಾನಿ ;ಸಂಶಯವಿಲ್ಲ. ಇಲ್ಲಿನ ಜನರ ಬಹುಕಾಲದ ನಿರೀಕ್ಷೆ ಮತ್ತು ಬೇಡಿಕೆ ಈಡೇರಿಸುವಲ್ಲಿ ತ್ವರಿತಗತಿಯ ತೀರ್ಮಾನ ಆಗಬೇಕಾಗಿದೆ. ನಡೆದಾಡುವಂತಾಗಲಿ.
-ಸಂಧ್ಯಾಗೀತಾ ಬಾಯಾರು

ಉಪಾಧ್ಯಕ್ಷೆ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ.
-ವಿದ್ಯಾಗಣೇಶ್‌ ಅಣಂಗೂರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.