ತಿಂಗಳಿಗೊಮ್ಮೆ ಪ್ರತಿ ಗ್ರಾಮದಲ್ಲಿ ಆಧಾರ್‌ ಕ್ಯಾಂಪ್‌ ನಡೆಸಿ


Team Udayavani, Jul 22, 2019, 10:47 AM IST

gadaga-tdy-2

ರೋಣ: ಸವಡಿಯಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಸಭೆಯಲ್ಲಿ ತಹಶೀಲ್ದಾರ್‌ ಶರಣಮ್ಮ ಕಾರಿ ಅವರ ಎದುರು ಸಮಸ್ಯೆ ಹೇಳಿಕೊಂಡ ಗ್ರಾಮಸ್ಥರು.

ರೋಣ: ಸರ್ಕಾರದ ಯೋಜನೆ, ಶಿಕ್ಷಣ, ಬ್ಯಾಂಕ್‌ ವ್ಯವಹಾರ, ಉದ್ಯೋಗ ಸೇರಿದಂತೆ ಪ್ರತಿಯೊಂದು ಕೆಲಸಕ್ಕೂ ಆಧಾರ್‌ ಕಾರ್ಡ್‌ ಕಡ್ಡಾಯವಾಗಿದೆ. ಆಧಾರ್‌ಗಾಗಿ ಹೋಬಳಿ, ತಾಲೂಕು ಕೇಂದ್ರಕ್ಕೆ ತೆರಳಿ ಎರಡರಿಂದ ಮೂರು ದಿನ ಸರದಿ ನಿಲ್ಲಬೇಕಾಗುತ್ತದೆ. ಆದ್ದರಿಂದ ಕನಿಷ್ಠ ಪಕ್ಷ ತಿಂಗಳಿಗೊಮ್ಮೆ ಪ್ರತಿ ಗ್ರಾಮದಲ್ಲಿ ಆಧಾರ್‌ ಕ್ಯಾಂಪ್‌ ನಡೆಸಬೇಕು ಎಂದು ತಾಲೂಕಿನ ಸವಡಿ ಗ್ರಾಮದ ರೈತರು ಹಾಗೂ ಮುಖಂಡರು ಆಗ್ರಹಿಸಿದರು.

ತಾಲೂಕಿನ ಸವಡಿ ಗ್ರಾಪಂ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಸಭೆಯಲ್ಲಿ ಆಗ್ರಹಿಸಿದ ಅವರು, ಪ್ರತಿಯೊಬ್ಬರಿಗೂ ಆಧಾರ್‌ ಅತಿ ಅವಶ್ಯವಾಗಿದೆ. ಆದ್ದರಿಂದ ಆಧಾರ್‌ ಕಾರ್ಡ್‌ ಹೊಂದಲು ಅಥವಾ ಆಧಾರ್‌ ಕಾರ್ಡ್‌ನಲ್ಲಿ ಹೆಸರು, ವಿಳಾಸ ತಿದ್ದುಪಡಿ ಅಥವಾ ಸೇರ್ಪಡೆ ಮಾಡಲು ತಾಲೂಕು ಕೇಂದ್ರದಲ್ಲಿ ತೆರೆಯಲಾದ ಆಧಾರ್‌ ಕೇಂದ್ರದಲ್ಲಿ ಎರಡರಿಂದ ಮೂರು ದಿನ ಉದ್ಯೋಗ ಬಿಟ್ಟು ಸರದಿ ನಿಲ್ಲಬೇಕು. ಜತೆಗೆ ಸಣ್ಣ ಸಣ್ಣ ಮಕ್ಕಳು, ವೃದ್ದರನ್ನು ಸರದಿಯಲ್ಲಿ ನಿಲ್ಲಿಸಬೇಕು. ಬೇರಡೆ ಹೋಗಿ ದಿನವಿಡಿ ನಿಂತು ಆಧಾರ್‌ ಪಡೆಯುವುದು ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ಕೆಲ ಆಧಾರ್‌ ಕೇಂದ್ರದಲ್ಲಿ ಮಧ್ಯವರ್ತಿಗಳ ಹಾವಳಿಯಿದ್ದು, ಮಧ್ಯವರ್ತಿಗಳು ಕಾರ್ಡ್‌ವೊಂದಕ್ಕೆ 500ರಿಂದ 1000 ರೂ. ಪಡೆಯುತ್ತಿದ್ದಾರೆ. ಆದ್ದರಿಂದ ಜನತೆ ಪರದಾಟ ಮತ್ತು ತೊಂದರೆ ತಪ್ಪಿಸಲು

