ಹಸಿ ತ್ಯಾಜ್ಯ ನೀರಾಗಿಸುವ ಯಂತ್ರ ಸ್ಥಾಪನೆ

ವಾಸನೆ ಮುಕ್ತ ಹಸಿಕಸ ವಿಲೇವಾರಿ • ಕಸದ ನೀರು ಕೃಷಿಗೆ ಬಳಕೆ • ಇಂದಿರಾ ಕ್ಯಾಂಟಿನ್‌ನಲ್ಲಿ ಪ್ರಯೋಗ

Team Udayavani, Jul 21, 2019, 3:26 PM IST

rn-tdy1

ರಾಮನಗರದ ಇಂದಿರಾ ಕ್ಯಾಂಟಿನ್‌ನಲ್ಲಿ ಪ್ರಾಯೋಗಿಕವಾಗಿ ಸ್ಥಾಪನೆಯಾಗಿರುವ ಹಸಿ ತ್ಯಾಜ್ಯವನ್ನು ನೀರಾಗಿ ಪರಿವರ್ತಿಸುವ ಯಂತ್ರವನ್ನು ನಗರ ಸಭೆ ಆಯುಕ್ತರಾದ ಶುಭಾ ವೀಕ್ಷಿಸಿ ಮಾಹಿತಿ ಪಡೆದರು.

ರಾಮನಗರ: ಮೂಳೆ ಸೇರಿದಂತೆ ಹಸಿ ಕಸ ಸಂಸ್ಕರಣೆಯಾಗಿ ನೀರಾಗಿ ಹರಿದರೆ? ಹೀಗೆ ಹರಿದ ನೀರು ಕೃಷಿಗೆ ಉಪಯೋಗಿಸುವಂತಾದರೆ? ಈ ಪ್ರಶ್ನೆಗಳಿಗೆ ಉತ್ತರವಾಗಿ ಇಲ್ಲಿನ ನಗರಸಭೆ ಖಾಸಗಿ ಸಂಸ್ಥೆಯೊಂದರ ಯಂತ್ರವನ್ನು ಇಂದಿರಾ ಕ್ಯಾಂಟಿನ್‌ನಲ್ಲಿ ಪ್ರಾಯೋಗಿಕವಾಗಿ ಸ್ಥಾಪಿಸಿದೆ.

ಹಸಿಕಸವನ್ನು ನೀರು ಮಾಡುವ ಯಂತ್ರವನ್ನು ಆರ್‌ಗ್ರೀನ್‌ ಎಂಬ ಸಂಸ್ಥೆ ದಕ್ಷಿಣ ಕೊರಿಯಾದಿಂದ ಆಮದು ಮಾಡಿಕೊಂಡಿದೆ. ಬೆಂಗಳೂರು ಮೂಲದ ಈ ಸಂಸ್ಥೆಯ ಅಧಿಕಾರಿಗಳು ಹೇಳುವ ಪ್ರಕಾರ ವಿಶ್ವದ ಐದು ರಾಷ್ಟ್ರಗಳಲ್ಲಿ ಮಾತ್ರ ಈ ತಂತ್ರಜ್ಞಾನ ಚಾಲ್ತಿಯಲ್ಲಿದೆ. ಇಡೀ ದೇಶದಲ್ಲಿ ಪ್ರಥಮವಾಗಿ ರಾಮನಗರ ನಗರಸಭೆ ಆಸಕ್ತಿವಹಿಸಿದ್ದರಿಂದ ಪ್ರಾಯೋಗಿಕವಾಗಿ ಯಂತ್ರವನ್ನು ಇಂದಿರಾ ಕ್ಯಾಂಟಿನ್‌ನಲ್ಲಿ ಸ್ಥಾಪಿಸಲಾಗಿದೆ.

