ಕೋಡಿಬೆಂಗ್ರೆ ಮೀನುಗಾರಿಕೆ ಕಿರು ಬಂದರು: ಮೂಲಸೌಕರ್ಯಕ್ಕೆ ಬೇಡಿಕೆ


Team Udayavani, Jul 23, 2019, 5:36 AM IST

kodibengre

ಮಲ್ಪೆ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ ಕೋಡಿಬೆಂಗ್ರೆ ಮೀನುಗಾರಿಕೆ ಬಂದರಿನ ಜೆಟ್ಟಿ ವಿಸ್ತರಣೆ ಕಾಮಗಾರಿಗೆ ಶಿಲಾನ್ಯಾಸ ನಡೆದು ವರ್ಷ ಕಳೆದರೂ ಕೆಲಸ ಆರಂಭಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ನಬಾರ್ಡ್‌ ಯೋಜನೆಯಡಿ 2.70 ಕೋ. ರೂ. ವೆಚ್ಚದಲ್ಲಿ ಸುಮಾರು 90 ಮೀಟರ್‌ ಉದ್ದದ ಜೆಟ್ಟಿ ವಿಸ್ತರಣೆ ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದು ಟೆಂಡರ್‌ ಪ್ರಕ್ರಿಯೆ ನಡೆದು ಗುದ್ದಲಿಪೂಜೆಯನ್ನು 2018ರ ಮಾರ್ಚ್‌ನಲ್ಲಿ ನಡೆಸಲಾಗಿದೆ. ಆದರೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ.

25 ವರ್ಷ ಹಿಂದಿನ ಜೆಟ್ಟಿ

ಈಗಿರುವ ಜೆಟ್ಟಿ ಸುಮಾರು 25 ವರ್ಷ ಹಿಂದೆ ಕಿರು ಬಂದರು ಯೋಜನೆಯಡಿ ನಿರ್ಮಾಣವಾಗಿದ್ದು ಆ ಬಳಿಕ ಇಲ್ಲಿಯವರೆಗೆ ವಿಸ್ತರಣೆ ಯಾಗಿಲ್ಲ. ಆದರೆ ಬೋಟ್‌ಗಳ ಸಂಖ್ಯೆ ಮೊದಲಿಗಿಂತ 10 ಪಟ್ಟು ಹೆಚ್ಚಾಗಿದೆ. ಇಲ್ಲಿ ಸ್ಥಳಾವಕಾಶದ ಕೊರತೆಯಿಂದ ಈ ಭಾಗದ ಬೋಟ್‌ಗಳು ಅನಿವಾರ್ಯವಾಗಿ ಇತರ ಬಂದರನ್ನು ಅವಲಂಬಿಸಬೇಕಾಗಿದೆ. ಜೆಟ್ಟಿ ವಿಸ್ತರ ಣೆಗೆ ಸಾಕಷ್ಟು ಸ್ಥಳಾವಕಾಶವಿದ್ದು, ನೈಸರ್ಗಿಕ ಸ್ಥಿತಿ ಕೂಡ ಅನುಕೂಲವಾಗಿದೆ. ಕನಿಷ್ಠ 100 ಮೀ. ನಷ್ಟು ವಿಸ್ತರಣೆ ಮಾಡಬೇಕೆಂಬ ಬೇಡಿಕೆ ಇಲ್ಲಿನ ಮೀನುಗಾರದ್ದಾಗಿತ್ತು.

ಹೂಳಿನ ಸಮಸ್ಯೆ, ವ್ಯವಹಾರಕ್ಕೆ ಹಿನ್ನಡೆ

ಕೋಡಿಬೆಂಗ್ರೆ ಮೀನುಗಾರಿಕೆ ಬಂದರು ಹೂಳಿನ ಸಮಸ್ಯೆಯಿಂದ ಮೀನುಗಾರರು ಪರದಾಡುವಂತಾಗಿದೆ. ಇಲ್ಲಿನ ಅಳಿವೆ ಬಾಗಿಲು ಮತ್ತು ಬಂದರಿನ ಒಳಭಾಗದಲ್ಲಿ ಸಂಪೂರ್ಣ ಹೂಳು ತುಂಬಿದೆ. ಮೀನುಗಾರರು ನೀರಿನ ಭರತದ ಸಮಯವನ್ನು ಕಾದು ಸಮುದ್ರಕ್ಕೆ ಇಳಿಯಬೇಕಾಗಿದೆ. ಅದೇ ರೀತಿ ಬಂದರಿಗೆ ಬರಬೇಕಾದರೂ ನೀರು ತುಂಬಿದರೆ ಮಾತ್ರ ಸಾಧ್ಯವಾಗುತ್ತದೆ. ಇದು ಮೀನುಗಾರಿಕೆ ವ್ಯವಹಾರಕ್ಕೆ ಹಿನ್ನೆಡೆಯಾಗಿದೆ. ಹಾಗಾಗಿ ಈ ಭಾಗದ ಬೋಟ್‌ಗಳು ಲಂಗರು ಹಾಕಲು ಮಲ್ಪೆ ಬಂದರಿಗೆ ತೆರಳುತ್ತವೆೆ. ಡ್ರೆಜ್ಜಿಂಗ್‌ ಕಾಮಗಾರಿಯನ್ನು ನಡೆಸುವ ಬಗ್ಗೆ ಇಲ್ಲಿನ ಮೀನುಗಾರರು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಇಲಾಖೆಗಳಿಗೆ ಮನವಿ ನೀಡಿ ಆಗ್ರಹಿಸಿದ್ದರೂ ಇದುವರೆಗೂ ಯಾರೂ ತಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ.

ಶಿಥಿಲಾವಸ್ಥೆಯಲ್ಲಿ ಹರಾಜು ಕಟ್ಟಡ

ಇಲ್ಲಿನ ಮೀನು ಹರಾಜು ಪ್ರಾಂಗಣ ಸುಮಾರು 25 ವರ್ಷಗಳ ಹಳೆಯದು. ಕಟ್ಟಡಗಳು ಶಿಥಿಲಾವಸ್ಥೆಯನ್ನು ತಲುಪಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ವಿದ್ಯುತ್‌ ವ್ಯವಸ್ಥೆ ಇಲ್ಲ. ಹರಾಜು ಪ್ರಾಂಗಣವನ್ನು ಪುನರ್‌ ನಿರ್ಮಾಣ ಮಾಡ ಬೇಕೆಂಬ ಬೇಡಿಕೆಯೂ ಮೀನುಗಾರರದ್ದಾಗಿದೆ. ಬಂದರು ಪ್ರದೇಶದ ಆವರಣಗೋಡೆ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ಪೊದೆಗಳು, ಗಿಡಗಳು ಬೆಳದು ನಿಂತಿದ್ದರೂ ತೆರವುಗೊಳಿಸುವ ಕಾರ್ಯ ನಡೆಯುತ್ತಿಲ್ಲ.

  • ನಟರಾಜ್ ಮಲ್ಪೆ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.