ಕೊನೆಗೂ ಮುಗೀತು ಮೇಲ್ಸೇತುವೆ ಕಾಮಗಾರಿ

•ಆರು ವರ್ಷದಿಂದ ನಡೆದಿದ್ದ ಕೆಲಸ•ಪರಿಷ್ಕೃತ ಯೋಜನೆಯಿಂದಾಗಿ ನಿರ್ಮಾಣ ವಿಳಂಬ

Team Udayavani, Jul 23, 2019, 11:07 AM IST

ballary-tdy-1

ಬಳ್ಳಾರಿಯ ಸತ್ಯನಾರಾಯಣ ಮೇಲ್ಸೇತುವೆಯಲ್ಲಿ ವಾಹನಗಳ ಸಂಚರಿಸುತ್ತಿರುವುದು.

ಬಳ್ಳಾರಿ: ನಗರದ ಸತ್ಯನಾರಾಯಣ ಪೇಟೆ ಬಳಿ ಕಳೆದ 6 ವರ್ಷಗಳಿಂದ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆಗೆ ಕೊನೆಗೂ ಮೋಕ್ಷ ಸಿಕ್ಕಿದೆ. ಕೆಲವೆ ದಿನಗಳಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ.

ಸತ್ಯನಾರಾಯಣಪೇಟೆಯಲ್ಲಿನ ರೈಲ್ವೆಗೇಟ್ನಿಂದ ಸ್ಥಳೀಯ ನಿವಾಸಿಗಳು ನಿತ್ಯ ಸಮಸ್ಯೆ ಅನುಭವಿಸುತ್ತಿದ್ದರು. ಪ್ರತಿ ಐದರಿಂದ 10 ನಿಮಿಷದೊಳಗೆ ಪ್ರಯಾಣಿಕ ರೈಲು ಅಥವಾ ಸರಕು ಸಾಗಿಸುವ ಗೂಡ್ಸ್‌ ರೈಲು ಸಂಚಾರದಿಂದಾಗಿ ರೈಲ್ವೆ ಗೇಟ್ ಹಾಕಲಾಗುತ್ತಿತ್ತು. ಇದರಿಂದ ಕಾರ್ಯಗಳಿಗೆ ತುರ್ತಾಗಿ ಹೋಗುವವರಿಗೆ ದಿನನಿತ್ಯದ ಸಮಸ್ಯೆಯಾಗಿತ್ತು. ಹಾಗಾಗಿ ಸ್ಥಳೀಯರ ಸಂಚಾರಕ್ಕೆ ಕೆಳಸೇತುವೆ, ಭಾರಿ ವಾಹನಗಳ ಸಂಚಾರಕ್ಕೆ ಮೇಲ್ಸೇತುವೆ ನಿರ್ಮಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಕೆಳಸೇತುವೆ ಈಗಾಗಲೇ ನಿರ್ಮಾಣಗೊಂಡಿದ್ದು, ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಇನ್ನೊಂದು ತಿಂಗಳೊಳಗಾಗಿ ಭಾರಿ ವಾಹನಗಳ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.

ನಗರದಿಂದ ಮೋಕಾ ರಸ್ತೆ ಮೂಲಕ ನೆರೆಯ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆ ನಿರ್ಮಾಣಕ್ಕೆ 2013 ಜೂನ್‌ 1ರಂದು ಕಾಮಗಾರಿಗೆ ಚಾಲನೆ ನೀಡಲಾಯಿತು. 800 ಮೀಟರ್‌ ಉದ್ದ, 7.5 ಮೀಟರ್‌ ಅಗಲದ ಮೇಲ್ಸೇತುವೆ ನಿರ್ಮಾಣಕ್ಕೆ ಮೊದಲಿಗೆ 15.75 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿತ್ತು. ರಸ್ತೆ ಬದಿಯ ಕೆಲವರು ತಮ್ಮ ಮನೆಗಳನ್ನು ತೆರವುಗೊಳಿಸಲು ಅವಕಾಶ ನೀಡಿಲ್ಲ. ಇದೇ ಕಾರಣಕ್ಕೆ ಎರಡ್ಮೂರು ವರ್ಷಗಳ ಕಾಲ ಕಾಮಗಾರಿಯೂ ಸ್ಥಗಿತಗೊಂಡು ಯೋಜನೆಯನ್ನೇ ಪುನಃ ಪರಿಷ್ಕರಿಸಲಾಯಿತು. ಕಾಂಕ್ರೀಟ್ ಬದಲು ಕಬ್ಬಿಣದ ಚಾನಲ್ಗಳನ್ನು ಬಳಸಿ ನಿರ್ಮಿಸಲು ನಿರ್ಣಯಿಸಿ, ಯೋಜನೆ ವೆಚ್ಚವನ್ನು 15.75 ಕೋಟಿ ರೂಗಳಿಂದ 28 ಕೋಟಿ ರೂ.ಗಳಿಗೆ ಹೆಚ್ಚಿಸಲಾಯಿತು. ಇಷ್ಟು ದಿನಗಳ ಕಾಲ ಸೇತುವೆ ಕಾಮಗಾರಿ ವಿಳಂಬವಾಗಲು ಸ್ಥಳೀಯ ಶಾಸಕರ ಇಚ್ಛಾಶಕ್ತಿ ಕೊರತೆಯೂ ಒಂದು ಕಾರಣವಾಗಿತ್ತು. ಆದರೂ, ಇದೀಗ ಕಾಮಗಾರಿ ಸಂಪೂರ್ಣ ಮುಗಿಯುವ ಹಂತದಲ್ಲಿದ್ದು, ಡಾಂಬರ್‌ ಹಾಕುವುದಷ್ಟೇ ಬಾಕಿ ಉಳಿದಿದೆ. ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಲೊಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

30 ಆಸ್ತಿಗಳ ತೆರವು ಪೆಂಡಿಂಗ್‌: ಮೇಲ್ಸೇತುವೆ ನಿರ್ಮಾಣಕ್ಕೆ ರಸ್ತೆಬದಿಯ ಎರಡೂ ಕಡೆ ಒಟ್ಟು 30 ಆಸ್ತಿಗಳು ಅಡ್ಡಲಾಗಿವೆ. ಈ ಮನೆಗಳನ್ನು ಇನ್ನೂ ತೆರವುಗೊಳಿಸಿಲ್ಲ. ಇದಕ್ಕೆ ಸಂಬಂಸಿದಂತೆ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ತೆರವುಗೊಳಿಸಲು ವಿಳಂಬವಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಮುಂದಿನ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 

•ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.