ಪ್ರಶಸ್ತಿ ಪಡೆವ ಕನಸು ನನಸಾಗಲೇ ಇಲ್ಲ


Team Udayavani, Jul 22, 2019, 3:08 AM IST

prashasti

ಬೆಂಗಳೂರು: ಆ ಹಿರಿಯ ಜೀವ ಸರ್ಕಾರದ ಗೌರವಕ್ಕಾಗಿ ಕಾದಿತ್ತು. ರಂಗಭೂಮಿ ಕ್ಷೇತ್ರದ ಉನ್ನತ ಪ್ರಶಸ್ತಿ (ಬಿ.ವಿ.ಕಾರಂತ ಹೆಸರಿನಲ್ಲಿ)ಗೆ ತನ್ನ ಹೆಸರನ್ನು ಸರ್ಕಾರ ಎಂದು ಘೋಷಿಸುತ್ತೋ ಎಂಬ ಕನವರಿಕೆಯಲ್ಲಿತ್ತು. ಆದರೆ ಸರ್ಕಾರದ ತಪ್ಪುಗಳಿಂದಾಗಿ ಕೊನೆಗೂ ಆ ಆಸೆ ಈಡೇರಲೇ ಇಲ್ಲ! ಪ್ರಸಕ್ತ ವರ್ಷ ಏಪ್ರಿಲ್‌ 1ರಂದು 67ರ ಹರೆಯದ ಆ ಹಿರಿಯ ಜೀವ ಇಹಲೋಕವನ್ನೇ ತ್ಯಜಿಸಿದ್ದು, ರಂಗಭೂಮಿ ಕ್ಷೇತ್ರದ ಶ್ರೇಷ್ಠ ಪ್ರಶಸ್ತಿ ಪಡೆಯುವ ಅವರ ಕನಸು “ಕನಸಾಗಿಯೆ ಉಳಿಯಿತು’.

ಇಂತಹ ಮನ ಮಿಡಿಯುವ ನೋವಿನ ಕಥೆಗೆ ಹಿರಿಯ ವೃತ್ತಿರಂಗಭೂಮಿ ಕಲಾವಿದೆ ದಿ.ಎಸ್‌.ಮಾಲತಿ ಸಾಗರ ಅವರ ಬದುಕು ಸಾಕ್ಷಿಯಾಗಿದೆ. ಈ ಹಿಂದೆ (ಫೆ.5ರಂದು) ಸಭೆ ಸೇರಿದ್ದ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶೇಖ್‌ ಮಾಸ್ತರ್‌ ನೇತೃತ್ವದ ಆಯ್ಕೆ ಸಮಿತಿ, 2018ನೇ ಸಾಲಿನ “ಡಾ.ಗುಬ್ಬಿವೀರಣ್ಣ ಮತ್ತು “ಬಿ.ವಿ.ಕಾರಂತರ’ ಪ್ರಶಸ್ತಿಗೆ ರಂಗಭೂಮಿ ಸಾಧಕರ ಹೆಸರನ್ನು ಅಂತಿಮಗೊಳಿಸಿತ್ತು.

ಹವ್ಯಾಸಿ ರಂಗಭೂಮಿ ಕಲಾವಿದರಿಗೆ ನೀಡಲಾಗುವ “ಬಿ.ವಿ.ಕಾರಂತ’ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಮಾಲತಿ ಸಾಗರ ಅವರ ಹೆಸರು ಈ ಪಟ್ಟಿಯಲ್ಲಿತ್ತು. ಆಯ್ಕೆ ಸಮಿತಿ ಕೂಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪಟ್ಟಿಯನ್ನು ಹಸ್ತಾಂತರಿಸಿತ್ತು. ಆದರೆ ಸರ್ಕಾರ ರಂಗ ಸಾಧಕರ ಪಟ್ಟಿಯನ್ನು ತಕ್ಷಣ ಘೋಷಿಸಲೇ ಇಲ್ಲ.

ವಿಳಂಬಕ್ಕೆ ಕಾರಣಗಳೇನು?: ಫೆಬ್ರವರಿಯಲ್ಲಿ ಆಯ್ಕೆ ಸಮಿತಿ, ಪ್ರಶಸ್ತಿ ಪುರಸ್ಕೃತರ ಹೆಸರನ್ನು ಅಂತಿಮಗೊಳಿಸಿ ತಕ್ಷಣದಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದಾದ ಕೆಲ ದಿನಗಳಲ್ಲಿ ವಿವಿಧ ಚುನಾವಣೆಗಳು ಎದುರಾದವು. ಚುನಾವಣೆ ಬಳಿಕವೂ ಸರ್ಕಾರ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸುವ ಗೋಜಿಗೆ ಹೋಗಲೇ ಇಲ್ಲ.

ಆಯ್ಕೆ ಸಮಿತಿ ಬೇಸರ: ಇತ್ತೀಚೆಗಷ್ಟೇ ರಂಗವಲಯದ ವಿವಿಧ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಸರ್ಕಾರ ಘೋಷಿಸಿದೆ. ಆದರೆ ಮಾಲತಿ ಸಾಗರ ಹೆಸರು ಪಟ್ಟಿಯಲ್ಲಿರಲಿಲ್ಲ. ಮಾಲತಿ ಅವರು ಪ್ರಶಸ್ತಿ ಘೋಷಿಸುವ ಮೊದಲೇ ಮರಣ ಹೊಂದಿದ್ದರಿಂದ ಈ ಪ್ರಶಸ್ತಿಗೆ ಅವರನ್ನು ಪರಿಗಣಿಸಿಲ್ಲ ಎಂದು ಹೇಳಲಾಗುತ್ತಿದೆ.

