ವಿಂಡೀಸ್‌ ಸರಣಿಗೆ ಹಾರ್ದಿಕ್ ಪಾಂಡ್ಯಾ ಯಾಕಿಲ್ಲ ಗೊತ್ತಾ ?

ಹೇಗಿದೆ ಗೊತ್ತಾ ವಿಶ್ವಕಪ್‌ ನಂತರದ ಟೀಂ ಇಂಡಿಯಾ

Team Udayavani, Jul 21, 2019, 4:18 PM IST

team-india

ಮುಂಬೈ: ವೆಸ್ಟ್‌ ಇಂಡೀಸ್‌ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಮೂರು ಮಾದರಿಯ ಕ್ರಿಕೆಟ್‌ ನಲ್ಲಿ ವಿರಾಟ್‌ ಕೊಹ್ಲಿಯೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಎಂ.ಎಸ್.ಕೆ ಪ್ರಸಾದ್‌ ನೇತೃತ್ವದಲ್ಲಿ ಮುಂಬೈಯಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿ ಅಧಿಕಾರಿಗಳು ಕೆಲವು ಹಳೆಯ ಮುಖಗಳೊಂದಿಗೆ ಕೆಲವು ಹೊಸಬರಿಗೆ ಮಣೆ ಹಾಕಿದೆ.

ಗುಮಾನಿಗಳಿಗೆ ತೆರೆ ಎಳೆದ ಬಿಸಿಸಿಐ
ವಿಶ್ವಕಪ್‌ ನ ಸೆಮಿ ಫೈನಲ್‌ ನಲ್ಲಿ ಸೋಲನುಭವಿಸಿದ ಬಳಿಕ ವಿರಾಟ್‌ ನಾಯಕತ್ವದ ಬಗ್ಗೆ ಹಲವರು ಟೀಕೆ ಮಾಡಿದ್ದರು. ನಿಗದಿತ ಓವರ್‌ ಕ್ರಿಕೆಟ್‌ ನಾಯಕತ್ವವನ್ನು ರೋಹಿತ್‌ ಶರ್ಮಾಗೆ ನೀಡಬೇಕು ಎಂಬ ಸಲಹೆಗಳು ಕೂಡ ಕೆಲವರು ನೀಡಿದ್ದರು. ವೆಸ್ಟ್‌ ಇಂಡೀಸ್‌ ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ ನೀಡಿ, ರೋಹಿತ್‌ ಗೆ ನಾಯಕತ್ವ ಪಟ್ಟ ಕಟ್ಟಲಾಗುತ್ತದೆ ಎಂಬ ವಾದಗಳು ಕೂಡಾ ಕೇಳಿ ಬಂದಿದ್ದವು. ಆದರೆ ಬಿಸಿಸಿಐ ಬಿಗ್‌ ಬಾಸ್‌ ಗಳು ವಿರಾಟ್‌ ಕೊಹ್ಲಿಯನ್ನೇ ನಾಯಕನಾಗಿ ಮುಂದುವರಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಯಾರಿಗೆಲ್ಲಾ ರೆಸ್ಟ್‌ ?
ವಿಶ್ವಕಪ್‌ ತಂಡದಲ್ಲಿದ್ದ ಜಸ್ಪ್ರೀತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯಾಗೆ ವಿಂಡೀಸ್‌ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಬುಮ್ರಾ ಟೆಸ್ಟ್‌ ಸರಣಿ ಆಡಲಿದ್ದಾರೆ. ಆದರೆ ವಿಶ್ವಕಪ್‌ ವೇಳೆ ತೊಡೆಸಂದು ನೋವಿಗೆ ಒಳಗಾಗಿದ್ದ ಹಾರ್ದಿಕ್‌ ಸಂಪೂರ್ಣ ಸರಣಿ ತಪ್ಪಿಸಿಕೊಂಡಿದ್ದಾರೆ.

ವಿಕೆಟ್‌ ಕೀಪರ್‌ ಬ್ಯಾಟ್ಸಮನ್‌ ಮಹೇಂದ್ರ ಸಿಂಗ್‌ ಧೋನಿ ಈಗಾಗಲೇ ಕೂಟಕ್ಕೆ ಅಲಭ್ಯರಾಗುವ ಮಾಹಿತಿ ನೀಡಿರುವ ಕಾರಣ ಅವರನ್ನು ಆಯ್ಕೆ ಮಂಡಳಿ ಪರಿಗಣಿಸಿಲ್ಲ. ಸ್ಪಿನ್ನರ್‌ ಯುಜುವೇಂದ್ರ ಚಾಹಲ್‌ ಅವರನ್ನು ಏಕದಿನ ಸರಣಿಗೆ ಮಾತ್ರ ಆಯ್ಕೆ ಮಾಡಿದ್ದು, ಉಳಿದೆರಡು ಮಾದರಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ವಿಜಯ್‌ ಶಂಕರ್‌ ಕೂಡಾ ಗಾಯದಿಂದಾಗಿ ಸರಣಿ ತಪ್ಪಿಸಿ ಕೊಂಡಿದ್ದಾರೆ.

