ಮುಚಖಂಡಿ ಪ್ರವಾಸಿ ತಾಣ ಯೋಜನೆಗೆ ಗ್ರಹಣ


Team Udayavani, Jul 23, 2019, 9:52 AM IST

bk-tdy-1

ಬಾಗಲಕೋಟೆ: ಮುಚಖಂಡಿ ಕೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್‌ ಶಿವನ ಮೂರ್ತಿ.

ಬಾಗಲಕೋಟೆ: ಐತಿಹಾಸಿಕ ಮುಚಖಂಡಿ ಕೆರೆ ಹಾಗೂ ಗ್ರಾಮವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರವೇ ಬಜೆಟ್‌ನಲ್ಲಿ ಘೋಷಿಸಿ, ನಾಲ್ಕು ವರ್ಷ ಕಳೆದರೂ ಈವರೆಗೆ ಮಂಜೂರಾತಿ ದೊರೆತಿಲ್ಲ. ಹೀಗಾಗಿ ಜಿಲ್ಲೆಯ ಮಹತ್ವದ ಯೋಜನೆ ಸರ್ಕಾರದಲ್ಲಿ ಧೂಳು ತಿನ್ನುತ್ತಿದೆ ಎಂಬ ಅಸಮಾಧಾನ ಕೇಳಿ ಬಂದಿದೆ.

ಹೌದು, ನಗರಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ಮುಚಖಂಡಿ ಗ್ರಾಮ ಹಲವು ವಿಶೇಷತೆಗಳಿಂದ ಜಿಲ್ಲೆಯ ಜನರ ಗಮನ ಸೆಳೆದಿದೆ. ವರ್ಷದಲ್ಲಿ ಎರಡು ವೀರಭದ್ರೇಶ್ವರ ರಥೋತ್ಸವ, ವೀರಭದ್ರೇಶ್ವರ ಜಾತ್ರೆ ಇಲ್ಲಿ ನಡೆಯುತ್ತಿದ್ದು, ಬ್ರಿಟಿಷರ ಕಾಲದ ಬೃಹತ್‌ ಕೆರೆ ಇಲ್ಲಿದೆ. ಇಂತಹ ಐತಿಹಾಸಿಕ ಬೃಹತ್‌ ಕೆರೆಯಂಗಣ ಪ್ರವಾಸಿ ತಾಣವನ್ನಾಗಿ ಮಾಡಲು ಜಿಲ್ಲಾಡಳಿತ ವಿಸೃತ ಯೋಜನೆ ರೂಪಿಸಿ, ಸರ್ಕಾರಕ್ಕೆ ಸಲ್ಲಿಸಿ, ಈಗ ಬರೋಬ್ಬರಿ ನಾಲ್ಕು ವರ್ಷವಾಗಿವೆ. ಆದರೂ, ಸರ್ಕಾರ ಯೋಜನೆಗೆ ಮಂಜೂರಾತಿ ನೀಡಿಲ್ಲ.

ಏನಿದು ಯೋಜನೆ: 0.58 ಟಿಎಂಸಿ ನೀರು ಸಂಗ್ರಹ, 721 ಎಕರೆ ವಿಸ್ತಾರ ಹೊಂದಿರುವ ಮುಚಖಂಡಿ ಕೆರೆ ತುಂಬಿಸಲು 12.40 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಿದ್ದು, ಈಗಾಗಲೇ ಕೆರೆ ತುಂಬಿಸಲು ಆರಂಭಿಸಲಾಗಿದೆ. ಇದರ ಉಳಿಕೆ ಹಣದಲ್ಲಿ ಕೆರೆಯ ಎರಡೂ ಬದಿಗೆ ತಲಾ 1 ಕಿ.ಮೀ ವರೆಗೆ ವಾಯುವಿಹಾರ ಪಥ ನಿರ್ಮಿಸಲಾಗಿದೆ. ಕೆರೆಯಂಗಳ ತುಂಬಿಕೊಂಡರೆ, ವಿಶಾಲವಾಗಿ ಹರಡಿಕೊಂಡ ನೀರು, ನೋಡುಗರ ಕಣ್ಮನ ಸೆಳೆಯುತ್ತಿದೆ.

