ಕೆಸಿಆರ್ ಸ್ವಗ್ರಾಮದ ಕುಟುಂಬಗಳಿಗೆ 10 ಲಕ್ಷ ರೂ.!
Team Udayavani, Jul 23, 2019, 5:00 AM IST
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ತನ್ನ ಗ್ರಾಮದಲ್ಲಿನ ಎಲ್ಲ 2 ಸಾವಿರ ಕುಟುಂಬ ಗಳಿಗೂ ತಲಾ 10 ಲಕ್ಷ ರೂ. ನೀಡಲು ನಿರ್ಧರಿಸಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಚಿಂತಮಡಕ್ಕ ಗ್ರಾಮದಲ್ಲಿ ಸದ್ಯ 2 ಸಾವಿರ ಕುಟುಂಬಗಳಿವೆ. ಇದೇ ಗ್ರಾಮದಲ್ಲಿ ಕೆಸಿಆರ್ ಜನಿಸಿದ್ದು, ಸೋಮವಾರ ಇಲ್ಲಿಗೆ ಅವರು ಭೇಟಿ ನೀಡಿದ್ದರು. ಈ ವೇಳೆ ಕೆಸಿಆರ್ ಈ ಘೋಷಣೆ ಮಾಡಿದ್ದಾರೆ. ಇದಲ್ಲದೇ, ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣ ಮತ್ತು ಇಡೀ ಗ್ರಾಮಕ್ಕೆ ಒಳಚರಂಡಿ ವ್ಯವಸ್ಥೆಯನ್ನು ಮಾಡಿ ಕೊಡುವು ದಾಗಿಯೂ ಅವರು ಘೋಷಿಸಿದ್ದಾರೆ.
ಮುಂದಿನ 6 ತಿಂಗಳಲ್ಲಿ ಎಲ್ಲ ಕೆಲಸವನ್ನೂ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ ಅವರು, ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗುತ್ತದೆ ಎಂದಿದ್ದಾರೆ. ಆರು ತಿಂಗಳ ಅನಂತರ ಆಗಮಿಸಿ ಎಲ್ಲ ಯೋಜನೆಗಳನ್ನೂ ಉದ್ಘಾಟಿಸುವುದಾಗಿ ಅವರು ಹೇಳಿದ್ದಾರೆ. ಇಲ್ಲಿ ಕಲ್ಯಾಣ ಮಂಟಪ, ರಸ್ತೆ ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆ ಯನ್ನೂ ಜಾರಿಗೊಳಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