ತ್ಯಾಜ್ಯ ನಿಯಮ ಪಾಲಿಸದಿದ್ದರೆ ಎನ್‌ಜಿಟಿಗೆ ವರದಿ


Team Udayavani, Jul 22, 2019, 3:06 AM IST

tyjya-vil

ಬೆಂಗಳೂರು: ಘನ ತ್ಯಾಜ್ಯ ವಿಲೇವಾರಿ ನಿಯಮವನ್ನು ಆಗಸ್ಟ್‌ ಅಂತ್ಯದೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡದಿದ್ದರೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಬಿಬಿಎಂಪಿ ವಿರುದ್ಧ ವರದಿ ಸಲ್ಲಿಸಲಾಗುವುದು ಎಂದು ಎನ್‌ಜಿಟಿ ರಾಜ್ಯಮಟ್ಟದ ಘನ ತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿಯ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ. ಅದಿ ಎಚ್ಚರಿಕೆ ನೀಡಿದರು.

ಪುರಭವನದಲ್ಲಿ ಭಾನುವಾರ ಬಿಬಿಎಂಪಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ವಲಯದ ಘನತ್ಯಾಜ್ಯ ವಿಲೇವಾರಿ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಶೇ.70ರಿಂದ 80ರಷ್ಟು ವಿದ್ಯಾವಂತರಿದ್ದಾರೆ. ಆದರೂ ಕಸ ವಿಂಗಡಣೆ ಆಗುತ್ತಿಲ್ಲ. ಪ್ಲಾಸ್ಟಿಕ್‌ ಬಳಕೆ ನಿರಂತರವಾಗಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡು ದುಪ್ಪಟ್ಟು ದಂಡ ವಿಧಿಸಿದಾಗ ಮಾತ್ರ ನಿಮಯ ಅನುಷ್ಠಾನ ಸಾಧ್ಯ ಎಂಬ ಸ್ಥಿತಿಗೆ ಬಂದಿದೆ ಎಂದು ಹೇಳಿದರು.

ಬೀದರ್‌, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಘನತ್ಯಾಜ್ಯ ವಿಲೇವಾರಿ ನಿಯಮವನ್ನು ಪರಿಣಾಮಕಾರಿ ಅನುಷ್ಠಾನ ಮಾಡಲಾಗುತ್ತಿದೆ. ಆದರೆ, ಬೆಂಗಳೂರಿನಲ್ಲಿ ಏಕೆ ಅದು ಸಾಧ್ಯವಾಗುತ್ತಿಲ್ಲ? ಆಗಸ್ಟ್‌ ಅಂತ್ಯದೊಳಗೆ ನಗರದಲ್ಲಿ ನಿಯಮ ಪ್ರಕಾರ ಘನ ತ್ಯಾಜ್ಯ ವಿಲೇವಾರಿ ನಡೆಯಬೇಕು. ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಹಸಿರು ನ್ಯಾಯಪೀಠಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ದುಪ್ಪಟ್ಟು ದಂಡ ವಿಧಿಸಿ: ಮನೆ ಕಸ ವಿಂಗಡಣೆ ಕಡ್ಡಾಯಗೊಳಿಸಬೇಕು. ಹಸಿ ಕಸ, ಒಣ ಕಸ ವಿಂಗಡಿಸಿ ಕೊಡದಿದ್ದರೆ ದುಪ್ಪಟ್ಟು ದಂಡ ವಿಧಿಸಬೇಕು. ವಾರ್ಡ್‌ಗಳಲ್ಲಿ ಉತ್ಪತ್ತಿ ಆಗುವ ಕಸವನ್ನು ವಾರ್ಡ್‌ನಲ್ಲೇ ಸಂಸ್ಕರಿಸಿದಾಗ ಮಾತ್ರ ಕಸದ ಸಮಸ್ಯೆಗೆ ಪರಿಹಾರ ಸಿಗಲಿದೆ. ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ನಗರದಲ್ಲಿ ಬಳಕೆ ಮಾಡದಂತೆ ಕಟ್ಟಿನಿಟ್ಟಿನ ಕಾನೂನು ಜಾರಿಗೊಳಿಸಬೇಕು. ಬೈಲಾದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿ ದುಪ್ಪಟ್ಟು ದಂಡ ವಿಧಿಸುವ ಮೂಲಕ ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು.

ಎಲ್ಲರ ಸಹಕಾರದಿಂದ ಮಾತ್ರ ನಗರದಲ್ಲಿ ಘನತ್ಯಾಜ್ಯ ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸಾಧ್ಯ. ಪಾಲಿಕೆಯ ಎಂಟು ವಲಯಗಳಲ್ಲೂ ಎನ್‌ಜಿಟಿ ಸಭೆ ಆಯೋಜಿಸಲಾಗುತ್ತಿದೆ. ಎಲ್ಲ ವಾರ್ಡ್‌ಗಲ್ಲೂ ಸಮರ್ಪಕವಾಗಿ ತ್ಯಾಜ್ಯ ವಿಂಗಡಿಸಿ ಕೊಡಬೇಕು. ಕಸ ಬೇರ್ಪಡಿಸಿ ನೀಡದಿದ್ದರೆ ದುಪಟ್ಟು ದಂಡ ವಿಧಿಸಲಾಗುತ್ತದೆ ಎಂದರು. ಶಾಸಕಿ ಸೌಮ್ಯಾ ರೆಡ್ಡಿ, ಆಡಳಿತ ಪಕ್ಷದ ಮಾಜಿ ನಾಯಕ ಮಹಮ್ಮದ್‌ ರಿಜ್ವಾನ್‌ ನವಾಬ್‌ ಮೊದಲಾದವರು ಇದ್ದರು.

ಸಾರ್ವಜನಿಕರಿಗೂ ದಂಡದ ಬಿಸಿ: “ಆಗಸ್ಟ್‌ನಿಂದ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ ಬಳಕೆದಾರರಿಗೂ ದಂಡ ವಿಧಿಸಲಾಗುತ್ತದೆ. ಕಳೆದ ಒಂದು ವಾರದಿಂದ ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಳಿಗೆ ಮತ್ತು ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ ನೀಡುವ ವ್ಯಾಪಾರ ಮಳಿಗೆ, ಹೋಟಲ್‌ಗ‌ಳ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನ ವಶಕ್ಕೆ ಪಡೆದು, ದಂಡ ವಿಧಿಸುತ್ತಿದ್ದಾರೆ. ಇನ್ಮುಂದೆ ಬೀದಿ ವ್ಯಾಪಾರಿಗಳಿಗೂ ವಿನಾಯ್ತಿ ನೀಡುವುದಿಲ್ಲ. ಆಗಸ್ಟ್‌ನಿಂದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಪ್ಯಾಸ್ಟಿಕ್‌ ಕ್ಯಾರಿ ಬ್ಯಾಗ್‌ ಬಳಸುವ ಸಾರ್ವಜನಿಕರಿಗೂ ದಂಡ ವಿಧಿಸಲಾಗುವುದು,’ ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.