ಚೆಕ್ಡ್ಯಾಂ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಿ
Team Udayavani, Jul 22, 2019, 1:11 PM IST
ಮಾಗಡಿ: ಪ್ರತಿಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸದಾಗಿ 10 ಚೆಕ್ ಡ್ಯಾಂಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇಒ ಟಿ.ಪ್ರದೀಪ್ ಗ್ರಾಪಂ ಪಿಡಿಒಗಳಿಗೆ ತಾಕೀತು ಮಾಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕಿನ ಗ್ರಾಪಂನಲ್ಲಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮಾತನಾಡಿ, ತಾಲೂಕು ಪಂಚಾಯ್ತಿಗೆ ನೂತನ ಇಒ ಆಗಿ ಅಧಿಕಾರ ಸ್ವೀಕರಿಸಿದ್ದೇನೆ. ಗ್ರಾಪಂ ಅಭಿವೃದ್ಧಿ ಅಧಿಕಾರಗಳ ಪರಿಚಯ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ತಮ್ಮ ಕಾರ್ಯವೈಖರಿಯ ಮೊದಲ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾಗಿ ತಿಳಿಸಿದರು.
ಜಲಾಮೃತ ಯೋಜನೆಯಡಿ ಚೆಕ್ಡ್ಯಾಂ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು. ತಾಲೂಕಿನ ಎಲ್ಲ ಅಂಗನವಾಡಿ ಶೌಚಾಲಯ ಹಾಗೂ ಕಟ್ಟಡಗಳನ್ನು ಪಿಡಿಒಗಳು ಖುದ್ದು ಪರಿಶೀಲಿಸಬೇಕು. ಅಪೂರ್ಣ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಲ ಶೌಚಾಲಯಗಳ ದುರಸ್ತಿ ಕೆಲಸಗಳನ್ನು ಶೀಘ್ರದಲ್ಲಿಯೇ ಮಾಡಿಸಬೇಕು. ಅವಶ್ಯವಿರುವೆಡೆ ಶೌಚಾಯಲ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮ ಸಭೆ ನಡೆಸಿ ಅನುಮೋದನೆ ಪಡೆದಿರುವ ಕುರಿತು ಪಿಡಿಒಗಳು, ತಾಪಂಗೆ ಸಂಪೂರ್ಣ ಮಾಹಿತಿ ನೀಡಬೇಕು. ಕಾಮಗಾರಿಗಳ ಚೆಕ್ ಲಿಸ್ಟ್ ತೆಗೆದ ಮೇಲೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸ್ಥಳ ಪರಿಶೀಲನೆ ನಡೆಸಬೇಕು. ಅನವಶ್ಯಕ ವಿಷಯಗಳ ಬಗ್ಗೆ ಚರ್ಚೆ ಬೇಡ, ಕೆಲಸ ಮಾಡಿ ತೋರಿಸಬೇಕು. ಕಳಪೆ ಕಾಮಗಾರಿಗೆ ಅವಕಾಶ ಕೊಡಬೇಡಿ. ನೀವು ಮಾಡುವ ಕೆಲಸ ದೇವರ ಕೆಲಸಕ್ಕೆ ಸಮ ಎನ್ನುವಂತಿರಬೇಕು ಎಂದು ಇಒ ಸಲಹೆ ನೀಡಿದರು.
ಪಿಡಿಒಗಳು ನೂತನ ತಾಪಂ ಇಒ ಟಿ. ಪ್ರದೀಪ್ ಅವರಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ತಾಪಂನ ಎಲ್ಲ ಗ್ರಾಮಗಳ ಪಿಡಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು