ಕರಾವಳಿಯ ಎಲ್ಲೆಡೆ ವರುಣಾರ್ಭಟ; ಅಲ್ಲಲ್ಲಿ ಹಾನಿ

ಭಾರೀ ವರ್ಷಧಾರೆ; ಭೂ-ಮನೆ ಕುಸಿತ, ಮರ ಬಿದ್ದು ಸಂಚಾರ ಅಸ್ತವ್ಯಸ್ತ

Team Udayavani, Jul 23, 2019, 5:00 AM IST

2207MLR53-KANKANADY4

ಕಂಕನಾಡಿ: ಟ್ರಾನ್ಸ್‌ಫಾರ್ಮರ್‌ ಬಿದ್ದು ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ದಿನವಿಡೀ ವರುಣ ಅಬ್ಬರಿಸಿದ ಪರಿಣಾಮ ವಿವಿಧೆಡೆ ಭೂಕುಸಿತ, ಮರ ಧರೆಗುರುಳಿದ ಮತ್ತು ಮನೆ ಕುಸಿದ ಘಟನೆಗಳು ಸಂಭವಿಸಿವೆ. ಮಳೆಯಿಂದ ನಗರ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ನಗರದ ಬಿಜೈಯಲ್ಲಿ ರಸ್ತೆಯ ಮೇಲೆ ಗುಡ್ಡ ಕುಸಿದ ಮತ್ತು ಕಂಕನಾಡಿಯಲ್ಲಿ ರಸ್ತೆಗೆ ಮರ ಬುಡಮೇಲಾಗಿ ಬಿದ್ದದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಂಕನಾಡಿ ವ್ಯಾಪ್ತಿಯಲ್ಲಿ 11ಕ್ಕೂ ಅಧಿಕ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ.

ಕಂಕನಾಡಿ ಹೂವಿನ ಮಾರುಕಟ್ಟೆ ಸಮೀಪದಲ್ಲಿದ್ದ ಹಳೆಯ ಆಲದ ಮರ ರಿಕ್ಷಾದ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಹತ್ತಿರದ ಮೂರು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಕಂಬ -ವಿದ್ಯುತ್‌ ತಂತಿಗಳೂ ನೆಲಕ್ಕುರುಳಿವೆ.

ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಯ ಸಮೀಪ ಬೃಹತ್‌ ಮರ ನೆಲಕ್ಕೆ ಬಿದ್ದು ಸುಮಾರು 8 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಇನ್ನಷ್ಟು ವಿದ್ಯುತ್‌ ಕಂಬಗಳು ಅಪಾಯದ ಸ್ಥಿತಿಯಲ್ಲಿವೆ.

ಬಿಜೈ ಸಕೀìಟ್‌ ಹೌಸ್‌ ಪಕ್ಕದ ಮುಖ್ಯರಸ್ತೆಯ ಬಟ್ಟಗುಡ್ಡದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತವಾಯಿತು. ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಮುಂಭಾಗ ನೀರು ನಿಂತು ಸಮಸ್ಯೆಯಾಯಿತು.

ಬಂಟ್ವಾಳ: ಧಾರಾಕಾರ ಮಳೆ; ಹಾನಿ
ಬಂಟ್ವಾಳ: ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದ್ದು, 2 ಮನೆಗಳಿಗೆ ಹಾನಿ, 5 ಕಡೆಗಳಲ್ಲಿ ಸಣ್ಣಪುಟ್ಟ ಹಾನಿಯಾಗಿದೆ.

ಉಳ್ಳಾಲದ ಅಂಬ್ಲಿಮೊಗರು ಗ್ರಾಮದ ಮದಕ ಜಂಕ್ಷನ್‌ ಬಳಿ ಗುಡ್ಡ ಕುಸಿದು ಎರಡು ಮನೆಗಳಿಗೆ ಮತ್ತು ವಿದ್ಯುತ್‌ ಕಂಬಕ್ಕೂ ಹಾನಿಯಾಗಿದೆ.

ಸಂಜೆ ಬೀಸಿದ ಗಾಳಿಗೆ ಯೇನಪೊಯ ಆಸ್ಪತ್ರೆ ಬಳಿ ಕೊಣಾಜೆ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮುಖ್ಯ ಲೈನ್‌ ತುಂಡಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಯಿತು. ಸುಮಾರು 12ಕ್ಕೂ ಹೆಚ್ಚಿನ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮೆಸ್ಕಾಂ ಇಲಾಖೆ ರಾತ್ರಿವರೆಗೆ ಕಾಮಗಾರಿ ನಡೆಸಿ ವಿದ್ಯುತ್‌ ಕಂಬ ಬದಲಾವಣೆಯ ಕಾರ್ಯ ನಡೆಸಿತು.

ಕೊಡಗು: ಸಾಧಾರಣ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ.

ಕಂಕನಾಡಿ: ಮರ
ಉರುಳಿ ಇಬ್ಬರಿಗೆ ಗಾಯ
ನಗರದ ಕಂಕನಾಡಿ ವೃತ್ತದ ಬಳಿ ಬೃಹತ್‌ ಆಲದ ಮರ ಸೋಮವಾರ ಸಂಜೆ ಗಾಳಿ-ಮಳೆಗೆ ಉರುಳಿ ವಿದ್ಯಾರ್ಥಿನಿ ಸಹಿತ ಇಬ್ಬರು ಗಾಯಗೊಂಡಿದ್ದಾರೆ.

