ಬೆಳೆ ವಿಮೆ ಮಾಡಿಸಲು ರೈತರ ನಿರಾಸಕ್ತಿ


Team Udayavani, Jul 23, 2019, 3:00 AM IST

bele-vime

ಚಾಮರಾಜನಗರ: ಕಳೆದ ವರ್ಷದ ಬೆಳೆ ವಿಮೆ ಹಣ ಕೈ ಸೇರದಿರುವುದು ಹಾಗೂ ಅದಕ್ಕೂ ಹಿಂದಿನ ಹಣ ಬರುವುದು ವಿಳಂಬವಾದ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿಗೆ ಬೆಳೆವಿಮೆ ಮಾಡಿಸಲು ರೈತರು ನಿರಾಸಕ್ತಿ ವಹಿಸಿದ್ದಾರೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ತಮ್ಮ ಹೆಸರು ನೋಂದಣಿ ಮಾಡಿಸಲು ರೈತರು ನಿರೀಕ್ಷಿತ ಪ್ರಮಾಣದಲ್ಲಿ ಮುಂದೆ ಬರುತ್ತಿಲ್ಲ.

ಜು.31 ಕೊನೆ ದಿನ: ರೈತರು ಬಿತ್ತನೆ ಮಾಡಿದ ಬೆಳೆ ಸಮರ್ಪಕವಾಗಿ ಮಳೆಯಾಗದೇ ಒಣಗಿ ನಷ್ಟವಾದರೆ. ಬೆಳೆ ವಿಮೆಯಲ್ಲಿ ಅದಕ್ಕೆ ಪರಿಹಾರ ನೀಡಲಾಗುತ್ತದೆ. ಬಹುತೇಕ ಬೆಳೆಗಳಿಗೆ ವಿಮೆ ಕಂತಿನ ಹಣ ಪಾವತಿಸಲುಜು. 31 ಕೊನೆ ದಿನ. ಹೀಗಿದ್ದರೂ ಜಿಲ್ಲೆಯಲ್ಲಿ ಈವರೆಗೆ ವಿಮೆ ಕಂತಿನ ಹಣ ಪಾವತಿಸಿ ಯೋಜನೆಯಡಿ ನೋಂದಣಿಯಾಗಿರುವ ರೈತರ ಸಂಖ್ಯೆ ಜು.10ರವರೆಗೆ ಕೇವಲ 6,878 ಮಾತ್ರ !

ಪಾವತಿಗಾಗಿ ಪರಿಶೀಲನೆ: 2016-17ನೇ ಸಾಲಿನಲ್ಲಿ ಜಿಲ್ಲೆಗೆ ಒಟ್ಟು 24 ಕೋಟಿ ರೂ. ವಿಮೆ ಹಣ ವಿಳಂಬವಾಗಿದ್ದರೂ ಬಿಡುಗಡೆಯಾಗಿದ್ದು, ಈ ಪೈಕಿ 17 ಸಾವಿರ ರೈತರಿಗೆ 11 ಕೋಟಿ ರೂ. ಹಣವನ್ನು ಪಾವತಿ ಮಾಡಲಾಗಿದೆ. ಇನ್ನು 32 ಸಾವಿರ ರೈತರಿಗೆ 13 ಕೋಟಿ ರೂ. ಹಣ ಸಹ ಬಂದಿದ್ದು, ಪಾವತಿಗಾಗಿ ಪರಿಶೀಲನೆ ನಡೆಯುತ್ತಿದೆ. ಆದರೆ, ಆಧಾರ್‌ ಜೋಡಣೆ ಸಮಸ್ಯೆಯಿಂದಾಗಿ ಆ ಸಾಲಿನ 1400 ಮಂದಿ ರೈತರಿಗೆ ಹಣ ಕೈ ಸೇರಿಲ್ಲ. ಹೀಗಾಗಿ ಅದನ್ನು ಪರಿಶೀಲಿಸಿ, ಬಗೆಹರಿಸುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.

