ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ ಹೇಳಿದ್ದ ಮಾತು ನಿಜವಾಯಿತೇ?


Team Udayavani, Jul 24, 2019, 3:06 AM IST

dharmnastala

ಬೆಂಗಳೂರು: ಬಿಜೆಪಿಯನ್ನು ದೂರ ಇಡುವ ಜಾತ್ಯತೀತ ನಿಲುವಿನ “ಅಸ್ತ್ರ’ ಪ್ರಯೋಗದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಹದಿನಾಲ್ಕು ತಿಂಗಳಲ್ಲಿ ಪತನಗೊಳ್ಳುವ ಮೂಲಕ ಮೈತ್ರಿ ಸರ್ಕಾರ ರಾಜ್ಯದಲ್ಲಿ ಯಶಸ್ವಿಯಾ ಗುವುದಿಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. ಹದಿನೈದು ವರ್ಷಗಳಲ್ಲಿ ಮೂರು ಸಮ್ಮಿಶ್ರ ಸರ್ಕಾರಗಳು ಅಲ್ಪಾಯುಷ್ಯದೊಂದಿಗೆ ಪತನಗೊಂ ಡಂತಾಗಿದ್ದು, ರಾಜ್ಯ ರಾಜಕಾರಣದ ದಿಗ್ಗಜರಾದ ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಂತಹ ದಿಗ್ಗಜರಿದ್ದರೂ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಇದು ಹೆಚ್ಚು ದಿನ ಬಾಳುವುದಿಲ್ಲ ಎಂಬ ವಿಶ್ಲೇಷಣೆಗಳು ಇದ್ದವಾದರೂ ತಳಹದಿ ಗಟ್ಟಿಯಾಗಿದ್ದರಿಂದ ಕುತೂಹಲವಂತೂ ಇದ್ದೇ ಇತ್ತು. ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್‌ಗಾಂಧಿಯವರು ದೇಶದ ರಾಜಕಾರಣದ ಭವಿಷ್ಯದ ಬಗ್ಗೆ ಯೋಚಿಸಿ ತೀರ್ಮಾನ ಕೈಗೊಂಡಿದ್ದರಿಂದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು. ಆಗ ಬಿಎಸ್‌ಪಿ, ಎಸ್‌ಪಿ, ಆರ್‌ಜೆಡಿ, ಟಿಡಿಪಿ, ಎಎಪಿ ಸೇರಿ ಪ್ರಾದೇಶಿಕ ಪಕ್ಷಗಳ ನಾಯಕರೆಲ್ಲರೂ ಒಂದೇ ವೇದಿಕೆಯಡಿ ಬಂದು ಒಗ್ಗಟ್ಟು ಪ್ರದರ್ಶಿಸಿದ್ದರಿಂದ ರಾಜ್ಯದಲ್ಲಿನ ರಾಜಕೀಯ ಧ್ರುವೀಕರಣ ದೇಶದ ಮಟ್ಟದಲ್ಲಾಗುವ ಆಶಾಭಾವನೆ ಮೂಡಿಸಿತ್ತು.

ಧರ್ಮಸ್ಥಳದ “ಬಾಂಬ್‌’: ಆದರೆ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದಾಗ ಲೋಕಸಭೆ ಚುನಾವಣೆವರೆಗೆ ಮಾತ್ರ ಈ ಸರ್ಕಾರ ಎಂಬ “ಬಾಂಬ್‌’ ಸಿಡಿಸಿದ್ದರು. ತಮ್ಮನ್ನು ಭೇಟಿ ಮಾಡಲು ಬಂದ ಬೆಂಬಲಿಗರ ಜತೆ ಸಹಜವಾಗಿ ರಾಜಕೀಯದ ವಿಚಾರಗಳನ್ನು ಪ್ರಸ್ತಾಪ ಮಾಡುವಾಗ ನೋಡೋಣ ಪಾರ್ಲಿಮೆಂಟ್‌ ಎಲೆಕ್ಷನ್‌ ನಂತರ ಏನಾಗುತ್ತದೆಯೋ ಎಂದು ಹೇಳಿದ್ದರು. ಆಗಲೇ, ಈ ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆವರೆಗೆ ಮಾತ್ರ ಎಂಬಂತೆಯೇ ಬಿಂಬಿತವಾಗುತ್ತಾ ಹೋಯಿತು.

ಈ ನಡುವೆ, ಆಗ್ಗಾಗ್ಗೆ ಸಂಪುಟ ಸ್ಥಾನಮಾನ, ನಿಗಮ-ಮಂಡಳಿ ನೇಮಕ, ವರ್ಗಾವಣೆ ವಿಚಾರಗಳಲ್ಲಿ ಉಂಟಾದ ಸಂಘರ್ಷಗಳಿಂದ ಸರ್ಕಾರ ಹೆಚ್ಚು ದಿನ ಉಳಿಯುವುದು ಕಷ್ಟ ಎಂಬ ಭಾವನೆಯೂ ಅಧಿಕಾರಿ ವರ್ಗದ ಮನಸ್ಸಿನಲ್ಲಿ ಬಂದಿತ್ತು. ಇದರ ಮಧ್ಯೆಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ಚುನಾವಣೆ ನಡೆದು ದೋಸ್ತಿ ಹೊಂದಾಣಿಕೆ ಯಶಸ್ವಿಯೂ ಆಗಿ ಇನ್ನೇನು ದೋಸ್ತಿ ಗಟ್ಟಿ ಎಂಬ ಸಂತೋಷ ಉಂಟಾಗಿತ್ತು.