ಯಂತ್ರದ ಕಾರ್ಯನಿರ್ವಹಣೆ ಹೇಗೆ?: ಇದೊಂದು ಸರಳ ಯಂತ್ರ. ನಮ್ಮ ಹೊಟ್ಟೆಯಲ್ಲಿ ಸಂಸ್ಕರಣೆ ಆಗುವ ರೀತಿಯಲ್ಲೇ ಈ ಯಂತ್ರವೂ ಕಾರ್ಯನಿರ್ವಹಿಸುತ್ತದೆ. ಹೊಟ್ಟೆಯಲ್ಲಿ ಇರುವ ಕಿಣ್ವ (ಎನ್‌ಜೈಮ್‌) ಆಹಾರವನ್ನು ಸಂಸ್ಕರಿಸುತ್ತದೆ. ಯಂತ್ರದಲ್ಲಿಯೂ ಕಿಣ್ವ ಮತ್ತು ಬಯೋಸ್ಥಾರ್‌ ಎಂದು ನಾಮಾಂಕಿತವಾಗಿರುವ ಮೈಕ್ರೋ ಆರ್ಗಾನಿಸಂ ಇರುತ್ತದೆ. ಬಯೋಸ್ಟಾರ್‌ಗಳು ತ್ಯಾಜ್ಯ ಆಹಾರದಲ್ಲಿನ ಕೊಬ್ಬು ಮತ್ತು ಎಣ್ಣೆಯ ಅಂಶಗಳನ್ನು ಸಂಸ್ಕರಿಸಿ ನೀರಾಗಿ ಪರಿವರ್ತಿಸುತ್ತದೆ. ಸಂಸ್ಕರಣೆಯ ವೇಳೆ ಕಾರ್ಬನ್‌ ಡೈ ಆಕ್ಸೈಡ್‌ ಉತ್ಪತ್ತಿಯಾಗುತ್ತದೆ .ಆದರೆ, ಹಾಲಿ ಇರುವ ತ್ಯಾಜ್ಯ ಸಂಸ್ಕರಣ ಪದ್ಧತಿಯಲ್ಲಿ ಉತ್ಪತ್ತಿಯಾಗುವ ಪ್ರಮಾಣಕ್ಕಿಂತ ಅತಿ ಕಡಿಮೆ ಕಾರ್ಬನ್‌ ಡೈ ಆಕ್ಸೈಡ್‌ ಉತ್ಪತ್ತಿಯಾಗುವುದರಿಂದ ಪರಿಸರ ಹಾನಿ ಆಗುವುದಿಲ್ಲ ಎಂಬುದು ಆರ್‌ಗ್ರೀನ್‌ ಸಂಸ್ಥೆಯ ಅಧಿಕಾರಿಗಳ ವಾದ.

ಪರಿವರ್ತಿಸಲು 24 ಗಂಟೆ ಬೇಕು: ಹಸಿ ಕಸವನ್ನು ನೀರಾಗಿ ಪರಿವರ್ತಿಸಲು ಯಂತ್ರಕ್ಕೆ 24 ಗಂಟೆ ಸಮಯ ಬೇಕು. ಆದರೆ, ಯಂತ್ರ ನಿರಂತರವಾಗಿ ಕಾರ್ಯನಿರ್ವಹಿಸುವುದರಿಂದ ತ್ಯಾಜ್ಯವೂ ನಿರಂತರವಾಗಿ ನೀರಾಗಿ ಪರಿವರ್ತನೆಯಾಗುತ್ತಿರುತ್ತದೆ. ಹೀಗಾಗಿ ಯಂತ್ರಕ್ಕೆ ಪದೇ ಪದೆ ಹಸಿ ತ್ಯಾಜ್ಯವನ್ನು ಸೇರಿಸುತ್ತಿರಬಹುದು.

