ಖಜೂರಿ ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡ ವಿಳಂಬ


Team Udayavani, Jul 24, 2019, 12:36 PM IST

24-July-22

ಆಳಂದ: ಖಜೂರಿ ಗಡಿ ಸರಹದ್ದಿನಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡ.

ಆಳಂದ: ಗಡಿಭಾಗದ ಮಕ್ಕಳ ಶೈಕ್ಷಣಿಕ ಉದ್ದೇಶದಿಂದ 2017ರಂದು ತೆರೆಯಲಾದ ಇಂದಿರಾಗಾಂಧಿ ವಸತಿ ಶಾಲೆಗೆ ಸರ್ಕಾರ ಮಂಜೂರಾತಿ ನೀಡಿದೆ. ಆದರೆ, ಇದುವರೆಗೂ ಸಕಾಲಕ್ಕೆ ಕಟ್ಟಡ, ಕಾಯಂ ಶಿಕ್ಷಕರು, ವಸತಿ ನಿಲಯ ಒದಗಿಸದೆ ದಿನದೊಡುತ್ತಿರುವುದು ಪ್ರವೇಶ ಪಡೆದ ಜಿಲ್ಲೆಯ ವಿವಿಧ ಭಾಗದ 150 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ.

2017-18ರಂದು ಶೈಕ್ಷಣಿಕ ವರ್ಷದಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಟ್ಟಡದಲ್ಲೇ ಇಂದಿರಾಗಾಂಧಿ ವಸತಿ ಶಾಲೆಗೆ 6ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶ ಪಡೆದು ಪ್ರಭಾರಿ ಪ್ರಚಾರ್ಯರು, ಮತ್ತು ಅತಿಥಿ ಶಿಕ್ಷಕರ ನಿಯೋಜನೆ ಮೇಲೆ ತರಗತಿ ಪ್ರಾರಂಭಿಸಿದ್ದಾರೆ. 8ನೇ ತರಗತಿವರೆಗೆ ಬರೋಬ್ಬರಿ 150 ಮಕ್ಕಳು ಓದುತ್ತಿದ್ದಾರೆ. ಆದರೆ ಕಾಯಂ ಶಿಕ್ಷರು, ಸ್ವಂತ ಕಟ್ಟಡ ವಸತಿ ವ್ಯವಸ್ಥೆ, ಸುಸಜ್ಜಿತ ಕಟ್ಟಡವನ್ನು ಸಕಾಲಕ್ಕೆ ಒದಗಿಸದೆ ಇರುವುದು ಸಂಬಂಧಿತ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಸದ್ಯ ಖಜೂರಿ ಗ್ರಾಮದ ಬಾಡಿಗೆ ಕಟ್ಟಡದಲ್ಲೇ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಪ್ರತ್ತೇಕ ವಸತಿ ನಿಲಯ ನಡೆಸಲಾಗುತ್ತಿದೆ. ಕಟ್ಟಡ ಒದಗಿಸಲು ಶಾಲೆ ಆರಂಭದ ವರ್ಷದಲ್ಲೇ ಸರ್ಕಾರ ಕಾಮಗಾರಿಯನ್ನೂ ಶುರು ಮಾಡಿದೆ. ಆದರೆ ಅನುದಾನದ ಕೊರತೆ ಸೇರಿ ಇನ್ನಿತರ ತಾಂತ್ರಿಕ ತೊಂದರೆ ಉಂಟಾಗಿ ಕಟ್ಟಡ ಕಾಮಗಾರಿ ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಒಂದೂವರೆ ವರ್ಷ ವಿಳಂಬವಾಗಿರುವುದು ವಿದ್ಯಾರ್ಥಿಗಳ ಪರದಾಟಕ್ಕೆ ಮುಖ್ಯ ಕಾರಣವಾಗಿದೆ ಎನ್ನಲಾಗಿದೆ.

ಕಟ್ಟಡ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷವಾದರು ಬೇಕು ಎನ್ನುತ್ತಾರೆ ಸ್ಥಳೀಯರು. ಅಲ್ಲಿವರೆಗೆ ವಿದ್ಯಾರ್ಥಿಗಳು ವರ್ಗ ಕೋಣೆ, ವಸತಿ ನಿಲಯ ಶೌಚಾಲಯ, ನೀರಿನ ಪ್ರತ್ಯೇಕ ವ್ಯವಸ್ಥೆಗೆ ಪರದಾಡುವ ಅನಿವಾರ್ಯತೆ ಎದುರಾಗಿದೆ. ಸಂಬಂಧಿತ ಅಧಿಕಾರಿಗಳು ಈ ಕೂಡಲೇ ಗುಣಮಟ್ಟದೊಂದಿಗೆ ಸುಸಜ್ಜಿತ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಶಾಲೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವರೆ ಎಂಬುದನ್ನು ಕಾದು ನೋಡುವಂತೆ ಮಾಡಿದೆ.

ಸುಮಾರು 15 ಕೋಟಿ ರೂ. ವೆಚ್ಚದಲ್ಲಿ 2018ರ ಏಪ್ರಿಲ್ 20ರಂದು ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ. ಪೂರ್ಣಗೊಳಿಸಿ ಶಾಲಾಡಳಿತಕ್ಕೆ ಹಸ್ತಾಂತರಿಸಲು ಇನ್ನೂ ಒಂದುವರ್ಷ ಬೇಕಾಗುತ್ತದೆ.
ಸತೀಶ,
ಗುತ್ತಿಗೆದಾರ ಪರ ಇಂಜಿನಿಯರ್‌

ನಿರ್ಮಾಣ ಹಂತದಲ್ಲಿರುವ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಬೇಗ ದೊರೆತರೆ ಎಲ್ಲ ಮಕ್ಕಳನ್ನು ಸುರಕ್ಷಿತವಾಗಿ ಒಂದೇ ಕಡೆ ಇರಿಸಲು. ಬೋಧನೆ ಮಾಡಲು ಅನುಕೂಲವಾಗುತ್ತದೆ. ಸದ್ಯ ಬಾಡಿಗೆ ವಸತಿ ನಿಲಯ ಮತ್ತು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತಿದೆ. ಇಲ್ಲಿ 150 ಮಕ್ಕಳಿಗೆ ಕೋಣೆಗಳು ಸಾಲುತ್ತಿಲ್ಲ. ಸಮಸ್ಯೆ ನಿವಾರಿಸಬೇಕು.
•ಶಾಲೆ ವಿದ್ಯಾರ್ಥಿಗಳ ಪಾಲಕರು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಈ ಶಾಲೆ ನಡೆಯುತ್ತಿದೆ. ಕಟ್ಟಡ ಕಾಮಗಾರಿಗೆ ಅನುದಾನಕ್ಕೆ ಅಡೆತಡೆಯಾಗಿದ್ದರಿಂದ ವಿಳಂಬವಾಗಿದೆ ಎಂದು ಹೇಳಿದ್ದಾರೆ. ಆದರೂ ಬರುವ ಮಾರ್ಚ್ ನೊಳಗೆ ಕಟ್ಟಡ ಪೂರ್ಣಗೊಳಿಸಿ
ಹಸ್ತಾಂತರಿಸುವ ಕುರಿತು ಭರವಸೆ ನೀಡಿದ್ದಾರೆ.
ಸತೀಶಕುಮಾರ,
ಜಂಟಿ ನಿರ್ದೇಶಕರು ಸಮಾಜ
ಕಲ್ಯಾಣ ಇಲಾಖೆ ಕಲಬುರಗಿ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.