ಎಲ್ಲ ಬೀದಿ ವ್ಯಾಪಾರಿಗಳಿಗಿಲ್ಲ ಬಡವರ ಬಂಧು ಲಾಭ!

ಮರುಪಾವತಿಯಾಗದ ಸಾಲ •ಪಾಲಿಕೆ, ನಗರಸಭೆ ವ್ಯಾಪ್ತಿಯಲ್ಲಷ್ಟೇ ಸಾಲ ವಿತರಣೆ

Team Udayavani, Jul 24, 2019, 10:23 AM IST

24-July-5

ರಾಜ್ಯ ಸರ್ಕಾರದ ಆದೇಶ ಪ್ರತಿ.

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
‘ಬಡವರ ಬಂಧು’ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ನೀಡಲಾಗಿದ್ದ ಸಾಲ ಸಮರ್ಪಕವಾಗಿ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಯೋಜನೆಯನ್ನೇ ಮರು ಪರಿಷ್ಕರಿಸಲಾಗಿದ್ದು, ಎರಡನೇ ಹಂತದಲ್ಲಿ ಕೇವಲ ನಗರಸಭೆ, ಮಹಾನಗರ ಪಾಲಿಕೆ, ಬೃಹತ್‌ ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗಷ್ಟೇ ಯೋಜನೆಯ ಲಾಭ ಸಿಗಲಿದೆ.

ಬೀದಿ ಬದಿಯಲ್ಲಿ ಹೂವು, ಹಣ್ಣು ಸೇರಿ ಇನ್ನಿತರೆ ವಸ್ತು ಮಾರಾಟ ಮಾಡಿ ಜೀವನ ಸಾಗಿಸುವ ವ್ಯಾಪಾರಿಗಳ ಆರ್ಥಿಕಾಭಿವೃದ್ಧಿಗಾಗಿ ಜಾರಿಗೆ ಬಂದಿದ್ದ ‘ಬಡವರ ಬಂಧು’ ಯೋಜನೆಯನ್ನು ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಗಳಿಗೂ ವಿಸ್ತರಿಸಲಾಗಿತ್ತು. ಈ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ಲಭಿಸುತ್ತಿತ್ತು. ಇದರಿಂದ ಖಾಸಗಿ ಲೇವಾದೇವಿಗಾರರ ಬಡ್ಡಿ, ಚಕ್ರಬಡ್ಡಿ, ಮೀಟರ್‌ ಬಡ್ಡಿಗಳಿಂದ ವ್ಯಾಪಾರಿಗಳು ಮುಕ್ತರಾಗುತ್ತಿದ್ದರು. ಆದರೆ, ಮೊದಲ ಮೂರು ತಿಂಗಳ ಅವಧಿಗೆ ಸ್ಥಳೀಯ ಡಿಸಿಸಿ, ಬಳ್ಳಾರಿ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ಕೊಡಿಸಲಾಗಿದ್ದ ಸಾಲದಲ್ಲಿ ಶೇ.60 ರಷ್ಟು ಮರುಪಾವತಿಯಾಗಿಲ್ಲ. ಇದು ಡಿಸಿಸಿ, ಅರ್ಬನ್‌ ಬ್ಯಾಂಕ್‌ಗಳ ನಿರ್ದೇಶಕರನ್ನು ಚಿಂತೆಗೀಡು ಮಾಡಿತ್ತು. ಈ ಹಿನ್ನೆಲೆಯಲ್ಲಿ ಯೋಜನೆಯನ್ನೇ ಮರುಪರಿಷ್ಕರಿಸಲಾಗಿದ್ದು, ಕೇವಲ ಪಾಲಿಕೆ, ಬೃಹತ್‌ ಮಹಾನಗರ ಪಾಲಿಕೆ, ನಗರಸಭೆಗಳಿಗಷ್ಟೇ ಸೀಮಿತಗೊಳಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಬಡವರ ಬಂಧು ಯೋಜನೆಯಡಿ ಮೊದಲನೇ ಹಂತದ ಸಾಲವನ್ನು ಜಿಲ್ಲೆಯ ಬಳ್ಳಾರಿ ಮಹಾನಗರದಲ್ಲಿ 948, ಹೊಸಪೇಟೆ ನಗರಸಭೆಯಲ್ಲಿ 636, ಸಂಡೂರು ಪುರಸಭೆ 103, ಸಿರುಗುಪ್ಪ ನಗರಸಭೆ 171, ಕೊಟ್ಟೂರು ಪಪಂ 154, ಹಡಗಲಿ ಪುರಸಭೆ 167, ಹ.ಬೊ.ಹಳ್ಳಿ ಪಪಂ 241, ಕಂಪ್ಲಿ ಪುರಸಭೆ 210, ಕೂಡ್ಲಿಗಿ ಪುರಸಭೆ 148, ಕುರುಗೋಡು ಪಪಂ 90 ಸೇರಿ ಜಿಲ್ಲೆಯಲ್ಲಿ ಒಟ್ಟು 2868 ಬೀದಿ ಬದಿ ವ್ಯಾಪಾರಿಗಳಿಗೆ ಸಹಕಾರಿ ಇಲಾಖೆ ನೇತೃತ್ವದಲ್ಲಿ ಬಿಡಿಸಿ, ಬಳ್ಳಾರಿ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಒಟ್ಟೂ 82,96,500 ರೂ.ಗಳ ಸಾಲ ವಿತರಿಸಲಾಗಿತ್ತು. ಆದರೆ, ಇದರಲ್ಲಿ ಕೇವಲ ಶೇ. 40 ರಷ್ಟು ಮಾತ್ರ ವಸೂಲಿಯಾಗಿದ್ದು, ಶೇ. 60ರಷ್ಟು ಮರುಪಾವತಿಯಾಗಿಲ್ಲ. ಹೀಗಾಗಿ ಸಹಕಾರ ಇಲಾಖೆ ಯೋಜನೆಯಲ್ಲಿ ಕೆಲ ಬದಲಾವಣೆ ಮಾಡಿದೆ.

