ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜಿಪಂ ಅಧ್ಯಕ್ಷ ಗರಂ

ಸುಗಮ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ತಾಕೀತು ,ನಗರ ಜಿಪಂ ಅಧ್ಯಕ್ಷ ಮುನಿರಾಜು ಅಸಮಾಧಾನ

Team Udayavani, Jul 24, 2019, 9:52 AM IST

bng-tdy-3

ಜಿಲ್ಲಾಪಂಚಾಯಿತಿ ಕಚೇರಿ.

ಬೆಂಗಳೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯಾವುದೇ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಬೆಂಗಳೂರು ನಗರ ಜಿಪಂ ಸ್ಥಾಯಿ ಸಮಿತಿ ಸಭೆಯಲ್ಲಿ ಮಂಗಳವಾರ ಕೇಳಿ ಬಂತು. ನಿರ್ಲಕ್ಷ್ಯ ವಹಿಸಿದ ಇಲಾಖಾವಾರು ಅಧಿಕಾರಿಗಳನ್ನು ಸಭೆಯಲ್ಲಿ ಸ್ಥಾಯಿ ಸಮಿತಿಯ ಸದಸ್ಯರುಗಳು ತರಾಟೆ ತೆಗೆದುಕೊಂಡ ಪ್ರಸಂಗ ಕೂಡ ನಡೆಯಿತು. ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ, ಸಹಕಾರ, ಆರೋಗ್ಯ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡೆ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟೈಲರಿಂಗ್‌ ತರಬೇತಿ ಕೇಂದ್ರಗಳ ಬಗ್ಗೆ ನಿರ್ಲಕ್ಷ್ಯ: ಈ ಹಿಂದೆ ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಬಡ ಹೆಣ್ಣು ಮಕ್ಕಳು ಸ್ವ ಉದ್ಯೋಗ ಕೈಗೊಳ್ಳಲಿ ಎಂಬ ಕಾರಣಕ್ಕಾಗಿ ಜಿಪಂ ಹಲವು ಕಡೆಗಳಲ್ಲಿ ‘ಟೈಲರಿಂಗ್‌ ಕೇಂದ್ರಗಳನ್ನು ತೆರೆದಿದೆ. ಆದರೆ ಕೆಲವು ಕಡೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತರಬೇತಿ ಶಿಕ್ಷಕರೆ ಇಲ್ಲ ಎಂದು ಬೆಂಗಳೂರು ನಗರ ಜಿಪಂ ಅಧ್ಯಕ್ಷ ಮುನಿರಾಜು ದೂರಿದರು.

ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಅನೇಕಲ್ ಸೇರಿದಂತೆ ವಿವಿಧ ಕಡೆಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಅಧಿಕಾರಿಗಳು ಇನ್ನೂ ಭೇಟಿ ನೀಡಿಲ್ಲ. ಹೀಗಾದರೆ ಬಡಮಕ್ಕಳ ಕಲ್ಯಾಣ ಹೇಗೆ ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇಂತಹ ಪ್ರಸಂಗಗಳು ಮುಂದುವರಿದರೆ ಸಹಿಸಿಕೊಳ್ಳಲಾಗದು ಎಂದು ಎಚ್ಚರಿಸಿದರು.

ವಯಸ್ಕರ ಶಿಕ್ಷಣ ಅಗತ್ಯವಿದೆಯಾ?: ಕೆಲವು ಅಧಿಕಾರಿಗಳು ವಯಸ್ಕರ ಶಿಕ್ಷಣ ವಿಚಾರದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಹೇಳುತ್ತಾರೆ. ಬೆಂಗಳೂರು ನಗರ ಜಿಲ್ಲೆಗೆ ವಯಸ್ಕರ ಶಿಕ್ಷಣ ಅಗತ್ಯವಿದೆಯಾ ಎಂದು ಪ್ರಶ್ನಿಸಿದ ಅವರು, ಹಾಗಾದರೆ ಮೂರು ವರ್ಷದಲ್ಲಿ ಎಷ್ಟು ವಯಸ್ಕರರಿಗೆ ಶಿಕ್ಷಣ ನೀಡಲಾಗಿದೆ ಎಂಬುವುದನ್ನು ಅಧಿಕಾರಿಗಳು ಅಂಕೆ-ಸಂಖ್ಯೆ ಸಹಿತ ವರದಿ ನೀಡುವಂತೆ ಸೂಚಿಸಿದರು.