ಯಾರಿಗೆ ಕೊಕ್
ವಿಶ್ವಕಪ್‌ ಆಡಿದ್ದ ದಿನೇಶ್‌ ಕಾರ್ತಿಕ್‌ ಗೆ ಮೂರು ಮಾದರಿಯಿಂದ ಕೊಕ್‌ ನೀಡಲಾಗಿದೆ. ಕಾರ್ತಿಕ್‌ ನಿರೀಕ್ಷಿತ ಪ್ರಮಾಣದಲ್ಲಿ ಆಡದೇ ಇರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ಯಾರು ಹೊಸ ಮುಖ
ಇಂದು ಪ್ರಕಟವಾದ ಒಟ್ಟು ತಂಡದಲ್ಲಿ ರಾಹುಲ್‌ ಚಾಹರ್‌ ಒಬ್ಬರೇ ಹೊಸಮುಖ. 19 ವರ್ಷದ ರಾಹುಲ್‌ ಚಾಹರ್‌ ರಾಜಸ್ಥಾನ ಮೂಲದವರು. ಭಾರತ ಅಂಡರ್‌ 19 ತಂಡದಲ್ಲಿ ಆಡಿದ್ದ ಈ ಲೆಗ್‌ ಸ್ಪಿನ್ನರ್ ಐಪಿಎಲ್‌ ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಆಡುತ್ತಾರೆ. ಸದ್ಯ ಟಿ ಟ್ವೆಂಟಿ ಸರಣಿಗೆ ಆಯ್ಕೆಯಾಗಿರುವ ಚಾಹರ್‌, ಕುಲದೀಪ್‌ ಅನುಪಸ್ಥಿತಿಯಲ್ಲಿ ಅಡುವ ಬಳಗಕ್ಕೆ ಎಂಟ್ರಿಯಾಗುವ ಅವಕಾಶವಿದೆ.

ಕಳೆದ ವರ್ಷ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಗಾಯಗೊಂಡಿದ್ದ ವೃದ್ಧಿಮಾನ್‌ ಸಾಹಾ ಮತ್ತೆ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದಾರೆ. ರಿಷಭ್‌ ಪಂತ್‌  ಮೂರೂ ಮಾದರಿಗೂ ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಆದರೂ ಸಾಹಾರನ್ನು ಬಿಸಿಸಿಐ ಆಯ್ಕೆ ಮಾಡಿದೆ.

ವಿಶ್ವಕಪ್‌ ನಲ್ಲಿ ಆಸೀಸ್‌ ವಿರುದ್ದದ ಪಂದ್ಯದಲ್ಲಿ ಗಾಯಗೊಂಡಿದ್ದ ಶಿಖರ್‌ ಧವನ್‌ ಮತ್ತೆ ನಿಗದಿತ ಓವರ್‌ ಕ್ರಿಕೆಟ್‌ ನಲ್ಲಿ ತಂಡವನ್ನು ಸೇರಿದ್ದಾರೆ. ಇನ್ನು ಕನ್ನಡಿಗ ಕೆ.ಎಲ್‌ ರಾಹುಲ್‌ ಮೂರು ಮಾದರಿಗೂ ಆಯ್ಕೆಯಾಗಿದ್ದು, ಟೆಸ್ಟ್‌ ತಂಡದಲ್ಲಿ ಮಯಾಂಕ್‌ ಅಗರ್ವಾಲ್‌ ಕಾಣಿಸಿಕೊಂಡಿದ್ದಾರೆ. ಮತ್ತೊಬ್ಬ ಕನ್ನಡಿಗ ಮನೀಶ್‌ ಪಾಂಡೆ ಏಕದಿನ ಮತ್ತು ಟಿ ಟ್ವೆಂಟಿ ತಂಡ ಸೇರಿದ್ದಾರೆ.