ವೆಲೆನ್ಸಿಯಾ ನಿವಾಸಿ, ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರಿಯಾ (13) ಮತ್ತು ಓರ್ವ ಆ್ಯಕ್ಟೀವಾ ಸವಾರ ಗಾಯಗೊಂಡವರು.

ವಿದ್ಯಾರ್ಥಿನಿ ರಿಯಾ ಮತ್ತು ಐವರು ಸ್ನೇಹಿತೆಯರು ಮನೆ ಕಡೆಗೆ ಹೊರಟಿದ್ದ ವೇಳೆ ಬೀಸಿದ ಗಾಳಿಮಳೆಯಿಂದ ಆಲದಮರ ನೆಲಕ್ಕುರುಳಿತು. ರಿಯಾಗೆ ಮರದ ಗೆಲ್ಲು ತಾಗಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಫ‌ಳ್ನೀರ್‌ ಕಡೆಯಿಂದ ಕಂಕನಾಡಿಗೆ ತೆರಳುತ್ತಿದ್ದ ಆ್ಯಕ್ಟಿವಾ ಸ್ಕೂಟರ್‌ ಸವಾರ ಮರದ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದರು.

ಉಡುಪಿಯಲ್ಲಿ ಭಾರೀ ಮಳೆ
ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಪಡುಬಿದ್ರಿ, ಕಾಪು, ಕಟಪಾಡಿ, ಬೆಳ್ಮಣ್‌, ಮಲ್ಪೆ, ಬ್ರಹ್ಮಾವರ, ಉಪ್ಪುಂದ ಭಾಗಗಳಲ್ಲಿ ಉತ್ತಮ ಮಳೆ ಸುರಿಯಿತು. ಉಡುಪಿ ನಗರದಲ್ಲೂ ಬೆಳಗ್ಗಿನಿಂದಲೇ ಮಳೆ ಇತ್ತು. ಗಾಳಿ ಮಳೆಗೆ ಮೆಸ್ಕಾಂ ಉಡುಪಿ ವಿಭಾಗದ 7 ಕಂಬಗಳು ಧರೆಗುರುಳಿವೆ.

ಕುಂದಾಪುರ: ಮರ ಬಿದ್ದು ಹಾನಿ
ಕುಂದಾಪುರ: ತಾಲೂಕಿನೆಲ್ಲೆಡೆ ಉತ್ತಮ ಮಳೆಯಾಗಿದೆ. ಹೊಂಬಾಡಿ – ಮಂಡಾಡಿ ಗ್ರಾಮದ ಮನೆಗೆ ಮರ ಬಿದ್ದು ಹಾನಿಯಾಗಿದೆ. ಕುಂದಾಪುರ, ಕೋಟೇಶ್ವರ, ತೆಕ್ಕಟ್ಟೆ, ಕುಂಭಾಶಿ, ಸಿದ್ದಾಪುರ, ಹಾಲಾಡಿ, ಶಂಕರ ನಾರಾಯಣ, ಬೈಂದೂರು, ಶಿರೂರು, ಉಪ್ಪುಂದ, ಮರವಂತೆ, ನಾವುಂದ, ಗಂಗೊಳ್ಳಿ, ಹೆಮ್ಮಾಡಿ, ತಲ್ಲೂರು, ಕೊಲ್ಲೂರು, ವಂಡ್ಸೆ, ಗೋಳಿಯಂಗಡಿ ಸಹಿತ ಎಲ್ಲೆಡೆ ನಿರಂತರ ಮಳೆಯಾಗಿದೆ.

ಆಗುಂಬೆ: ರಸ್ತೆಗೆ ಉರುಳಿದ ಮರ
ಹೆಬ್ರಿ: ಆಗುಂಬೆ ಘಾಟಿಯ ಎರಡನೇ ಸುತ್ತಿನಲ್ಲಿ ಮರವೊಂದು ಸೋಮವಾರ ಬೆಳಗ್ಗೆ ರಸ್ತೆಗೆ ಉರುಳಿದ ಪರಿಣಾಮ ಸ್ವಲ್ಪ ಹೊತ್ತು ಸಂಚಾರಕ್ಕೆ ಸಮಸ್ಯೆಯಾಯಿತು. ಬಳಿಕ ಬಸ್ಸಿನ ಸಿಬಂದಿ ಮತ್ತು ಪ್ರಯಾಣಿಕರು ಮರ ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಾಸರಗೋಡು: ಧಾರಾಕಾರ ಮಳೆ
ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಎರಡು ಮನೆಗಳಿಗೆ ಭಾರೀ, 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಾಸರಗೋಡು ಚೇರಂಗೈ ಕಡಪ್ಪುರದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದೆ.

ಸಂಪಾಜೆ: ಸುರಿಯುತ್ತಿರುವ ಭಾರೀ ಮಳೆಯಿಂದ ಇಲ್ಲಿಗೆ ಸಮೀಪದ ಎರಡನೇ ಮೊಣ್ಣಂಗೇರಿಯಲ್ಲಿ ಸೋಮವಾರ ಸಂಜೆ ಗುಡ್ಡ ಕುಸಿದು ಒಳರಸ್ತೆಯೊಂದು ಸಂಪೂರ್ಣ ಬಂದ್‌ ಆಗಿದೆ.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.