ಕುಂದಾಪುರ ವಿವಿಧೆಡೆ ಭಾರೀ ಮಳೆ : ಜಲಾವೃತ
Team Udayavani, Jul 24, 2019, 5:04 AM IST
ತೆಕ್ಕಟ್ಟೆ: ನಿರಂತರವಾಗಿ ಸುರಿದ ಭಾರೀ ಮಳೆಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ತೋಟದಬೆಟ್ಟು,ಕುಂಭಾಸಿ ಕೊರವಡಿ ಹೊಳೆಕಟ್ಟು, ಬೇಳೂರು, ಮೊಗೆಬೆಟ್ಟು, ಮಲ್ಯಾಡಿ, ಉಳ್ತೂರು, ಹೆಸ್ಕಾತ್ತೂರು, ಕೊರ್ಗಿ ಗ್ರಾಮೀಣ ಭಾಗದ ತಗ್ಗು ಪ್ರದೇಶದಲ್ಲಿ ಮಳೆಯ ನೀರಿನ ಪ್ರಮಾಣ ಏರಿಕೆ ಕಂಡಿದ್ದು, ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯ ಮಲ್ಯಾಡಿ ದಲಿತ ಕಾಲನಿಯ ದಾಸ ಹಾಗೂ ಕೃಷ್ಣ ಎನ್ನುವವರ ಮನೆ ಸುತ್ತಲೂ ನೀರು ಆವರಿಸಿದೆ.
ಕೆದೂರು ಗ್ರಾ.ಪಂ. ವ್ಯಾಪ್ತಿಯ ಉಳ್ತೂರು, ಹಲ್ತೂರು ಭಾಗಗಳಲ್ಲಿ ನೂರಾರು ಎಕರೆ ಕೃಷಿಭೂಮಿಗಳಿಗೆ ನೀರು ಆವರಿಸಿದೆ. ಬೇಳೂರು ಗ್ರಾ.ಪಂ. ವ್ಯಾಪ್ತಿಯ ಬೇಳೂರು ದೇವಸ್ಥಾನ ಬೆಟ್ಟು, ಬಡಾಬೆಟ್ಟು ಹಾಗೂ ದೇಲಟ್ಟು ಭಾಗದಲ್ಲಿ ಇತ್ತೀಚೆಗಷ್ಟೇ ನಾಟಿ ಕಾರ್ಯ ಪೂರ್ಣಗೊಂಡಿರುವ ನೂರಾರು ಎಕರೆ ಕೃಷಿ ಭೂಮಿಗಳು ಸಂಪೂರ್ಣ ಜಲಾವೃತಗೊಂಡಿದೆ ಎಂದು ಹಿರಿಯ ಕೃಷಿಕ ಮಂಜ ಮಡಿವಾಳ ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್