ಸ್ಥಗಿತಗೊಂಡಿದ್ದ ಕಲ್ಲುಗಣಿಗಾರಿಕೆಗೆ ಮತ್ತೆ ಜೀವ?


Team Udayavani, Jul 24, 2019, 3:00 AM IST

stagita

ದೇವನಹಳ್ಳಿ: ನಂದಿಬೆಟ್ಟದ ಮಾರ್ಗದಲ್ಲಿರುವ ಕಲ್ಲುಗಣಿಗಾರಿಕೆಗೆ ಮತ್ತೆ ಜೀವ ಬಂದಿದ್ದು, ಸ್ಥಳೀಯರಲ್ಲಿ ಮತ್ತೆ ಗಣಿಧೂಳು ಆವರಿಸುವ ಭೀತಿ ಶುರುವಾಗಿದೆ. ಕಲ್ಲುಗಣಿಗಾರಿಕೆ ಎದುರಿಗಿರುವ ಪ್ರಸ್ಟೀಜ್‌ ಗಾಲ್ಫ್ ರೆಸಾರ್ಟ್‌ ತಂಗಿದ್ದ ರಾಜಕಾರಣಿಗಳಿಂದಾಗಿ ಕಲ್ಲುಗಣಿಗಾರಿಕೆ ಸ್ಥಗಿತಗೊಂಡಿತ್ತು. ಆದರೆ ರಾಜಕಾರಣಿಗಳು ತಮ್ಮ ಕ್ಷೇತ್ರಗಳಿಗೆ ಮರಳುವುದರಿಂದ ಮತ್ತೆ ಕಲ್ಲುಗಣಿಗಾರಿಕೆ ಸಂಕಟ ಆರಂಭವಾಗುವ ಸಾಧ್ಯತೆಗಳಿವೆ.

ಗುಂಡಿ, ಕೊರಕಲು ಪ್ರದೇಶ ನಿರ್ಮಾಣ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅರಣ್ಯೀಕರಣ ಯೋಜನೆಗೆ ಗಣಿಗಾರಿಕೆಯಿಂದ ಕುತ್ತು ಬರುತ್ತಿದೆ ಎಂಬ ಆರೋಪ ಒಂದುಕಡೆ. ಇನ್ನೊಂದೆಡೆ ಕರ್ನಾಟಕ ಗೃಹ ಮಂಡಳಿ ಈ ಪ್ರದೇಶಕ್ಕೆ ಹೊಂದಿಕೊಂಡಂತೆ ಸ್ವಾಧೀನಪಡಿಸಿರುವ 305.33 ಎಕರೆ ಜಾಗದಲ್ಲಿಯೇ ಅಕ್ರಮ ಗಣಿಗಾರಿಕೆ ನಡೆದು ಆಳವಾದ ಗುಂಡಿ ಹಾಗೂ ಕೊರಕಲು ಪ್ರದೇಶ ನಿರ್ಮಾಣವಾಗಿದೆ. ಈ ಜಾಗವನ್ನು ಹರಾಜು ಹಾಕಲು ಗೃಹ ನಿರ್ಮಾಣ ಮಂಡಳಿ ಮುಂದಾಗಿತ್ತು. ಆದರೆ ಬೀಡ್‌ದಾರರು ಖರೀದಿಗೆ ಮುಂದೆ ಬರಲಿಲ್ಲ.ಹೀಗಾಗಿ ಸ್ಥಗಿತಗೊಂಡಿತ್ತು ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ಕಲ್ಲುಗಣಿಗಾರಿಕೆಗೆ ಪರವಾನಗಿ ಬೇಡ: 15-20 ವರ್ಷಗಳಿಂದ ಗಣಿ ಸುತ್ತಮುತ್ತ ಇರುವ ಪ್ರದೇಶದಲ್ಲಿ ಯಾವುದೇ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಫಸಲು ಕಂಡಿಲ್ಲ. ಹೆಚ್ಚು ಗಣಿ ಧೂಳಿನಿಂದ ಬೆಳೆ ನಷ್ಟ ಅನುಭವಿಸುವಂತಾಗಿದೆ. ಗಣಿಗಾರಿಕೆಯಿಂದ ಅಂತರ್ಜಲ ಕುಸಿತವಾಗಿದೆ. ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಪರವಾನಗಿ ನೀಡಬಾರದು. ಇದರಿಂದ ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುವಂತಾಗಿದೆ ಎಂದು ರೈತ ರಮೇಶ್‌ ಹೇಳುತ್ತಾರೆ. ದಿನ 24 ಗಂಟೆಯೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ತೈಲಗೆರೆ ವ್ಯಾಪ್ತಿಯಲ್ಲಿರುವ ಒಟ್ಟು ಸರ್ಕಾರಿ ಗೋಮಾಳ 211 ಎಕರೆ 16 ಗುಂಟೆ ಜಾಗಉಳಿಸಲು ಗ್ರಾಮಸ್ಥರು ರೈತರ ಹೋರಾಟ ನಡೆಸುತ್ತಿದ್ದಾರೆ.

