ತೆರೆಯುತ್ತಿಲ್ಲ ಉಪಕೇಂದ್ರದ ಬಾಗಿಲು!
•2015 ಫೆ.2ರಂದು ಅಂದಿನ ಸಚಿವ ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಿದ್ದರು
Team Udayavani, Jul 24, 2019, 11:53 AM IST
ಹಾವೇರಿ: ಬಾಗಿಲು ಬಂದ್ ಆಗಿರುವ ನೀರಲಗಿಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಉಪಕೇಂದ್ರ.
ಹಾವೇರಿ: ಗ್ರಾಮೀಣ ಮಹಿಳೆಯರ ಆರೋಗ್ಯ ಕಾಪಾಡುವ ಉದ್ದೇಶದಿಂದ ಸರ್ಕಾರ ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ ಅಧಿಕಾರಿಗಳ ಅಸಹಕಾರದಿಂದ ಇಂತಹ ಯೋಜನೆಗಳು ಸಫಲವಾಗುತ್ತಿಲ್ಲ.
ತಾಲೂಕಿನ ನೀರಲಗಿಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಉಪಕೇಂದ್ರ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಬಾಗಿಲು ಮುಚ್ಚಿಕೊಂಡೇ ಇದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಆರೋಗ್ಯ ವ್ಯವಸ್ಥೆ ಅಭಿವದ್ಧಿ ಮತ್ತು ಸುಧಾರಣೆ ಯೋಜನೆಯಡಿ 10 ಲಕ್ಷ ರೂ.ಗಳ ಅನುದಾನದಲ್ಲಿ ನಿರ್ಮಿಸಿದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರವನ್ನು 2015 ಫೆ. 2 ರಂದು ಅಂದಿನ ಸಚಿವ ಎಚ್.ಸಿ ಮಹಾದೇವಪ್ಪ ಉದ್ಘಾಟಿಸಿದ್ದರು. ಕಟ್ಟಡವೇನೋ ಉದ್ಘಾಟನೆಗೊಂಡಿದೆ ಆದರೆ, ನಾಲ್ಕು ವರ್ಷಗಳಿಂದ ಈ ಕೇಂದ್ರ ಜನರಿಗೆ ಸಮರ್ಪಕ ಸೇವೆ ನೀಡುವಲ್ಲಿ ವಿಫಲವಾಗಿದೆ
ಈ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರ ಜನಸೇವೆಗೆ ದೊರೆತ ಆರಂಭದಲ್ಲಿ ಓರ್ವ ಶೂಶ್ರುಷಕಿ ಇದ್ದರು. ಅವರು ಕೆಲ ತಿಂಗಳ ನಂತರ ವರ್ಗಾವಣೆಯಾದರು. ಅಂದು ಬಾಗಿಲು ಮುಚ್ಚಿದ ಕೇಂದ್ರ ಇನ್ನೂವರೆಗೂ ತೆರೆದಿಲ್ಲ. ಮತ್ತೂಬ್ಬ ಆರೋಗ್ಯ ಸಹಾಯಕಿಯರು ಇನ್ನೂವರೆಗೂ ಬಂದಿಲ್ಲ. ಹೀಗಾಗಿ ಗ್ರಾಮಸ್ಥರ ಪಾಲಿಗೆ ಈ ಆಸ್ಪತ್ರೆ ಇದ್ದೂ ಇಲ್ಲದಂತಾಗಿದೆ.
ಗರ್ಭಿಣಿಯರು ಪ್ರತಿ ತಿಂಗಳು ಹೆರಿಗೆ ತಪಾಸಣೆ ಜತೆಗೆ ಅವರ ಆರೋಗ್ಯ ರಕ್ಷಣೆ ಹಾಗೂ ಜನಿಸುವ ಮಕ್ಕಳ ಸುಲಲಿತ ಹೆರಿಗೆ ಉದ್ದೇಶದಿಂದ ಸ್ಥಾಪಿಸಿರುವ ಈ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಉಪ ಕೇಂದ್ರ ನಿಷ್ಪ್ರಯೋಜಕವಾಗಿರುವುದು ಸರ್ಕಾರದ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಗ್ರಾಮದ ಬಾಣಂತಿಯರು, ವೃದ್ಧರು ಚಿಕಿತ್ಸೆ ಬೇಕಾದರೆ ಐದು ಕಿ.ಮೀ. ದೂರದ ಮೇವುಂಡಿ ಇಲ್ಲವೇ 13 ಕಿ.ಮೀ. ದೂರದ ಗುತ್ತಲಕ್ಕೆ ಹೋಗಿ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