ಪರಿಸರ ಸಂರಕ್ಷಣೆಗೆ ಪತ್ರಕರ್ತರ ಸಾಥ್‌

ಪತ್ರಿಕಾ ದಿನಾಚರಣೆಯಲ್ಲಿ ಕಡೂರು ತಾಲೂಕು ದಂಡಾಧಿಕಾರಿ ಉಮೇಶ್‌ ಹರ್ಷ

Team Udayavani, Jul 21, 2019, 2:48 PM IST

21-July-34

ಕಡೂರು: ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಗೆ ತಹಶೀಲ್ದಾರ್‌ ಉಮೇಶ್‌ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಜಿಲ್ಲಾಧ್ಯಕ್ಷ ಜಿ.ಎಂ.ರಾಜಶೇಖರ್‌ ಮತ್ತಿತರರು ಇದ್ದರು.

ಕಡೂರು: ಸಸಿ ನೆಡುವ ಮೂಲಕ ಪತ್ರಕರ್ತರೂ ಕೂಡ ಪರಿಸರ ಸಂರಕ್ಷಣೆಗೆ ಕೈ ಜೋಡಿಸುತ್ತಿರುವುದು ಸಮಾಜಕ್ಕೆ ನೀಡುವ ಬಹುದೊಡ್ಡ ಕೊಡುಗೆಯಾಗಿದೆ ಎಂದು ಕಡೂರು ತಾಲೂಕು ದಂಡಾಧಿಕಾರಿ ಉಮೇಶ್‌ ಅಭಿಪ್ರಾಯಪಟ್ಟರು.

ಕಡೂರು ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಜಿಲ್ಲಾ, ತಾಲೂಕು ಪತ್ರಕರ್ತರ ಸಂಘ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಜನಶಕ್ತಿ ಯೋಜನೆಯಲ್ಲಿ ವಿವಿಧ ರೀತಿಯಲ್ಲಿ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕಳೆದ 2015 ರಿಂದಲೂ ಕಡೂರು ತಾಲೂಕು ನಿರಂತರ ಬರಗಾಲಕ್ಕೆ ತುತ್ತಾಗುತ್ತಿದ್ದು, ನೀರಿನ ಸಂರಕ್ಷಣೆಗೆ ಕೇಂದ್ರ ಸರ್ಕಾರ ಜಾಗೃತಿ ಅಭಿಯಾನ ಆರಂಭಿಸಿದೆ. ಇದಕ್ಕೆ ಸಾರ್ವಜನಿಕರು ಸೇರಿದಂತೆ ಸಂಘ-ಸಂಸ್ಥೆಗಳ ಸಹಕಾರ ಮುಖ್ಯವಾಗಿದೆ. ಅದೇ ರೀತಿ ಪತ್ರಕರ್ತರು ಕೈಜೋಡಿಸಿರುವುದು ಉತ್ತಮ ಬೆಳವಣಿಗೆ ಎಂದು ಹರ್ಷ ವ್ಯಕ್ತಪಡಿಸಿದರು.

ಮುಖ್ಯವಾಗಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಸದ್ಬಳಕೆ ಕುರಿತು ಅಭಿಯಾನಕ್ಕೆ ಎಲ್ಲರೂ ಮುಂದಾಗಬೇಕು. ಇಂತಹ ಮಹತ್ತರ ಕಾರ್ಯಕ್ಕೆ ಕಡೂರು ತಾಲೂಕಿನ ಪತ್ರಕರ್ತರೂ ಕೂಡ ಕೈಜೋಡಿಸುವ ಮೂಲಕ ಉತ್ತಮ ವಾತಾವರಣ ಮೂಡಿಸಿ, ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿರುವುದು ಸಂತಸದ ಸಂಗತಿ ಎಂದು ಶುಭ ಹಾರೈಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಂ.ರಾಜಶೇಖರ್‌ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮನುಷ್ಯನ ಸ್ವಾರ್ಥದಿಂದ ಪರಿಸರದ ಮೂಲ ನಾಶವಾಗುವ ಮೂಲಕ ವಾತಾವರಣ ಹಾಳಾಗುತ್ತಿದೆ. ಇಂದು ಎಲ್ಲ ಕ್ಷೇತ್ರಗಳು ಕಲುಷಿತವಾಗುತ್ತಿವೆ. ಇದು ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪರಿಸರ ಉಳಿಸುವ ನಿಟ್ಟಿನಲ್ಲಿ ಜನಜಾಗೃತಿ ಮೂಲಕ ಪತ್ರಕರ್ತರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ತಾಲೂಕು ಸಂಘದ ಅಧ್ಯಕ್ಷ ಎ.ಜೆ.ಪ್ರಕಾಶ್‌ ಮೂರ್ತಿ ಮಾತನಾಡಿ, ಸರ್ಕಾರಿ ಕಚೇರಿಗಳ ಮುಂದೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ಪತ್ರಿಕಾ ದಿನ ಆಚರಿಸಲಾಗುತ್ತದೆ. ಅಧಿಕಾರಿಗಳ ಸಹಕಾರದಿಂದ ಪರಿಸರ ಉಳಿಸುವತ್ತ ಸಂಘ ಕಾರ್ಯಪ್ರವೃತ್ತವಾಗುತ್ತಿದೆ. ಯಾವುದೇ ಒಂದು ಯೋಜನೆ ಕಾರ್ಯರೂಪಕ್ಕೆ ಬರಬೇಕಾದರೆ ಎಲ್ಲರ ಸಹಕಾರ ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಬ್ಯಾಲದಾಳು ಕುಮಾರ್‌, ತಾಲೂಕು ಕಾರ್ಯದಶಿ ಬಾಲು ಮಚ್ಚೇರಿ, ಹಿರಿಯ ಪತ್ರಕರ್ತರಾದ ಸಿ.ಕೆ.ಮೂರ್ತಿ, ಬಾಲಕೃಷ್ಣ, ಹಿರೇನಲ್ಲೂರು ಶಿವು, ಎಸ್‌.ಕೆ.ಸೋಮು, ಕೆ.ಎನ್‌.ಕೃಷ್ಣಮೂರ್ತಿ, ರಘು, ಲವಕುಮಾರ್‌, ಅಜ್ಜಂಪುರದ ನಾಗೇಶ್‌,ಪತಂಜಲಿ ಯೋಗ ಕೇಂದ್ರದ ಅಧ್ಯಕ್ಷ ಬೆಂಕಿ ಶೇಖರಪ್ಪ, ಉಪ ತಹಶೀಲ್ದಾರ್‌ ಶಿವಮೂರ್ತಿ,ಅರಣ್ಯ ಇಲಾಖೆಯ ಸಿದ್ದಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.