ಕೆರೆಗೆ ಬಣ್ಣ ಬಣ್ಣದ ವಿದ್ಯುತ್‌ ಅಲಂಕಾರ, ಸಂಗೀತ ಕಾರಂಜಿ, ಕೆರೆಯಂಗಳದಲ್ಲಿ ಬೋಟಿಂಗ್‌ ಪ್ರಯಾಣ, ಅಲ್ಲದೇ 1882ರಲ್ಲಿ ಅದ್ಭುತ ನಿರ್ಮಾಣದ ಮೂಲಕ ಗಮನ ಸೆಳೆಯುವ ಕೆರೆಯ ಸುತ್ತಲಿನ ಪರಿಸರವನ್ನು ಮಕ್ಕಳ ಉದ್ಯಾನವನ, ಈಗಾಗಲೇ ಇರುವ ವೀರಭದ್ರೇಶ್ವರ ದೇವಸ್ಥಾನದ ಜತೆಗೆ, ಕೆರೆಯ ಬಳಿ 80 ಅಡಿ ಎತ್ತರದ ಶಿವನಮೂರ್ತಿ ನಿರ್ಮಿಸಿ, ಭಕ್ತಿಯ ತಾಣವನ್ನಾಗಿ ಮಾಡುವ ಯೋಜನೆ ಒಳಗೊಂಡಿದೆ. ಒಟ್ಟು ಎ ದಿಂಡ ಡಿ ವಿಭಾಗಗಳು ಮಾಡಿಕೊಂಡು ನಾಲ್ಕು ಭಾಗದಲ್ಲಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆ ಇದರಲ್ಲಿದೆ.

ನಾಲ್ಕು ವರ್ಷದಿಂದ ಧೂಳು: ಕಳೆದ 2015ರಲ್ಲಿ ರಾಜ್ಯ ಸರ್ಕಾರವೇ, ಮುಚಖಂಡಿ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ ಬಳಿಕ, ಜಿಲ್ಲಾಡಳಿತ ಒಟ್ಟು ರೂ. 9,03,70,000 ಮೊತ್ತದ ಸಮಗ್ರ ಯೋಜನಾ ವರದಿ ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರವಾಸೋದ್ಯಮ ಇಲಾಖೆಯಿಂದ 2017ರಲ್ಲಿ ಮಂಜೂರಾತಿ ಹಂತದಲ್ಲೂ ಈ ಯೋಜನೆ ಬಂದಿತ್ತು. ಆದರೆ, ಬಳಿಕ ಏನಾಯಿತೋ ಗೊತ್ತಿಲ್ಲ. ಯೋಜನೆ ನನೆಗುದಿದೆ ಬಿದ್ದಿದೆ. ಬಳಿಕ ಈ ಯೋಜನೆಗೆ ಮಂಜೂರಾತಿ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವೂ ಪ್ರಯತ್ನಿಸಿಲ್ಲ ಎಂಬ ಮಾತು ಕೇಳಿ ಬಂದಿದೆ.

ಪರಿಶೀಲಿಸಿ ಕ್ರಮ:

ಮುಚಖಂಡಿ ಕೆರೆ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆ ಕುರಿತು ನನಗೆ ಪೂರ್ಣ ಮಾಹಿತಿ ಇಲ್ಲ. ಕೂಡಲೇ ಆ ಕುರಿತು ಪರಿಶೀಲಿಸಿ, ಯೋಜನೆ ಯಾವ ಹಂತದಲ್ಲಿದೆ, ಎಲ್ಲಿ ವಿಳಂಬವಾಗಿದೆ ಎಂಬುದರ ಕುರಿತು ಮಾಹಿತಿ ಪಡೆದು, ಸರ್ಕಾರದ ಗಮನಕ್ಕೆ ತರಲಾಗುವುದು. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. •ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರು
•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.