ಹಣ ಪಾವತಿಸಲು ಹಿಂದೇಟು: ಒಟ್ಟಾರೆ, 2016-17ನೇ ಸಾಲಿನ ವಿಮೆ ಹಣ ವಿಳಂಬವಾದದ್ದು ಹಾಗೂ ಕಳೆದ ಸಾಲಿನಲ್ಲಿ ನೋಂದಣಿಯಾಗಿದ್ದ ಒಟ್ಟು 15 ಸಾವಿರ ರೈತರಿಗೆ ಇನ್ನು ವಿಮೆ ಹಣ ಬಿಡುಗಡೆಯಾಗದಿರುವುದು ಈ ಸಾಲಿನಲ್ಲಿ ವಿಮೆ ಕಂತಿನ ಹಣ ಪಾವತಿಸಲು ರೈತರು ಹಿಂದೇಟು ಹಾಕಲು ಕಾರಣ. ಆದರೂ ಇಲ್ಲಿ ಗಮನಿಸಬೇಕಾದ ಅಂಶವೆಂದರೆ, 2016-17ನೇ ಸಾಲಿನಲ್ಲಿ ರೈತರಿಂದ ಪಾವತಿಯಾದ ಕಂತಿನ ಹಣ 2.5 ಕೋಟಿ ರೂ. ಆದರೆ, ಅದಕ್ಕೆ ಪ್ರತಿಯಾಗಿ ಬೆಳೆ ನಷ್ಟಕ್ಕೆ ಬಿಡುಗಡೆಯಾಗಿರುವ ಹಣ 24 ಕೋಟಿ ರೂ. ! ಈಗಾಗಲೇ ಕೆಲ ಬೆಳೆಗಳಿಗೆ ವಿಮೆ ಕಂತಿನ ಹಣ ಪಾವತಿಸುವ ದಿನಾಂಕ ಕೊನೆಗೊಂಡಿದೆ. ಇನ್ನು ಬಹುತೇಕ ಬೆಳೆಗಳಿಗೆ ಕಂತಿನ ಹಣ ಪಾವತಿಸಿ ವಿಮೆ ಯೋಜನೆಗೆ ನೋಂದಣಿ ಮಾಡಿಸಲು ಜು. 31ರವರೆಗೂ ಕಾಲಾವಕಾಶವಿದೆ.

1,489 ಮಂದಿ ಮಾತ್ರ ನೋಂದಣಿ: ಸದ್ಯ ಈವರೆಗೆ ಚಾಮರಾಜನಗರ ತಾಲೂಕಿನಲ್ಲಿ 3,103ಮಂದಿ ಕಂತಿನ ಹಣ ಕಟ್ಟಿ ನೋಂದಣಿ ಮಾಡಿಸಿದ್ದಾರೆ. ಗುಂಡ್ಲು ಪೇಟೆ ತಾಲೂಕಿನಲ್ಲಿ 99 ಮಂದಿ, ಹನೂರಿನಲ್ಲಿ ಕೇವಲ 23 ಮಂದಿ , ಕೊಳ್ಳೇಗಾಲ ತಾಲೂಕಿನಲ್ಲಿ 2,164 ಮಂದಿ ಹಾಗೂ ಯಳಂದೂರು ತಾಲೂಕಿನಲ್ಲಿ 1,489 ಮಂದಿ ಮಾತ್ರ ಬೆಳೆವಿಮೆಗೆ ನೋಂದಣಿ ಮಾಡಿಸಿದ್ದಾರೆ. ಕಳೆದ ವರ್ಷ ಮುಂಗಾರು ಹಂಗಾಮಿಗೆ 15,196 ಮಂದಿ ರೈತರು ನೋಂದಣಿ ಮಾಡಿಸಿದ್ದರು. ಆದರೆ, ಈ ಬಾರಿ ಅಷ್ಟು ಮಂದಿಯೂ ನೋಂದಣಿಗೊಳ್ಳುತ್ತಾರೋ ಇಲ್ಲವೋ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯಲ್ಲಿ ಬೆಳೆಯ ಪರಿಸ್ಥಿತಿ: ಜಿಲ್ಲೆಯಲ್ಲಿ ವಾರ್ಷಿಕ ಬಿತ್ತನೆ ಗುರಿ 1.50 ಲಕ್ಷ ಹೆಕ್ಟೇರ್‌. ಆದರೆ ಈ ಬಾರಿ ಮುಂಗಾರು ಹಂಗಾಮಿನಲ್ಲಿ 47 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಈ ಪೈಕಿ ಬಹುತೇಕ ಬೆಳೆ ಮಳೆ ಕೊರತೆ ಪರಿಣಾಮ ಬಾಡಿ, ಒಣಗುವ ಸ್ಥಿತಿಯಲ್ಲಿವೆ. ಒಂದು ಹೆಕ್ಟೇರ್‌ಗೆ ಒಬ್ಬ ರೈತರು ಎಂಬ ಲೆಕ್ಕಾಚಾರದಲ್ಲೂ ಒಟ್ಟು 47 ಸಾವಿರ ಮಂದಿಗೆ ಬೆಳೆ ನಷ್ಟವಾಗಲಿದೆ. ಆದರೆ, ಈವರೆಗೆ ಬೆಳೆ ವಿಮೆಗಾಗಿ ನೋಂದಣಿಗೊಂಡಿರುವ ರೈತರ ಸಂಖ್ಯೆ 6,878 ಮಾತ್ರ. ತೊಗರಿ, ಹುರುಳಿ, ರಾಗಿ, ಹತ್ತಿ ಹಾಗೂ ಭತ್ತ (ನೀರಾವರಿ) ಬೆಳೆಗಳಿಗೆ ಜು. 31ರವರೆಗೂ ವಿಮೆ ಕಂತಿನ ಹಣ ಪಾವತಿಸಿ, ನೋಂದಣಿಯಾಗಲು ಅವಕಾಶವಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.

* ಬನಶಂಕರ ಆರಾಧ್ಯ.ಕೆ.ಎಸ್‌

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.