ವಿಶ್ವಕಪ್‌ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಲ್‌ ರೌಂಡರ್‌ ರವೀಂದ್ರ ಜಡೇಜಾ ಎಲ್ಲಾ ಮಾದರಿಗೂ ಆಯ್ಕೆಯಾಗಿದ್ದರೆ. ಇವರೊಂದಿಗೆ ರವಿಚಂದ್ರನ್‌ ಅಶ್ವಿನ್‌ ಕೂಡಾ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದಾರೆ. ಇನ್ನು ಟಿ ಟ್ವೆಂಟಿ ಸರಣಿಗೆ ಯುವ ತಂಡವನ್ನೇ ಆಯ್ಕೆ ಮಾಡಿದ ಬಿಸಿಸಿಐ, ಕೃನಾಲ್‌ ಪಾಂಡ್ಯಾ, ದೀಪಕ್‌ ಚಾಹರ್‌, ನವದೀಪ್‌ ಸೈನೀ, ಖಲೀಲ್‌ ಅಹಮದ್‌, ವಾಶಿಂಗ್ಟನ್‌ ಸುಂದರ್‌ ಗೆ ಮತ್ತೆ ಅವಕಾಶ ನೀಡಿದೆ.

ವಿಶ್ವಕಪ್‌ ನಂತರ ಭಾರತ ಆಡುತ್ತಿರುವ ಮೊದಲ ಸರಣಿ ಇದಾದ ಕಾರಣ ಮಹತ್ವ ಪಡೆದಿದೆ. ವಿಶ್ವಕಪ್‌ ನಲ್ಲಿ ಭಾರತ ಸೆಮಿಫೈನಲ್‌ ನಲ್ಲಿ ಭಾರತ ವಿರುದ್ಧ ಸೋಲನುಭವಿಸಿದ್ದರೆ, ವೆಸ್ಟ್‌ ಇಂಡೀಸ್‌ ಕಳಪೆ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನಿಯಾಗಿತ್ತು.

ಭಾರತ ತಂಡ ವೆಸ್ಟ್‌ ಇಂಡೀಸ್‌ ವಿರುದ್ದ ಮೂರು ಟಿ ಟ್ವೆಂಟಿ, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳು ಅಮೇರಿಕಾದಲ್ಲಿ ನಡೆಯಲಿದೆ.

ಟೆಸ್ಟ್‌: ಕೊಹ್ಲಿ (ಕಪ್ತಾನ), ರಹಾನೆ (ಉಪ ಕಪ್ತಾನ), ಮಾಯಾಂಕ ಅಗರ್ವಾಲ್, ಕೆ. ಎಲ್. ರಾಹುಲ್, ಪೂಜಾರ, ಹನುಮ ವಿಹಾರಿ, ರೋಹಿತ್ , ಪಂತ್ (ವಿಕೆಟ್ ಕೀಪರ್) ಸಾಹಾ (ವಿಕೆಟ್ ಕೀಪರ್), ಅಶ್ವಿನ್, ಜಡೇಜಾ, ಕುಲದೀಪ್ , ಇಶಾಂತ್ , ಶಮಿ, ಬುಮ್ರಾ, ಉಮೇಶ್ ಯಾದವ್

ಏಕದಿನ: ಕೊಹ್ಲಿ (ಕಪ್ತಾನ), ರೋಹಿತ್ (ಉಪ ಕಪ್ತಾನ) ಶಿಖರ್ ಧವನ್, ಕೆ.ಎಲ್. ರಾಹುಲ್ , ಶ್ರೇಯಸ್ ಐಯರ್, ಮನೀಶ್ ಪಾಂಡೆ, ಪಂತ್ (ವಿಕೆಟ್ ಕೀಪರ್), ಜಡೇಜಾ, ಯಾದವ್, ಚಾಹಾಲ್, ಜಾಧವ್, ಶಮಿ, ಭುವನೇಶ್ವರ್ , ಖಲೀಲ್ , ನವದೀಪ್ ಸೈನಿ

ಟಿ 20 : ಕೊಹ್ಲಿ (ಕಪ್ತಾನ), ರೋಹಿತ್ (ಉಪ ಕಪ್ತಾನ) ಧವನ್, ಕೆ.ಎಲ್. ರಾಹುಲ್ , ಶ್ರೇಯಸ್ ಐಯರ್, ಮನೀಶ್ ಪಾಂಡೆ, ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ಜಡೇಜಾ, ವಾಷಿಂಗ್ಟನ್ ಸಂದರ್, ರಾಹುಲ್ ಚಾಹರ್, ಭುವನೇಶ್ವರ್ , ಖಲೀಲ್ , ದೀಪಕ್ ಚಾಹರ್, ನವದೀಪ್ ಸೈನಿ

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.