ಶಿರಾಡಿ ರೈಲು ಮಾರ್ಗದಲ್ಲಿ ಆಪರೇಶನ್ ಹೆಬ್ಬಂಡೆ!
ಜೀವಭಯದ ನಡುವೆ ಕಾರ್ಯಾಚರಣೆ; ಕುಸಿಯುವಂತಿದೆ ಇನ್ನೊಂದು ಬಂಡೆ
Team Udayavani, Jul 22, 2019, 5:24 AM IST
ಸತತ ಮಳೆ, ಕೆಸರು ಮಣ್ಣು ಜರಿಯುವ ಪ್ರತಿಕೂಲ ಸನ್ನಿವೇಶದಲ್ಲಿ ಹಿಟಾಚಿ, ಕಾರ್ಮಿಕರನ್ನು ಬಳಸಿ ಬಂಡೆ ತೆರವು ನಡೆಸಲಾಗುತ್ತಿದೆ.
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ರಸ್ತೆ- ಸಕಲೇಶಪುರ ರೈಲು ಮಾರ್ಗದ ನಡುವಣ ಸಿರಿಬಾಗಿಲು ಪ್ರದೇಶದ ಮಣಿಬಂಡ ಬಳಿ ಹಳಿಯ ಮೇಲೆ ಉರುಳಲು ಸಿದ್ಧವಾಗಿರುವ ಬಂಡೆಗಲ್ಲು ತೆರವು ಪ್ರಯತ್ನ ಸತತವಾಗಿ ನಡೆಯುತ್ತಿದೆ.
ಪ್ರತಿಕೂಲ ಹವಾಮಾನದ ಮಧ್ಯೆ “ಆಪರೇಶನ್ ಹೆಬ್ಬಂಡೆ’ ರವಿವಾರ ಎರಡನೇ ದಿನಕ್ಕೆ ಕಾಲಿರಿಸಿದೆ. ಇದೇ ಸ್ಥಳದಲ್ಲಿ ಇನ್ನೊಂದು ಬಂಡೆ ಕುಸಿಯುವ ಹಂತದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ.
ರೈಲು ಮಾರ್ಗದ ಕಿ.ಮೀ. 86 ಹಳಿಯ ಪಕ್ಕ ಕಾರ್ಯಾಚರಣೆ ನಡೆಯುತ್ತಿದೆ. ಮೈಸೂರು ರೈಲ್ವೇ ವಿಭಾಗದ ಪರಿಣಿತ ತಾಂತ್ರಿಕ ಅಧಿಕಾರಿಗಳು ನೇತೃತ್ವ ವಹಿಸಿ ದ್ದಾರೆ. ಜು.20ರಂದು ಬೆಳಗ್ಗೆ ಆರಂಭ ಗೊಂಡ ಕೆಲಸ ತಡರಾತ್ರಿಯ ತನಕವೂ ಮುಂದುವರಿದಿತ್ತು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ವಿಭಾಗದ 80 ಮಂದಿ ಕಾರ್ಮಿಕರು ಕೆಲಸ ನಿರತರಾಗಿದ್ದಾರೆ.
ತೆರವು ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ. ಕೆಲಸ ನಿರತ ರೈಲ್ವೇ ಇಲಾಖೆಯ ತುರ್ತು ನಿರ್ವಹಣ ಘಟಕದ ಕಾರ್ಮಿಕರಿಗೆ ಆಹಾರ, ಯಂತ್ರಗಳಿಗೆ ಇಂಧನ ಪೂರೈಸುವುದು ಸಮಸ್ಯೆಯಾಗಿದೆ. ಕಾಮಗಾರಿ ತ್ವರಿತಗತಿಯಲ್ಲಿ ಸಾಗಲು ಇನ್ನಷ್ಟು ಪರಿಣಿತ ಅಧಿಕಾರಿಗಳು ಮತ್ತು ಕಾರ್ಮಿಕರನ್ನು ನಿಯೋಜಿಸುವ ಅಗತ್ಯ ವಿದ್ದು, ಬಂಡೆ ಕುಸಿಯುವ ಪರಿಸ್ಥಿತಿಯಲ್ಲಿ ರುವ ಸ್ಥಳವು ಸುರಂಗದ ಪ್ರವೇಶ ದ್ವಾರದಲ್ಲೆ ಇರುವುದು ಇನ್ನಷ್ಟು ಅಡ್ಡಿ ಸೃಷ್ಟಿಸಿದೆ.
ಮಣ್ಣು ಸಡಿಲಗೊಂಡು ಗುಡ್ಡದಿಂದ ಬಂಡೆಗಲ್ಲುಗಳು ಹಳಿಯತ್ತ ಜಾರುತ್ತಿವೆ. ಇದರಿಂದ ಮಣ್ಣು, ಕೆಸರು ಮತ್ತು ಅಪಾಯಕಾರಿ ಬಂಡೆಗಲ್ಲು ತೆರವು ಬಹಳಷ್ಟು ತ್ರಾಸದಾಯಕವಾಗಿದೆ.
ಮತ್ತೂಂದು ಬಂಡೆ ಕುಸಿಯಲು ಸಿದ್ಧ!
ಮಣಿಬಂಡದಲ್ಲಿ ಜರಿದು ಬೀಳಲು ಸಿದ್ಧವಾದ ಬಂಡೆಯನ್ನು ಸ್ಫೋಟಿಸಿ ಪುಡಿ ಮಾಡಿ ತೆರವುಗೊಳಿಸುವ ಕಾಮಗಾರಿ ರವಿವಾರ ಸಂಜೆಗೆ ಶೇ.70ರಷ್ಟು ಪೂರ್ಣ ಗೊಂಡಿದೆ. ಇದಕ್ಕೆ ತಾಗಿಕೊಂಡಿರುವ ಇನ್ನೊಂದು ಬಂಡೆ ಕೂಡ ಕುಸಿಯುವ ಹಂತದಲ್ಲಿದೆ. ಹೀಗಾಗಿ ಕಾರ್ಯಾಚರಣೆ ಅನಿರ್ದಿಷ್ಟಾವಧಿ ತನಕ ಮುಂದುವರಿಯು ಕುರಿತು ರೈಲ್ವೇ ಮೂಲಗಳಿಂದ ಮಾಹಿತಿ ದೊರಕಿದೆ. ರವಿವಾರವೂ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು.
ಕಠಿನ ವಾತಾವರಣವಿದೆ
ಬಂಡೆಗಲ್ಲು ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಮಳೆ ಮತ್ತು ವಾತಾವರಣ ಪ್ರತಿಕೂಲವಾಗಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದೆ.
– ಕೆ.ಪಿ. ನಾಯ್ಡು
ಸೀನಿಯರ್ ಸೆಕ್ಷನ್ ಎಂಜಿನಿಯರ್ ರೈಲ್ವೇ ಮೈಸೂರು ವಿಭಾಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