ಹೊರಬಂದ ನೀರು ಹೇಗೆ ಉಪಯೋಗ?: ಹಸಿ ತ್ಯಾಜ್ಯ ಬಹುತೇಕ ಆಹಾರ ಪದಾರ್ಥವೇ ಆಗಿರುವುದರಿಂದ ಅದನ್ನು ಸಂಸ್ಕರಿಸಿ, ಹೊರ ಬಂದ ನೀರು ಪೌಷ್ಟಿಕಾಂಶಗಳಿಂದಲೇ ಕೂಡಿರುತ್ತದೆ. ಹೀಗಾಗಿ ಈ ನೀರು ತೋಟಗಾರಿಕೆ ಮತ್ತು ಕೃಷಿಗೆ ಬಳಸಬಹುದಾಗಿದೆ. ಹಸಿ ತ್ಯಾಜ್ಯದ ಸಂಸ್ಕರಣೆ ವೇಳೆ ಯಂತ್ರದಿಂದ ವಾಸನೆ ಇರುವುದಿಲ್ಲ. ಯಂತ್ರದಿಂದ ಹೊರ ಬಂದ ನೀರು ಸಹ ವಾಸನೆಯಿಂದ ಮುಕ್ತವಾಗಿರುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಲ್ಯಾಬ್‌ಗಳ ವರದಿಯನ್ನಾಧರಿಸಿ ಕ್ರಮ: ಇಂದಿರಾ ಕ್ಯಾಂಟಿನ್‌ನಲ್ಲಿ ಸ್ಥಾಪಿಸಿರುವ ಯಂತ್ರದಿಂದ ಹೊರಬರುವ ನೀರು ಕೃಷಿಗೆ ಯೋಗ್ಯವೇ ಎಂದು ಕೃಷಿ ವಿವಿಗೆ ಸ್ಯಾಂಪಲ್ ಕಳುಹಿಸಿ, ವರದಿಗೆ ನಗರಸಭೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಯಂತ್ರದಿಂದ ಪರಿಸರದ ಮೇಲೆ ಯಾವ ರೀತಿಯ ದುಷ್ಪರಿಣಾಮಗಳು ಬೀರುವುದಿಲ್ಲ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ಪರಿಸರ ಮಾಲಿನ್ಯ ನಿಯಂತ್ರ ಇಲಾಖೆಗೂ ಪತ್ರ ಬರೆದಿದ್ದಾರೆ. ಎಲ್ಲಾ ವರದಿಗಳಲ್ಲು ಸಕರಾತ್ಮಕ ಪ್ರತಿಕ್ರಿಯೆ ಬಂದರಷ್ಟೇ ಯಂತ್ರವನ್ನು ಕೊಳ್ಳುವ ವಿಚಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಎಷ್ಟು ವೆಚ್ಚ?: ಇಂದಿರಾ ಕ್ಯಾಂಟಿನ್‌ನಲ್ಲಿ ಪ್ರಾಯೋಗಿಕವಾಗಿ ಸ್ಥಾಪನೆಯಾಗಿರುವ ಯಂತ್ರ 50 ಕೆ.ಜಿ ಹಸಿ ತ್ಯಾಜ್ಯವನ್ನು ಸಂಸ್ಕರಿಸುತ್ತದೆ. ಇದರ ಆಮದು ಬೆಲೆ ಸುಮಾರು 9.50 ಲಕ್ಷ ರೂ. ಇನ್ನೊಂದು ವರ್ಷದಲ್ಲಿ ಭಾರತದಲ್ಲೇ ಇಂತಹ ಯಂತ್ರಗಳನ್ನು ತಯಾರಿಸುವ ಪ್ರಯತ್ನ ಸಾಗಿದೆ. ಆದರೆ, ಯಂತ್ರಕ್ಕೆ ಬಳಕೆಯಾಗುವ ಬಯೋಸ್ಟಾರ್‌ಗಳನ್ನು ದಕ್ಷಿಣ ಕೊರಿಯಾದ ಸಂಸ್ಥೆ ವಿಶ್ವ ಪೇಟೆಂಟ್ ಪಡೆದುಕೊಂಡಿದೆ. ಹೀಗಾಗಿ ಅಲ್ಲಿಂದಲೇ ಆಮದು ಮಾಡಿಕೊಳ್ಳಬೇಕಾಗಿದೆ ಎಂದು ಆರ್‌ಗ್ರೀನ್‌ ವೇಸ್ಟ್‌ ಟು ವಾಟರ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ವಿ.ಸುಬ್ಬರಾವ್‌ ತಿಳಿಸಿದ್ದಾರೆ.

 

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.