ಕವಿಸಂ ಸಂಸ್ಥಾಪನಾ ದಿನಾಚರಣೆಗೆ ಚಾಲನೆ


Team Udayavani, Jul 21, 2019, 9:16 AM IST

HUBALI-TDY-02

ಧಾರವಾಡ: ಕವಿಸಂನ 130ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ನಟ ದೊಡ್ಡಣ್ಣ ಚಾಲನೆ ನೀಡಿದರು.

ಧಾರವಾಡ: ಕನ್ನಡ ನಾಡು ಕಟ್ಟುವಲ್ಲಿ ಕೊಡುಗೆ ನೀಡಿರುವ ಕವಿಸಂ ಕಳೆದ 130 ವರ್ಷಗಳಿಂದ ನಾಡು, ನುಡಿ, ಜಲ ವಿಷಯದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದೆ. ನೂರಲ್ಲ, ಸಾವಿರ ವರ್ಷ ಸಂಘ ಮುನ್ನಡೆಯಲಿ ಎಂದು ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಹೇಳಿದರು.

ಕವಿಸಂನ ಕುವೆಂಪು ವೇದಿಕೆಯಲ್ಲಿ 130ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ 7 ದಿನಗಳ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಂಘ ಕಟ್ಟುವುದು ಸುಲಭ. ಆದರೆ ಅದು ಸುದೀರ್ಘ‌ ವರ್ಷಗಳ ಕಾಲ ಉತ್ತಮ ಸೇವೆ ನೀಡುವಂತೆ ನಡೆಸುವುದು ಕಷ್ಟ. ಸಂಸ್ಥಾಪಕರಿಂದ ಹಿಡಿದು ಅನೇಕ ಮಹನೀಯರು ಈ ಸಂಘವನ್ನು ನೂರು ವರ್ಷಗಳ ಕಾಲ ಮುನ್ನಡೆಸಿದ್ದಾರೆ. ಇಂದಿನವರೂ ಅದೇ ರೀತಿಯಲ್ಲಿ ಮುನ್ನಡೆಸಲಿ ಎಂದರು.

ಕವಿಸಂಗೆ 130 ವರ್ಷ ಆಗಿದ್ದರೆ, ಅದರ ಅಧ್ಯಕ್ಷರು ನೂರು ವರ್ಷ ಸಾಗಿ ಮುನ್ನಡೆದಿದ್ದಾರೆ. 1971ರಲ್ಲಿ ನಮ್ಮೂರಿನ ಕಾರ್ಯಕ್ರಮಕ್ಕೆ ಪಾಪು ಅವರನ್ನು ಕರೆ ತರಲು ಹುಬ್ಬಳ್ಳಿಗೆ ಬಂದಾಗ ಅವರನ್ನು ಕಂಡಿದ್ದೆ. ಆಗ ಈ ದೊಡ್ಡಣ್ಣ ಬರೀ ದಡ್ಡಣ್ಣ ಆಗಿದ್ದ ಅಷ್ಟೆ. ಆಗ ಕಂಡ ಪಾಪು ಅವರನ್ನು ಈಗ ಮರಳಿ ಕಾಣುತ್ತಾ ಇದ್ದು, ಅವರ ನಾಯಕತ್ವದಲ್ಲಿ ಸಂಘ ಸಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಅಂಬರೀಷ ಸ್ಮರಣೆ: ದೇಶದಲ್ಲಿ ಈಗ 21 ಭಾಷೆಗಳಲ್ಲಿ ಚಿತ್ರ ನಿರ್ಮಾಣ ಆಗುತ್ತಿದ್ದು, ಕರ್ನಾಟಕದಲ್ಲಿ ಎಲ್ಲ ಭಾಷೆಗಳ ಚಿತ್ರಗಳೂ ಪ್ರದರ್ಶನ ಆಗುತ್ತಲಿವೆ. ಈ ಮಧ್ಯೆ ನಮ್ಮ ಕನ್ನಡ ಚಿತ್ರಗಳು ಪೈಪೋಟಿ ನೀಡಿ ಪ್ರದರ್ಶನ ಆಗುತ್ತಿದ್ದು, ಎಲ್ಲ ಸವಾಲುಗಳನ್ನು ಕನ್ನಡ ಭಾಷೆ ಮೆಟ್ಟಿ ನಿಂತಿದೆ. ಯಾವ ಭಾಷೆಯಲ್ಲೂ ಕಲಾವಿದರ ಸಂಘವಿಲ್ಲ. ಆದರೆ ಕನ್ನಡ ಚಲನಚಿತ್ರ ರಂಗದಲ್ಲಿ ಮಾತ್ರವೇ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘವಿರುವುದು ನಮ್ಮ ಹೆಮ್ಮೆ. ಇದು ಸಾಕಾರ ರೂಪ ಪಡೆಯಲು ನಮ್ಮ ಅಂಬರೀಷಣ್ಣನೇ ಮೂಲ ಕಾರಣ ಎಂದು ಸ್ಮರಿಸಿದರು.

ಹಿಂದಿನ ದಿನಗಳಲ್ಲಿ ಸಿನಿಮಾ ನಟರು ಕೆಲ ಕಾರಣಕ್ಕೆ ಮುನಿಸಿಕೊಳ್ಳುತ್ತಿದ್ದರು. ಒಂದೆರಡು ತಿಂಗಳು ಕಳೆದ ಬಳಿಕ ನಾವು ಅವರ ಮನೆಗೆ, ಅವರು ನಮ್ಮ ಮನೆಗೆ ಬಂದು ಪುನಃ ಒಂದಾಗುತ್ತಿದ್ದೆವು. ಆದರೆ ಇಂದಿನ ನಟರಲ್ಲಿ ಆ ಲಕ್ಷಣಗಳು ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ ಉಡಕೇರಿ, ನಿಂಗಣ್ಣ ಕುಂಟಿ ಸೇರಿದಂತೆ ಪದಾಧಿಕಾರಿಗಳು, ಗಣ್ಯರು ಪಾಲ್ಗೊಂಡಿದ್ದರು. ಶಿವಣ್ಣ ಬೆಲ್ಲದ ಸ್ವಾಗತಿಸಿದರು. ಕೃಷ್ಣಾ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ವಿಶ್ವೇಶ್ವರಿ ಹಿರೇಮಠ ನಿರೂಪಿಸಿದರು. ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಡಾ|ಶ್ರೀಪಾದ ಭಟ್ ನಿರ್ದೇಶನದಲ್ಲಿ ಉಡುಪಿಯ ಕೊಡವೂರಿನ ನೃತ್ಯ ನಿಕೇತನದಿಂದ ಚಿತ್ರಾ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.