1970ರ ಪ್ರೌಢಶಾಲೆಗಿಲ್ಲ ದುರಸ್ತಿ ಭಾಗ್ಯ

•ಛಾವಣಿ ಕುಸಿಯುವ ಭೀತಿಯಲ್ಲೇ ವಿದ್ಯಾರ್ಥಿಗಳಿಗೆ ಬೋಧನೆ •ಪಾಲಕರಲ್ಲಿ ಹೆಚ್ಚಿದ ಆತಂಕ

Team Udayavani, Jul 22, 2019, 10:57 AM IST

22-July-10

ಯಾದಗಿರಿ: ಗುರುಮಠಕಲ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಕಟ್ಟಡ.

ಯಾದಗಿರಿ: ಕರ್ನಾಟಕ ಏಕೀಕರಣಕ್ಕೂ ಮುನ್ನ ನಿರ್ಮಾಣವಾಗಿರುವ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಆತಂಕದಲ್ಲಿಯೇ ಮಕ್ಕಳು ಪಾಠ ಆಲಿಸುವಂತಾಗಿದೆ.

ಗುರುಮಠಕಲ್ ನಗರದಲ್ಲಿ 1970ರಲ್ಲಿ ಮೈಸೂರು ರಾಜ್ಯವಿದ್ದ ಸಂದರ್ಭದಲ್ಲಿ ದಿ. ವೀರೇಂದ್ರ ಪಾಟೀಲ ಅವರಿಂದ ಉದ್ಘಾಟನೆಗೊಂಡಿರುವ ಪ್ರೌಢಶಾಲೆಯ ಕಟ್ಟಡ 18 ಕೊಠಡಿಗಳನ್ನು ಹೊಂದಿದೆ. ಮಳೆಯ ನೀರು ಗೋಡೆಗೆ ಇಳಿದು ಅಲ್ಲಲ್ಲಿ ಗೋಡೆಗಳು ಹಾಳಾಗುತ್ತಿದ್ದು, ಛಾವಣಿ ಈಗ ಶಿಥಿಲಾವಸ್ಥೆಗೆ ತಲುಪಿದ್ದು, ಶಿಕ್ಷಣ ಇಲಾಖೆ ಇತ್ತ ಗಮನ ಹರಿಸಬೇಕಿದೆ.

ಪ್ರಾಚೀನ ಶಾಲೆಯಲ್ಲಿ ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲಿಷ್‌ ಮಾಧ್ಯಮ ಬೋಧಿಸಲಾಗುತ್ತಿದ್ದು, ಸುಮಾರು 450ಕ್ಕೂ ಹೆಚ್ಚು ಮಕ್ಕಳು ಇಲ್ಲಿ ನಿತ್ಯ ಜ್ಞಾನಾರ್ಜನೆಗೆ ಆಗಮಿಸುತ್ತಾರೆ. ಶಾಲೆಯ ಎಲ್ಲಾ ಕೊಠಡಿಗಳ ಛಾವಣಿಗೆ ಬಳಸಲಾದ ಸಲಾಕೆಗಳು ಕಾಣುತ್ತಿದ್ದು, ವಿಜ್ಞಾನ ಲ್ಯಾಬ್‌ ಛಾವಣಿಯ ಸಿಮೆಂಟ್ ಅರ್ಧದಷ್ಟು ಕುಸಿದು ಬಿದ್ದಿದೆ. ನಿತ್ಯ ಇಲ್ಲಿಗೆ ಆಗಮಿಸುವ ಮಕ್ಕಳು ಭಯದಲ್ಲಿಯೇ ಕಾಲ ಕಳೆಯುವಂತಾಗಿದೆ ಎನ್ನುತ್ತಾರೆ ಪಾಲಕರು.

ಬೆಳಗ್ಗೆ ಮನೆಯಿಂದ ಶಾಲೆಗೆ ಬರುವ ಮಕ್ಕಳು ಮರಳಿ ಮನೆ ತಲುಪುವ ಭರವಸೆಯಿಲ್ಲದ ಭಯ ಇಲ್ಲಿನ ಮಕ್ಕಳು ಹಾಗೂ ಶಿಕ್ಷಕರಲ್ಲಿ ಆವರಿಸಿದೆ. ಮಳೆಯಿಂದ ಹೊರ ಭಾಗದ ಗೋಡೆಗಳು ಪಾಚಿಗಟ್ಟಿದ್ದು, ಛಾವಣಿಯಿಂದ ಮಳೆ ನೀರು ಒಳಗೆ ಬರುತ್ತಿರುವುದರಿಂದ ಶಿಕ್ಷಕರ ಸಿಬ್ಬಂದಿ ಕೋಣೆಯಲ್ಲಿಯೂ ಕುಳಿತುಕೊಳ್ಳಲು ಆಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನಿವಾರ್ಯವಾಗಿ ದಿನ ಕಳೆಯುವಂತಾಗಿದೆ. ಸರ್ಕಾರಿ ಶಾಲೆಗೆ ಬಡವರ ಮಕ್ಕಳೇ ಹೆಚ್ಚಾಗಿ ಬರುತ್ತಾರೆ. ಅದಲ್ಲದೇ ಪ್ರೌಢಶಾಲೆಯೆಂದ ಮೇಲೆ ವಯಸ್ಸಿಗೆ ಬಂದ ಮಕ್ಕಳು ಇರುವುದರಿಂದ ದುರದೃಷ್ಟವಶಾತ್‌ ಏನಾದರೂ ಅವಘಡಗಳು ಸಂಭವಿಸಿದರೆ ಯಾರು ಹೊಣೆ ಎನ್ನುವ ಪ್ರಶ್ನೆ ಉದ್ಭವವಾಗಿದ್ದು, ಇಲ್ಲಿನ ಶಿಕ್ಷಕರಲ್ಲಿಯೂ ಕೂಡ ಭಯ ಆವರಿಸಿದೆ. ಈ ಹಿಂದೆ ಶಾಲೆಯ ಛಾವಣಿ ರಿಪೇರಿಗೆಂದು 12 ಲಕ್ಷ ರೂಪಾಯಿ ಮಂಜೂರಾಗಿದ್ದು, ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ ಎಂದು ತಿಳಿದು ಬಂದಿದ್ದು, ಈವರೆಗೆ ಕಾಮಗಾರಿ ಆರಂಭವಾಗಿಲ್ಲ. ಶಾಲೆಯ ಎಲ್ಲಾ ಕಟ್ಟಡಗಳ ಛಾವಣಿಯನ್ನು ತೆಗೆದು ಹೊಸದಾಗಿ ಹಾಕಬೇಕು. ಅಂದಾಗ ಮಾತ್ರ ಇಲ್ಲಿ ಭಯಮುಕ್ತ ಪಾಠ ಆಲಿಸಬಹುದು ಎನ್ನುತ್ತಾರೆ ಇಲ್ಲಿನ ಮಕ್ಕಳು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.