ಲೋಕಸಭೆ ಚುನಾ ವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ, ಸೀಟು ಹಂಚಿಕೆಯ ಕಸರತ್ತುಗಳು ಪ್ರಾರಂಭವಾದ ನಂತರ ತಳಮಟ್ಟದಲ್ಲಿ ಎರಡೂ ಪಕ್ಷಗಳಲ್ಲಿ ಕಾರ್ಯಕರ್ತರು, ಮುಖಂಡರ ವಿರೋಧ, ಟಿಕೆಟ್‌ ಘೋಷಣೆಯಾದ ನಂತರ ಕೈ ಕೊಡುವ ವಿದ್ಯಮಾನಗಳು ಹಾಗೂ ಮತದಾನದ ನಂತರದ ಫ‌ಲಿತಾಂಶ ನಿಜಕ್ಕೂ ಎರಡೂ ಪಕ್ಷದ ಬುಡ ಅಲ್ಲಾಡಿಸಿದವು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಲಿಲ್ಲ.

ವೇದಿಕೆಯಲ್ಲಿ ಬಹಿರಂಗವಾಗಿ ಏನೇ ಭಾಷಣ ಮಾಡಿದರೂ ಆಂತರಿಕವಾಗಿ ಬೇರೆಯದೇ ಲೆಕ್ಕಾಚಾರದಡಿ ತಮಗಾಗದವರ ಸೋಲಿಗೆ ವೈಯಕ್ತಿಕ ಅಜೆಂಡಾದಡಿ ತಮ್ಮ, ತಮ್ಮ ಕೈಲಾದ “ಕಾಣಿಕೆ’ ಸಲ್ಲಿಸಿದರು ಎಂಬುದು ಫ‌ಲಿತಾಂಶ ಹೊರ ಬಿದ್ದ ನಂತರ ಒಂದೊಂದೇ ಬಹಿರಂಗವಾಗುತ್ತಾ ಹೋಯಿತು. ಕಾಂಗ್ರೆಸ್‌ನ ಕೆಲವು ನಾಯಕರಂತೂ ಮೈತ್ರಿ ಹೆಚ್ಚು ದಿನ ಉಳಿದರೆ ಪಕ್ಷಕ್ಕೆ ಭವಿಷ್ಯವಿಲ್ಲ ಎಂಬ ಸಂಗತಿಯನ್ನು ಹೊರ ಹಾಕಿದರು. ಜತೆಗೆ, ಬಹಿರಂಗವಾಗಿಯೇ ದೇವೇಗೌಡರ ಕುಟುಂಬ, ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸರ್ಕಾರದ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದರು.

ಅತೃಪ್ತರ ಆಟ: ಇದರ ಮಧ್ಯೆಯೇ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಸಚಿವ ಸ್ಥಾನ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಸಂಸದೀಯ ಕಾರ್ಯದರ್ಶಿ ಸ್ಥಾನ ಸೇರಿ ಎಲ್ಲ ಹುದ್ದೆ ಹೊಂದಿದ್ದರೂ ಒಂದು ಅತೃಪ್ತರ ಗುಂಪು ಸದಾ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಲೇ ಇತ್ತು. ಇದರ ಮಾಹಿತಿ ಬದಲಿ ಸರ್ಕಾರದ ರಚನೆಯ ಪ್ರಯತ್ನದಲ್ಲಿರುವ ಬಿಜೆಪಿಗೆ ಗೊತ್ತಿತ್ತು. ಅತೃಪ್ತರ ಬೇಡಿಕೆಗಳ ಮಾಹಿತಿ ಪಡೆದ ಬಿಜೆಪಿ, ಸಮಯ ಕಾದು “ರಂಗಪ್ರವೇಶ’ ಮಾಡಿ ಹದಿನೈದು ಶಾಸಕರನ್ನು ಒಟ್ಟುಗೂಡಿಸುವಲ್ಲಿ ಯಶಸ್ವಿಯಾಯಿತು.

ಇದರೊಂದಿಗೆ ಸಮ್ಮಿಶ್ರ ಸರ್ಕಾರ ಪತನದ ಹಾದಿ ಹಿಡಿಯಿತು. ಇದರೊಂದಿಗೆ 2004ರ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ 20 ತಿಂಗಳು, 2006ರ ಬಿಜೆಪಿ-ಜೆಡಿಎಸ್‌ ಸರ್ಕಾರ 20 ತಿಂಗಳು, 2018 ರ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಹದಿನಾಲ್ಕು ತಿಂಗಳು ಮಾತ್ರ ಆಯುಷ್ಯ ಹೊಂದಿದಂತಾಗಿದೆ.

ಕೌಂಟ್‌ಡೌನ್‌ ಆರಂಭ ಯಾವಾಗ?: ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾದ ನಂತರ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮಂಡ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖೀಲ್‌ ಕುಮಾರಸ್ವಾಮಿ, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಕೋಲಾರದಲ್ಲಿ ಕೆ.ಎಚ್‌.ಮುನಿಯಪ್ಪ ಹಾಗೂ ಚಿಕ್ಕಬಳ್ಳಾಪುರದಲ್ಲಿ ವೀರಪ್ಪ ಮೊಯ್ಲಿ ಸೇರಿದಂತೆ ಕಾಂಗ್ರೆಸ್‌ನ ಘಟಾನುಘಟಿ ನಾಯಕರೇ ಮೈತ್ರಿ ಅಭ್ಯರ್ಥಿಗಳಾಗಿ ಸೋಲು ಅನುಭವಿಸಿದ್ದರು. ಇಲ್ಲಿಂದ ಸಮ್ಮಿಶ್ರ ಸರ್ಕಾರದ ಕೌಂಟ್‌ ಡೌನ್‌ ಆರಂಭವಾಯಿತು ಎಂದೇ ಹೇಳಬಹುದು.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.