ಅಧಿಕಾರಿಗಳ ಪತ್ರಕ್ಕೆ ಬೆಲೆಯಿಲ್ಲ: 2015ರ ಆ.20 ರಂದು ಕರ್ನಾಟಕ ಗೃಹ ಮಂಡಳಿ ಜಿಲ್ಲ ಕಾರ್ಯಪಾಲಕ ಇಂಜಿನಿಯರ್‌ ಜಿಲ್ಲಾಧಿಕಾರಿಗೆ ಪತ್ರ ಬರೆದು ಸೊಣ್ಣೇನಹಳ್ಳಿ, ಮೀಸಗಾನಹಳ್ಳಿ, ತೈಲಗೆರೆ, ಕೊಡಗುರ್ಕಿ ಗ್ರಾಮಗಳ ವ್ಯಾಪ್ತಿಯ ಜಮೀನಿನಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮತ್ತು ಮರಳು ದಂಧೆ ನಡೆಯಿತ್ತಿದೆ. ಜಲ್ಲಿ ಕ್ರಷರ್‌ನಿಂದ ವಸತಿ ಯೋಜನೆಗೆ ಧಕ್ಕೆಯಾಗಿದೆ. ಸದರಿ ಸರ್ವೆನಂಬರುಗಳ 200 ಮೀ. ವ್ಯಾಪ್ತಿ ಸುತ್ತವಲಯದಲ್ಲೂ ಇಂತಹ ಕಾರ್ಯಕ್ಕೆ ಅನುಮತಿ ನೀಡಲಾಗಿದೆ. ಹಲವು ಬಾರಿ ರದ್ದುಪಡಿಸುವಂತೆ ಕೋರಿದ್ದರೂ ಅಧಿಕಾರಿಗಳ ಪತ್ರಕ್ಕೂ ಬೆಲೆ ಕೊಡದ ಅಂದಿನ ಜಿಲ್ಲಾಧಿಕಾರಿ ವಾರ್ಷಿಕವಾಗಿ ನವೀಕರಣ ಮಾಡುತ್ತಲೇ ಇದ್ದರು ಎಂದು ದಾಖಲೆ ಸಹಿತ ಆರ್‌.ಟಿ.ಐ. ಕಾರ್ಯಕರ್ತರೊಬ್ಬರು ಹೇಳುತ್ತಾರೆ.

ಆರೋಗ್ಯದ ಮೇಲೆ ದುಷ್ಪರಿಣಾಮ: ಗಣಿಗಾರಿಕೆಯಿಂದ ಅದರ ಶಬ್ಧದಿಂದ ಮನೆಗಳಲ್ಲಿ ನಡುಕ, ಒಂದು ಕಡೆ ಬೆಳೆ ನಷ್ಟ ಇದರ ಸಮೀಪದಲ್ಲಿಯೇ ಇರುವ ಸೊಣ್ಣೇನಹಳ್ಳಿಯ ಶಾಲೆ ಮಕ್ಕಳಿಗೆ ಧೂಳಿನಿಂದ ಬಂದಂತ ಕಾಯಿಲೆಗಳ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಹ ಪತ್ರ ನೀಡಿತ್ತು. ಆ ಭಾಗದ ಜನ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಶಬ್ದಗಳು ಹೆಚ್ಚಾಗಿರುವುದರಿಂದ ಜಾನುವಾರುಗಳು ಸಾವನ್ನಪ್ಪಿರುವ ಉದಾಹರಣೆಗಳು ಸಹ ಇವೆ.

ಮತ್ತೇ ಆರಂಭವಾಗುವ ಭೀತಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಾ ಪ್ರಾಧಿಕಾರದ ಅರಣ್ಯೀಕರಣ ಯೋಜನೆಯಲ್ಲಿ ತೈಲಗೆರೆ, ಮೀಸಗಾನಹಳ್ಳಿ, ಸೊಣ್ಣೇನಹಳ್ಳಿ, ಕೊಡಗುರ್ಕಿ ಗ್ರಾಮದ ಕೆಲ ಪ್ರದೇಶಗಳಲ್ಲಿ ಕಲ್ಲುಗಣಿಗಾರಿಕೆಗೆ ಅವಕಾಶ ನೀಡಲಾಗಿತ್ತು. ನಂದಿಬೆಟ್ಟದ ಬುಡದಿಂದ ಪ್ರಾರಂಭವಾಗುವ ಅರ್ಕಾವತಿ ಕ್ಯಾಚ್‌ಮೆಂಟ್‌ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಈ ಗಣಿಗಾರಿಕೆ ವ್ಯಾಪ್ತಿ 2 ಕಿ.ಮೀ. ಕನಿಷ್ಠ ಮಿತಿಯಲ್ಲಿ ಒಟ್ಟು 27 ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಗಣಿಗಾರಿಕೆಗೆ ಅವಕಾಶ ನೀಡುವಂತಿಲ್ಲ ಎಂದು 2013 ಸೆ 24ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.