ಆದರೆ ಸರ್ಕಾರದ ನಡೆಗೆ ಪ್ರಶಸ್ತಿ ಆಯ್ಕೆ ಸಮಿತಿ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಪ್ರಶಸ್ತಿ ಆಯ್ಕೆ ಸಮಿತಿ ಮುಖ್ಯಸ್ಥ ಶೇಖ್‌ ಮಾಸ್ತರ್‌, ಮಾಲತಿ ಅವರು ಬದುಕಿದ್ದಾಗಲೇ ಕಾರಂತ ಪ್ರಶಸ್ತಿಗೆ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಆದರೆ ಸರ್ಕಾರದ ವಿಳಂಬ ನೀತಿಯಿಂದಾಗಿ ಪ್ರಶಸ್ತಿ ಘೋಷಣೆ ತಡವಾಗಿದೆ. ಇದಕ್ಕೆ ಸರ್ಕಾರ ನೇರ ಹೊಣೆ ಎಂದು ಹೇಳಿದರು.

ಹವ್ಯಾಸಿ ರಂಗಭೂಮಿ ಕ್ಷೇತ್ರಕ್ಕೆ ಮಾಲತಿ ಸಾಗರ ಅವರ ಕೊಡುಗೆ ಅಪಾರ. ರಂಗತಂಡಗಳನ್ನು ಕಟ್ಟಿ ಅವರು ರಂಗಸೇವೆ ಮಾಡಿದ್ದಾರೆ. ಆ ಹಿನ್ನೆಲೆಯಲ್ಲೇ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಇದೊಂದು “ವಿಶೇಷ ಪ್ರಕರಣ’ಎಂದು ಸರ್ಕಾರ ಪರಿಗಣಿಸಿ ಮಾಲತಿ ಅವರಿಗೆ ಕಾರಂತ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ಮನವಿ ಸಲ್ಲಿಕೆ: ಮಾಲತಿ ಅವರಿಗೆ ಬಿ.ವಿ.ಕಾರಂತ ಪ್ರಶಸ್ತಿ ನೀಡದೇ ಇರುವುದಕ್ಕೆ ರಂಗಭೂಮಿ ವಲಯದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ನೇತೃತ್ವದ ಹಿರಿಯ ರಂಗಕರ್ಮಿಗಳ ನಿಯೋಗ ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಪತ್ರವನ್ನು ಸಲ್ಲಿಸಿದೆ.

ಸರ್ಕಾರದ ವಿಳಂಬ ನೀತಿಯಿಂದಾಗಿ ಮಾಲತಿ ಅವರಿಗೆ ಪ್ರಶಸ್ತಿ ಕೈತಪ್ಪಿಹೋಗಿದೆ. ಆ ಹಿನ್ನೆಲೆಯಲ್ಲಿ ಕಾರಂತರ ಪ್ರಶಸ್ತಿಗೆ ಮಾಲತಿ ಅವರನ್ನು ಪರಿಗಣಿಸಬೇಕೆಂದು ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಲ್ಲಿ ಒಬ್ಬರಾಗಿರುವ ಮಲ್ಲಿಕಾರ್ಜುನ ಕಾಡಕೋಳ ಆಗ್ರಹಿಸಿದ್ದಾರೆ.

ಆನಂದ ಪಟ್ಟಿದ್ದರು: ಕಾರಂತರ ಪ್ರಶಸ್ತಿಗೆ ಹೆಸರು ಅಂತಿಮಗೊಂಡಿರುವುದರಿಂದ ಅವರು ಖುಷಿಯಲ್ಲಿದ್ದರು. ನನ್ನ ಹೆಸರು ಕಾರಂತರ ಪ್ರಶಸ್ತಿಗೆ ಅಂತಿಮಗೊಂಡಿದೆಯಂತೆ ಎಂದು ಎಲ್ಲರಲ್ಲೂ ಹೇಳಿಕೊಳ್ಳುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಮಾಲತಿ ಅವರು ಏ.1ರಂದು ಇಹಲೋಕ ತ್ಯಜಿಸಿದರು. ಹೀಗಾಗಿ ಪ್ರಶಸ್ತಿ ಸ್ವೀಕರಿಸುವ ಆ ಆಸೆ ಕನಸಾಗಿಯೇ ಉಳಿಯಿತು ಎಂದು ಮಾಲತಿ ಅವರ ಪತಿ ಪುರುಷೋತ್ತಮ ತಲವಾಟ ಬೇಸರ ವ್ಯಕ್ತಪಡಿಸಿದರು.

ಹಿರಿಯ ಹವ್ಯಾಸಿ ರಂಗಭೂಮಿ ಕಲಾವಿದೆ ದಿ.ಎಸ್‌.ಮಾಲತಿ ಸಾಗರ ಅವರಿಗೆ ಕಾರಂತರ ಪ್ರಶಸ್ತಿ ನೀಡಬೇಕೆಂದು ಹಿರಿಯ ರಂಗಕರ್ಮಿಗಳು ಮನವಿ ಸಲ್ಲಿಸಿದ್ದಾರೆ. ಈ ಮನವಿ ಪತ್ರವನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ.
-ಕೆ.ಎಂ.ಜಾನಕಿ ನಿರ್ದೇಶಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.