ಒಳಾಂಗಣ ಕ್ರೀಡಾಂಗಣ ನಿರ್ಮಿಸಿ: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಸರಿಗೆ ಮಾತ್ರ ಇದೆ. ಆ ಇಲಾಖೆಯಿಂದ ಯಾವುದೇ ಕ್ರೀಡಾಂಗಣದ ಅಭಿವೃದ್ಧಿಯಾಗಿರುವ ಬಗ್ಗೆ ಮಾಹಿತಿಯಿಲ್ಲ. ನಗರ ಜಿಪಂ ವ್ಯಾಪ್ತಿಯಲ್ಲಿ ಕ್ರೀಡಾಪಟುಗಳಿಗೆ ಅನುಕೂಲವಾಗಲು ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಿಸಿ ಕೊಡಿ ಎಂದು ಹಿರಿಯ ಅಧಿಕಾರಿಗಳನ್ನು ಕೇಳಿದರೆ 8 ಎಕರೆ ಜಮೀನು ನೀಡಿ, ಅದನ್ನು ಇಲಾಖೆಗೆ ಒಪ್ಪಿಸಿ ಎಂಬ ಉತ್ತರ ಕೇಳಿ ಬಂದಿದೆ. ಅಷ್ಟೊಂದು ಜಾಗವನ್ನು ನಗರ ವ್ಯಾಪ್ತಿಯಲ್ಲಿ ನೀಡಲು ಸಾಧ್ಯವೇ ಎಂದು ಅಧ್ಯಕ್ಷ ಮುನಿರಾಜು ಹೇಳಿದರು.

ಇದೇ ವೇಳೆ ಮಾತನಾಡಿದ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಜಿಲ್ಲಾಡಳಿತಕ್ಕೆ ಅಷ್ಟೊಂದು ಎಕರೆ ಭೂಮಿ ನೀಡಲಾಗದಿದ್ದರೆ ಒಳಾಂಗಣ ಕ್ರೀಡಾಂಗಣಗಳನ್ನು ನಿರ್ಮಿಸಲು ಭೂಮಿ ನೀಡಲಿ ಎಂದು ಮನವಿ ಮಾಡಿದರು.

ನಗರ ಸಭೆ ಸದಸ್ಯ ನಾಗೇಶ್‌, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ- ಕಾಲೇಜುಗಳಲ್ಲಿ ರಂಗಮಂದಿರಗಳ ಅಗತ್ಯವಿದೆ. ರಂಗಮಂದಿರ ನಿರ್ಮಾಣ ಕಾರ್ಯಕ್ಕೆ ಅನುದಾನ ನೀಡಬೇಕು ಎಂದು ಹೇಳಿದರು. ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ತೆಂಗಿನ ಗಿಡ ವಿತರಿಸಲು ಸೂಚನೆ ನೀಡಿದೆ. ಆದರೆ ಆ ಕಾರ್ಯ ನಡೆದಿಲ್ಲ. ಜೇನುಸಾಕಾಣಿಕೆ ಬಗ್ಗೆಯೂ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು. ಬೆಂಗಳೂರು ನಗರ ಜಿಪಂನ ಯೋಜನಾ ನಿರ್ದೇಶಕ ಮುನಿರಾಜು, ನಗರ ಜಿಪಂ ಉಪಕಾರ್ಯದರ್ಶಿ ಡಾ.ಸಿದ್ಧರಾಮಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.