ಅಧಿಕಾರಿಗಳ ಭರವಸೆ: ಧರಣಿ ಹಿಂದಕ್ಕೆ
Team Udayavani, Jul 22, 2019, 2:50 PM IST
ಆಳಂದ: ಅಧಿಕಾರಿಗಳು ಭರವಸೆ ನೀಡಿದ್ದರಿಂದ ಭಾರತೀಯ ಖೇತ್ ಮಜ್ದೂರ್ ಯೂನಿಯನ್, ಅಖೀಲ ಭಾರತ ಕಿಸಾನ್ಸಭಾ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಹಿಂದಕ್ಕೆ ಪಡೆಯಲಾಯಿತು.
ಆಳಂದ: ತಹಶೀಲ್ದಾರ್ ಕಚೇರಿ ಎದುರು ಭಾರತೀಯ ಖೇತ್ ಮಜ್ದೂರ್ ಯೂನಿಯನ್ ಹಾಗೂ ಅಖೀಲ ಭಾರತ ಕಿಸಾನ್ಸಭಾ ಮೂರುದಿನಗಳಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಅಧಿಕಾರಿಗಳು ನೀಡಿದ ಭರವಸೆಯಿಂದಾಗಿ ಮುಖಂಡರು ತಾತ್ಕಾಲಿಕವಾಗಿ ವಾಪಸ್ ಪಡೆದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಬಸವರಾಜ ಎಂ. ಬೆಣ್ಣೆಶಿರೂರ ಅವರು, ಮಳೆ ಮುಂದೂಡಿದರೆ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಅಂತರ್ಜಲ ಹೆಚ್ಚಿಸುವುದು ಹಾಗೂ ನಗರ ಹಾಗೂ ಗ್ರಾಮೀಣ ಜನರಿಗೆ ಕೂಲಿ ಕೆಲಸದ ಬೇಡಿಕೆಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಳೆಗಾಲ ಮಳೆ ಸಕಾಲಕ್ಕೆ ಬರುವ ಲಕ್ಷಣದಿಂದ ಕೃಷಿ ಚಟುವಟಿಕೆ ಚುರುಕಾಗುವ ಲಕ್ಷಣ ಕಂಡುಬರುತ್ತಿದೆ. ಇದರಿಂದ ಇದರಿಂದ ನೀರು, ಮೇವಿನ ಸಮಸ್ಯೆ ಬಗೆ ಹರಿಯಲಿದೆ. ಮಳೆ ಮುಂದೂಡಿದರೆ ನೀರು, ಮೇವು ಒದಗಿಸಲು ವಿಳಂಬ ಮಾಡಬೇಡಿ ಎಂದು ಕಿಸಾನಸಭಾ ಅಧ್ಯಕ್ಷ ಮೌಲಾ ಮುಲ್ಲಾ ಹೇಳಿದರು.
ಬರ ದೇವರು ಸೃಷ್ಟಿಸಿದ ವರವಲ್ಲ. ಬಿದ್ದ ಮಳೆಯಲ್ಲೇ ಅಂತರ್ಜಲ ಹೆಚ್ಚಿಸಿ ಕೃಷಿಗೆ ನೀರು ಒದಗಿಸಲು ಮುಂದಾದರೆ ಬರ ಹಿಂಗುತ್ತದೆ. ಈ ಕೆಲಸ ತಾಲೂಕಿನಾದ್ಯಂತ ಭರದಿಂದ ಸಾಗಲು ಕಾಮಗಾರಿ ನಡೆಯದಿದ್ದರೇ ಮತ್ತೆ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದರು.
ಸ್ಥಳೀಯ ಮಟ್ಟದ ತಾಪಂ, ಪುರಸಭೆ, ಕಂದಾಯ ಅಧಿಕಾರಿಗಳು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸುವುದಾಗಿ ತಿಳಿಸಿದ್ದರಿಂದ ಧರಣಿ ಹಿಂದಕ್ಕೆ ಪಡೆಯಲಾಯಿತು.
ರಮೇಶ ಲೋಹಾರ, ಪುರಸಭೆ ಸದಸ್ಯ ಧೋಂಡಿಬಾ ಸಾಳುಂಕೆ, ಫಕ್ರೋದ್ದೀನ ಗೋಳಾ, ದತ್ತಾತ್ರೆಯ ಕಬಾಡೆ, ಕಲ್ಯಾಣಿ ತುಕಾಣಿ ಮತ್ತಿತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