ಪ್ರತಿಯೊಂದು ಗ್ರಾಮದಲ್ಲಿ ಕನಿಷ್ಠ ಪಕ್ಷ ತಿಂಗಳಿಗೊಮ್ಮೆ ಆಧಾರ್‌ ಕ್ಯಾಂಪ್‌ ನಡೆಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಆಗ ತಹಶೀಲ್ದಾರ್‌ ಶರಣಮ್ಮ ಕಾರಿ ಮಾತನಾಡಿ, ಈಗಾಗಲೇ ರೋಣ, ಹೊಳೆಆಲೂರು, ಗಜೇಂದ್ರಗಡ, ನರೇಗಲ್ಲ, ಸೂಡಿ ಸೇರಿದಂತೆ 9 ಕಡೆಗಳಲ್ಲಿ ಆಧಾರ್‌ ಕೇಂದ್ರ ತೆರೆಯಲಾಗಿದೆ. ಯಾವದೇ ಕೇಂದ್ರದಲ್ಲಾದರೂ ಆಧಾರ್‌ ಪಡೆಯಲು ಅಥವಾ ತಿದ್ದುಪಡಿ ಮಾಡಿಸಲು ಅವಕಾಶವಿದೆ. ಆದ್ದರಿಂದ ಜನರು ಕೇವಲ ಒಂದೇ ಕೇಂದ್ರದಲ್ಲಿ ಸರದಿ ಸಾಲಲ್ಲಿ ನಿಲ್ಲುವುದು ಬೇಡ. ಆಧಾರ್‌ ಕ್ಯಾಂಪ್‌ ನಡೆಸುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಬೇರೆಡೆ ಗುಳೆ ಹೋಗದಂತೆ ತಡೆಯಲು ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂಬ ನಿಯಮವಿದೆ. ಆದರೆ ಸವಡಿ ಗ್ರಾಮದಲ್ಲಿ ಈ ವರ್ಷ ಕೇವಲ 2 ದಿನ ಮಾತ್ರ ಕೆಲಸ ನೀಡಲಾಗಿದೆ. ಗ್ರಾಮದಲ್ಲಿ 11 ಸಾವಿರ ಎಕರೆ ಜಮೀನು, 7 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ಸಮರ್ಪಕವಾಗಿ ಉದ್ಯೋಗ ನೀಡುವಲ್ಲಿ ಗ್ರಾಪಂ ಮುಂದಾಗಿಲ್ಲ ಎಂದು ಮೇಘರಾಜ ಬಾವಿ ಆರೋಪಿಸಿದರು. ಆಗ ಪಿಡಿಒ ಅನೀಲ ಬೇವಿನಮರದ ಮಾತನಾಡಿ, ಉದ್ಯೋಗ ಅರಸಿ ಬಂದವರಿಗೆ ಕೆಲಸ ನೀಡುತ್ತ ಬರಲಾಗಿದೆ. ಅಲ್ಲದೇ ಖಾತ್ರಿ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳಲಾಗಿದೆ. ಈಗಲೂ ಯಾರಾದರೂ ಉದ್ಯೋಗ ಅರಸಿ ಬಂದಲ್ಲಿ ತಕ್ಷಣವೇ ಕೆಲಸ ನೀಡಲಾಗುವುದು ಎಂದು ಹೇಳಿದರು. ಗ್ರಾಮದ ಸುತ್ತ ಹಳ್ಳಗಳಿವೆ. ಪ್ರತಿಯೊಂದು ಹಳ್ಳಕ್ಕೂ ಚೆಕ್‌ ಡ್ಯಾಂ ನಿರ್ಮಿಸಬೇಕು. ಗ್ರಾಪಂ ಕಚೇರಿಯಲ್ಲಿಯೇ ಪಹಣಿ ಪತ್ರ ವಿತಸುವಂತೆ ಕ್ರಮ ಕೈಗೊಳ್ಳಬೇಕು. ಶಾಲಾ ಅವಧಿ ಪ್ರಾರಂಭ ಮತ್ತು ಬಿಡುವಿನ ವೇಳೆಯಲ್ಲಿ ಗ್ರಾಮಕ್ಕೆ ಸಾರಿಗೆ ಬಸ್‌ ಬಂದು ಹೋಗುವಂತೆ ಸರಿಯಾದ ಸಮಯ ನಿಗದಿ ಮಾಡಬೇಕು. ಶಾಲೆ ಆಗಮಿಸಿ ತೆರಳುವ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು. ಸಕಾಲಕ್ಕೆ ರೇಷನ್‌ ಕಾರ್ಡ್‌ ವಿತರಿಸಬೇಕು. ಹೀಗೆ ವಿವಿಧ ರೀತಿಯ ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಗ್ರಾಪಂ ಅಧ್ಯಕ್ಷೆ ಅಕ್ಕಮಹಾದೇವಿ ತಳವಾರ, ತಾಪಂ ಸದಸ್ಯ ಎಂ.ಎ. ತರಪದಾರ, ಉಪ ತಹಶೀಲ್ದಾರ್‌ ಎಸ್‌.ಎ. ನದಾಫ, ಕಂದಾಯ ನಿರೀಕ್ಷಕ ಜೆ.ಟಿ. ಕೊಪ್ಪದ, ಸಿಡಿಪಿಒ ನಾಗನಗೌಡ ಪಾಟೀಲ, ಪಿಡಿಒ ಅನೀಲ ಬೇವಿನಮರದ ಇದ್ದರು.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.