ಈಗಾಗಲೇ ಪಾಲಿಕೆ, ನಗರಸಭೆ ವ್ಯಾಪ್ತಿಯಲ್ಲಿ ಸಾಲ ಪಡೆದ ವ್ಯಾಪಾರಿಗಳಲ್ಲಿ ಸಮರ್ಪಕವಾಗಿ ಮರುಪಾವತಿ ಮಾಡಿದವರನ್ನಷ್ಟೇ ಎರಡನೇ ಹಂತದಲ್ಲೂ ಪರಿಗಣಿಸಲಾಗುವುದು. ಅಲ್ಲದೆ ಸಾಲದ ಮೊತ್ತವನ್ನೂ ಹೆಚ್ಚಿಸಲಾಗುತ್ತದೆ ಎಂದು ಸಹಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾಲ ನೀಡಬೇಕಾದ ಗುರಿ: ಬಡವರ ಬಂಧು ಯೋಜನೆಯನ್ನು ಪರಿಷ್ಕರಿಸಲಾಗಿದ್ದು, ನಿರ್ದಿಷ್ಟ ಪ್ರದೇಶಗಳಿಗೆ ಗುರಿ ನಿಗದಿಪಡಿಸಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಸಾವಿರ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3 ಸಾವಿರ, ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 1 ಸಾವಿರ ವ್ಯಾಪಾರಿಗಳಿಗೆ ಸಾಲ ನೀಡಲು ಸೂಚಿಸಲಾಗಿದೆ.

ವ್ಯಾಪಾರಿಗಳಿಗಿಲ್ಲ ಪರವಾನಗಿ: ಬಹುತೇಕ ಬೀದಿಬದಿ ವ್ಯಾಪಾರಿಗಳ ಬಳಿ ಸ್ಥಳೀಯ ಸಂಸ್ಥೆಯ ಪರವಾನಗಿಯೇ ಇಲ್ಲ. ಇದು ‘ಬಡವರ ಬಂಧು’ ಯೋಜನೆಯಡಿ ಸಾಲ ಪಡೆಯಲು ತೊಡಕಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿನ ಪಾದಚಾರಿ ರಸ್ತೆಯನ್ನೇ ಆವರಿಸಿಕೊಂಡು ಹೂವು, ಹಣ್ಣು, ತಳ್ಳುಬಂಡಿಗಳನ್ನಿಟ್ಟು ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಸಾವಿರಾರು ಸಂಖ್ಯೆಯಲ್ಲಿ ಕಂಡುಬಂದರೂ, ಪಾಲಿಕೆ, ನಗರಸಭೆಯಲ್ಲಿ ಪರವಾನಗಿ ಪಡೆದಿರುವವರ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟು ಮಾತ್ರ. ಇವರಿಗೆ ಪರವಾನಗಿ ನೀಡಲು ಸ್ಥಳೀಯ ಸಂಸ್ಥೆಯಲ್ಲಿ ತಾಂತ್ರಿಕ ಸಮಸ್ಯೆಯೂ ಇದೆ. ಇವರಿಗೆ ಪರವಾನಗಿ ನೀಡಿದರೆ, ಅವರು ವ್ಯಾಪಾರ ಮಾಡಲು ಸ್ಥಳಾವಕಾಶ ಕಲ್ಪಿಸುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಈ ಸ್ಥಳಾವಕಾಶದ ಸಮಸ್ಯೆಯಿಂದಾಗಿ ಸ್ಥಳೀಯ ಸಂಸ್ಥೆಗಳು ಸಹ ಬೀದಿಬದಿ ವ್ಯಾಪಾರಿಗಳಿಗೆ ಪರವಾನಗಿ ನೀಡುವಲ್ಲಿ ಮುಂದೆ ಬರುತ್ತಿಲ್ಲ. ಹೀಗಾಗಿ ಬೀದಿಬದಿ ವ್ಯಾಪಾರ ಮಾಡುವವರು ಸಾವಿರಾರು ಸಂಖ್ಯೆಯಲ್ಲಿದ್ದರೂ, ಯೋಜನೆಯಡಿ ಸಾಲ ಪಡೆಯಲು ಅರ್ಹತೆಯಿರುವವರ ಸಂಖ್ಯೆ ತೀರಾ ಕಡಿಮೆಯಾಗಿದೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.