ಸಂತ್ರಸ್ತರ ಭೇಟಿಯಾದ ಪ್ರಿಯಾಂಕಾ
Team Udayavani, Jul 21, 2019, 5:05 AM IST
ಲಕ್ನೋ: ಉತ್ತರ ಪ್ರದೇಶದ ಸೋನಭದ್ರದಲ್ಲಿ ಕಳೆದ ವಾರ ಹತ್ಯೆಗೀಡಾದವರ ಕುಟುಂಬ ಸದಸ್ಯರನ್ನು ಕೊನೆಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಭೇಟಿ ಮಾಡಿದ್ದಾರೆ. ಸೋನಭದ್ರಕ್ಕೆ ತೆರಳಲು ಶನಿವಾರ ಪೊಲೀಸರು ಅಡ್ಡಿಪಡಿಸಿದ್ದರಿಂದಾಗಿ, ರಸ್ತೆ ಮಧ್ಯದಲ್ಲೇ ಪ್ರತಿಭಟನೆ ನಡೆಸಿ ಮಿರ್ಜಾಪುರ ಗೆಸ್ಟ್ ಹೌಸ್ಗೆ ವಾಪಸಾಗಿದ್ದರು. ಮಿರ್ಜಾಪುರ ಗೆಸ್ಟ್ ಹೌಸ್ನಲ್ಲೇ ಸಂತ್ರಸ್ತರ ಕುಟುಂಬಸ್ಥರನ್ನು ಪ್ರಿಯಾಂಕಾ ಭೇಟಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರಿಯಾಂಕಾ, ನಾನು ಇಲ್ಲಿಗೆ ಆಗಮಿಸಿದ ಉದ್ದೇಶ ಪೂರೈಸಿದೆ. ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದೇನೆ. ಸದ್ಯ ನಾನು ವಾಪಸಾಗುತ್ತಿದ್ದೇನೆ. ಆದರೆ ಮತ್ತೂಮ್ಮೆ ಆಗಮಿಸುತ್ತೇನೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ಮಿರ್ಜಾಪುರದಿಂದ ತೆರಳಿದ ಪ್ರಿಯಾಂಕಾ ಕಾಶಿ ವಿಶ್ವನಾಥ ದೇಗುಲ ಮತ್ತು ಕಾಳ ಭೈರವ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಬಿಜೆಪಿ ತನ್ನ ವೈಫಲ್ಯ ಮುಚ್ಚಿಡಲು ಸೆಕ್ಷನ್ ಜಾರಿ ಮಾಡಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.
ಸೋನಭದ್ರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅಲ್ಲಿಗೆ ಯಾರೂ ಭೇಟಿ ನೀಡಲು ಅವಕಾಶವಿಲ್ಲ ಎಂಬ ಕಾರಣಕ್ಕೆ ಮಾರ್ಗ ಮಧ್ಯೆ ಮಿರ್ಜಾಪುರದ ನಾರಾಯಣಪುರದಲ್ಲೇ ಪ್ರಿಯಾಂಕಾ ಹಾಗೂ ಇತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದರು. ಅವರನ್ನು ವಶಕ್ಕೆ ಪಡೆದು ಮಿರ್ಜಾಪುರ ಗೆಸ್ಟ್ಹೌಸ್ಗೆ ಕರೆತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