ಅನುಮಾನಗಳು: 2016ರಲ್ಲಿ ಕೆಲವು ಪ್ರಭಾವಿಗಳಿಗೆ ಮಣಿದು ಅಧಿಕಾರಿಗಳು ಗಣಿಗಾರಿಕೆಗೆ ಅನುಮತಿ ನೀಡಿದ್ದರು. ಆದರೆ ಶಾಸಕರು ರೆಸಾರ್ಟ್‌ನಲ್ಲಿ ತಂಗಲು ಬಂದ ತಕ್ಷಣವೇ ಕಲ್ಲುಗಣಿಗಾರಿಕೆ ಸ್ಥಗಿತಗೊಳಿಸಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಚಿಕ್ಕೇಗೌಡ. ಶಾಸಕರು ರೆಸಾರ್ಟ್‌ನಲ್ಲಿ ತಂಗಿದ್ದ ಸಮಯದಲ್ಲಿ, ಗಣಿಸ್ಫೋಟ, ಶಬ್ದ, ಧೂಳು, ಲಾರಿಗಳ ಸಂಚಾರ ಭರಾಟೆ, 15 ದಿನಗಳಿಂದ ಸ್ಥಗಿತಗೊಂಡಿತ್ತು.ಆದರೆ ಈಗ ಮತ್ತೆ ಪ್ರಾರಂಭವಾಗುವ ಸಾಧ್ಯ ತಳ್ಳಿಹಾಕುವಂತಿಲ್ಲ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಿದಲೂರು ರಮೇಶ್‌.

ಗಣಿಗಾರಿಕೆಯಿಂದ ಸಾಕಷ್ಟು ಜನ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಶಬ್ದ ಮತ್ತು ಗಣಿಗಾರಿಕೆ ಧೂಳು ಬೆಳೆಗಳ ಮೇಲೆ ಕೂರುವುದರಿಂದ ರೈತರು ಎಷ್ಟೆ ಬೆಳೆ ಬೆಳೆದರೂ ಸಹ ನಷ್ಟ ಅನುಭವಿಸುವಂತಾಗಿದೆ. ಕೂಡಲೇ ಗಣಿಗಾರಿಕೆಗೆ ನೀಡಿರುವ ಪರವಾನಗಿ ರದ್ದುಗೊಳಿಸಬೇಕು.
-ನಾಗರಾಜ್‌ ಬಿಜ್ಜವಾರ, ಪ್ರಜಾ ವಿಮೋಚನೆ ಬಹುಜನ ಸಮಿತಿ ಸಂಸ್ಥಾಪಕ ಅಧ್ಯಕ್ಷ

ತೈಲಗೆರೆ ವ್ಯಾಪ್ತಿಯಲ್ಲಿ ಕಲ್ಲುಗಣಿಗಾರಿಕೆಗೆ 12 ಮಾಲಿಕರಿಗೆ ಪರವಾನಗಿಯಿದೆ. ಸರ್ಕಾರ 2016ನೇ ಸಾಲಿನಿಂದ ಅನುಮತಿ ನೀಡಿದೆ. ರೆಸಾರ್ಟ್‌ ರಾಜಕಾರಣಕ್ಕೂ ಗಣಿಕಾಮಗಾರಿ ಸ್ಥಗಿತಗೊಳ್ಳುವುದಕ್ಕೂ ಬೇರೆ ಅರ್ಥ ಕಲ್ಪಿಸುವುದು ಅಗತ್ಯವಿಲ್ಲ. ಈ ಹಿಂದೆ ಏನು ನಡೆದಿದೆ ನಮಗೆ ಗೊತ್ತಿಲ್ಲ.
-ಸುರೇಶ್‌ ರಾಮಮೂರ್ತಿ, ಜಿಲ್ಲಾ ಭೂ ಮತ್ತು ಗಣಿ ಉಪನಿರ್ದೇಶಕ

* ಎಸ್‌. ಮಹೇಶ್‌

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.